ನಮ್ಮ ಬೆಂಬಲವಿಲ್ಲದೆ ಯಾರೂ ಸರ್ಕಾರ ರಚಿಸಲು ಸಾಧ್ಯವಿಲ್ಲ: ಗಾಲಿ ಜನಾರ್ದನ ರೆಡ್ಡಿ

Date:

Advertisements

ತಮ್ಮ ಹೊಸ ಪಕ್ಷ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ವು ಉತ್ತಮ ಜನಾಶೀರ್ವಾದವನ್ನು ಪಡೆಯುತ್ತಿದೆ. ನಮ್ಮ ಪಕ್ಷದ ಬೆಂಬಲವಿಲ್ಲದೆ ಯಾರೂ ಮುಂದಿನ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಪಕ್ಷದ ಸಂಸ್ಥಾಪಕ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಖಜ್ಜಿಡೋಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, “ಸರ್ಕಾರ ರಚಿಸಲು ಬಿಜೆಪಿ ನಮ್ಮ ಬೆಂಬಲ ಕೇಳಿದರೆ, ಬೆಂಬಲ ನೀಡುತ್ತೇವೆ” ಎಂದು ಹೇಳಿದ್ದಾರೆ.

“ಬಿಜೆಪಿ ಮಾತ್ರವಲ್ಲ, ಕಾಂಗ್ರೆಸ್ ಅಥವಾ ಜೆಡಿಎಸ್ – ಯಾರೇ ಆಗಿರಲಿ, ನಮ್ಮ ಪಕ್ಷದ ಭರವಸೆಗಳನ್ನು ಯಾರು ಈಡೇರಿಸುತ್ತಾರೋ ಅವರನ್ನು ನಾವು ಬೆಂಬಲಿಸುತ್ತೇವೆ” ಎಂದು ರೆಡ್ಡಿ ತಿಳಿಸಿದ್ದಾರೆ.

Advertisements

“ಯುವ ಮತದಾರರು, ಉದ್ಯಮಿಗಳು ಮತ್ತು ವಿದ್ಯಾವಂತರು ನಮ್ಮನ್ನು ಬೆಂಬಲಿಸುತ್ತಿದ್ದಾರೆ. ಚುನಾವಣೆಯಲ್ಲಿ ನಮ್ಮ ಪಕ್ಷವು ಉತ್ತಮ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತದೆ. ನಮ್ಮಲ್ಲಿ ಬೇರೆ ಪಕ್ಷಗಳಿಂದ ವಲಸೆ ಬಂದ ನಾಯಕರು ಬಹಳ ಕಡಿಮೆ ಇದ್ದಾರೆ. ಆದರೆ, ವಿದ್ಯಾವಂತರನ್ನು ಸೆಳೆಯುವಲ್ಲಿ ನಾವು ಯಶಸ್ವಿಯಾಗಿದ್ದೇವೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸಿದ್ದರಾಮಯ್ಯ ಹೇಳಿಕೆ ತಿರುಚಿದ ಎನ್‌ಡಿಟಿವಿ: ಅದಾನಿ ಟಿವಿಯಿಂದಲೂ ನೀವು ಬಚಾವಾಗಲ್ಲ ಎಂದ ಸುರ್ಜೇವಾಲ

“ಪಕ್ಷವು 50 ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದೆ. 30-35 ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ. ಈಗಾಗಲೇ 14 ಅಭ್ಯರ್ಥಿಗಳನ್ನು ಘೋಷಿಸಿದೆ. ಏಪ್ರಿಲ್ 10 ರೊಳಗೆ ಉಳಿದ ಹೆಸರುಗಳನ್ನು ಪ್ರಕಟಿಸಲಾಗುವುದು” ಎಂದು ಅವರು ಹೇಳಿದ್ದಾರೆ.

“ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು 2028ರ ವಿಧಾನಸಭಾ ಚುನಾವಣೆಯತ್ತ ಗಮನಹರಿಸುತ್ತಿದ್ದೇವೆ. ನಮ್ಮದು ಜಾತ್ಯತೀತ ತತ್ವಗಳನ್ನು ಹೊಂದಿರುವ ಪಕ್ಷ. ಆದ್ದರಿಂದ ನಾವು ದಲಿತ, ಮುಸ್ಲಿಂ ಮತ್ತು ಇತರ ಸಮುದಾಯಗಳ ಜನರನ್ನು ಸೆಳೆಯುತ್ತಿದ್ದೇವೆ,” ಎಂದು ರೆಡ್ಡಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X