ಚುನಾವಣೆ 2023 | ಶಿವಾಜಿನಗರ ಜೆಡಿಎಸ್‌ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

Date:

Advertisements
  • ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ವ್ಯಕ್ತಿಯಿಂದ ನಾಮಪತ್ರ
  • ಮೂರು ಗಂಟೆ ತಡವಾಗಿ ನಾಮಪತ್ರ ಸಲ್ಲಿಸಿದ ಮತ್ತೋರ್ವ ಅಭ್ಯರ್ಥಿ

ಬೆಂಗಳೂರಿನ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾದ ಶಿವಾಜಿನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ‌ಅಬ್ದುಲ್ ಜಫರ್ ಅಲಿ ಮತ್ತು ಮಂಜುನಾತ್‌ ಅವರ ನಾಮಪತ್ರಗಳು ತಿರಸ್ಕೃತವಾಗಿವೆ.

ಕೆಲವು ವರ್ಷಗಳಿಂದ ವಿದೇಶದಲ್ಲಿ ನೆಲೆಸಿದ್ದ ಜಫರ್ ಅಲಿ, ಇತ್ತಿಚಿಗಷ್ಟೇ ಬೆಂಗಳೂರಿಗೆ ಹಿಂತಿರುಗಿದ್ದರು. ಇವರ ಹೆಸರು ಯಾವ ಕ್ಷೇತ್ರದ ಮತದಾರರ ಪಟ್ಟಿಯಲ್ಲೂ ಇಲ್ಲ. ಆದ್ದರಿಂದ ಚುನಾವಣಾ ಆಯೋಗವು ನಾಮಪತ್ರವನ್ನು ತಿರಸ್ಕರಿಸಿದೆ. ಈ ಬಗ್ಗೆ ಶಿವಾಜಿನಗರ ಆರ್‌ ಓ ಬಸವರಾಜ್ ಸೋಮಣ್ಣನವರ್ ದೃಢಪಡಿಸಿದ್ದಾರೆ.

ಜಫರ್ ಅಲಿ ಅವರು ಏ. 20 ರಂದು ಮತದಾರರ ಗುರುತಿನ ಚೀಟಿಗೆ ತಮ್ಮ ಹೆಸರನ್ನು ಸೇರಿಸಲು ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಸಲ್ಲಿಸಲು ವಿಳಂಬವಾಗಿದ್ದರಿಂದ ಜಫರ್ ಅಲಿ ಹೆಸರು ಸೇರ್ಪಡೆಗೊಂಡಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 25 ಸಾವಿರ ಪೌರ ಕಾರ್ಮಿಕರ ಕಾಯಂ; ಸುರ್ಜೇವಾಲ ಭರವಸೆ

ಇದರ ಬಗ್ಗೆ ಅರಿವು ಹೊಂದಿದ್ದ ಜೆಡಿಎಸ್ ಮುಂಜಾಗ್ರತ ಕ್ರಮವಾಗಿ ಆರ್ ಮಂಜುನಾಥ್ ಎಂಬವವರನ್ನು ಕೂಡ ಕಣಕ್ಕೆ ಇಳಿಸಿತ್ತು. ಆದರೆ, ಮಂಜುನಾಥ್‌ ಅವರು ನಾಮಪತ್ರವನ್ನು 3 ಗಂಟೆ ತಡವಾಗಿ ಸಲ್ಲಿಸಿಕೆ ಮಾಡಿದ್ದರಿಂದ ಮಂಜುನಾಥ್ ಅವರ ನಾಮಪತ್ರವೂ ತಿರಸ್ಕೃತಗೊಂಡಿದೆ. ಹೀಗೆ ಇಬ್ಬರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗದ ಕಾರಣ ಜೆಡಿಎಸ್‌ಗೆ ಮುಖಭಂಗ ಉಂಟಾಗಿದೆ.

ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಹಾಲಿ ಶಾಸಕ ರಿಜ್ವಾನ್ ಅರ್ಷದ್ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿಯು ದಲಿತ ಅಭ್ಯರ್ಥಿ ಎನ್ ಚಂದ್ರ ಅವರನ್ನು ಕಣಕ್ಕಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ...

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ...

ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ...

ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ...

Download Eedina App Android / iOS

X