ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ : ಎಚ್‌ ಡಿ ರೇವಣ್ಣ

Date:

Advertisements
  • ಸಿದ್ದರಾಮಯ್ಯ ನನ್ನ ಬಾಂಧವ್ಯ ಬೇರೆ: ರೇವಣ್ಣ
  • ಶಕುನಿಗಳ ಮಾತಿಗೆ ನಾನು ತಲೆಕೆಡಿಸಿಕೊಳ್ಳುವಂತಹ ವ್ಯಕ್ತಿಯಲ್ಲ

ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆಂದು ಯಾರು ಹೇಳಿದ್ದು? ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಮಾಜಿ ಸಚಿವ ಎಚ್‌.ಡಿ ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈಗಾಗಲೇ ದೇವೇಗೌಡರ ಬಳಿ ಹೇಳಿದ್ದೇನೆ. ಅದು ನಮ್ಮಿಬ್ಬರಿಗೇ ಗೊತ್ತು. ದೇವೇಗೌಡರೇ ನಮಗೆ ಸುಪ್ರೀಂ ನಾಯಕರು. ಅವರು ಏನು ಹೇಳುತ್ತಾರೋ ಅದಕ್ಕೆ ಬದ್ಧ” ಎಂದರು.

ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ಸಿದ್ದರಾಮಯ್ಯ ಮತ್ತು ನನ್ನ ಬಾಂಧವ್ಯ ಬೇರೆ. ದೇವೇಗೌಡರು, ಕುಮಾರಣ್ಣಇಲ್ವಾ, ನಾನೇಕೆ ಕಾಂಗ್ರೆಸ್‌ಗೆ ಹೊಗಲಿ. ʼಹಾಸನದಲ್ಲಿ ಶಕುನಿಗಳು ತಲೆಕೆಡಿಸುತ್ತಿದ್ದಾರೆʼ ಎಂದು ಎಚ್‌ಡಿಕೆ ಹೇಳಿದ್ದಾರೆ. ಶಕುನಿಗಳ ಮಾತಿಗೆ ನಾನು ತಲೆಕೆಡಿಸಿಕೊಳ್ಳುವಂತಹ ವ್ಯಕ್ತಿಯಲ್ಲ. ಯಾರೂ ನನ್ನ-ಕುಮಾರಣ್ಣನನ್ನು ಹೊಡೆದಾಡಿಸಲು ಸಾಧ್ಯವಿಲ್ಲ. ಬೆಳಗಾವುದರೊಳಗೆ ಒಂದಾಗ್ತಿವಿ” ಎಂದರು.

Advertisements

“ದೇವೇಗೌಡರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ಆಶೀರ್ವಾದದಿಂದ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಮಾಡಿದ್ದೇನೆ. ಕೆಲವರು ಇವತ್ತು ಚುನಾವಣೆಗೆ ಬಂದರೆ ಮತ್ತೆ ಐದು ವರ್ಷದ ನಂತರ ಇನ್ನೊಂದು ಚುನಾವಣೆ ವೇಳೆ ಬರುತ್ತಾರೆ” ಎಂದು ಟೀಕಿಸಿದರು.

“ಈ ಬಾರಿ 123 ಸೀಟು ಗೆದ್ದು ರಾಜ್ಯದಲ್ಲಿ ನೂರಕ್ಕೆ ನೂರು ನಮ್ಮ ಸರ್ಕಾರ ಬರುತ್ತೆ. ಜೆಡಿಎಸ್ ಬಿಟ್ಟು ಯಾರೂ ಸರ್ಕಾರ ಮಾಡಲು ಆಗಲ್ಲ” ಎಂದು ಭವಿಷ್ಯ ನುಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಎಸ್‌ಎಫ್‌ಐ ಹೋರಾಟಕ್ಕೆ ಮಣಿದ ಅಧಿಕಾರಿಗಳು; ಹಾಸ್ಟೆಲ್‌ ವಾರ್ಡನ್‌ ಚಂದ್ರಕಲಾ ವರ್ಗಾವಣೆ

ಎಸ್‌ಎಫ್ಐ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳ ಹೋರಾಟಕ್ಕೆ ಮಣಿದ ಅಧಿಕಾರಿಗಳು, ಹಾಸನ...

ಹಾಸನ | ವಸತಿ ನಿಲಯದ ಅವ್ಯವಸ್ಥೆ ಪ್ರಶ್ನಿಸಿದರೆ ಹಾಸ್ಟೆಲ್ ವಾರ್ಡನ್‌ನಿಂದ ಬೆದರಿಕೆ: ವಿದ್ಯಾರ್ಥಿನಿಯರ ಆರೋಪ

ಹಾಸನ ಜಿಲ್ಲೆ ಅಭಿವೃದ್ದಿಯಲ್ಲಿ ಮುಂದುವರಿದಿದೆ ಎಂದು ಹೆಮ್ಮೆಯಿಂದ ಇಲ್ಲಿವರೆಗೂ ಆಳುವ ರಾಜಕೀಯದವರು...

ಹಾಸನ | ‘ಪ್ರಜ್ವಲ್ ರೇವಣ್ಣ ಪ್ರಕರಣ; ನಮ್ಮ ಮುಂದಿನ ನಡೆ ಏನು?’ ಕುರಿತು ಚರ್ಚೆ

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 'ಪ್ರಜ್ವಲ್ ರೇವಣ್ಣ ಪ್ರಕರಣ;...

ಹಾಸನ | ಪ್ರಜ್ವಲ್‌ನನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡಿದ ಎಸ್‌ಐಟಿ

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್...

Download Eedina App Android / iOS

X