ಉರಿ–ನಂಜೇಗೌಡರ ವಿಚಾರದಲ್ಲಿ ಇನ್ಮೇಲೆ ಯಾರೂ ಮಾತನಾಡಬಾರದು: ನಿರ್ಮಲಾನಂದನಾಥ ಶ್ರೀ ತಾಕೀತು

Date:

Advertisements
  • ಉರಿಗೌಡ-ನಂಜೇಗೌಡ ವಿಚಾರವಾಗಿ ರಾಜಕಾರಣಿಗಳು ಅನಗತ್ಯವಾಗಿ ಮಾತನಾಡುವುದನ್ನು ನಿಲ್ಲಿಸಬೇಕು
  • ಸಮಾಜದ ಬಗ್ಗೆ ನಕಾರಾತ್ಮಕ ವಿಚಾರವನ್ನು ಬಿಂಬಿಸುವ ರೀತಿ ನಡೆಯುತ್ತಿದೆ. ಇದಕ್ಕೆ ಕೊನೆ ಹಾಡಬೇಕಿದೆ

ಇತಿಹಾಸದ ಪೂರ್ಣ ದಾಖಲೆಗಳು ಲಭ್ಯವಿಲ್ಲದ ವಿಚಾರಗಳ ಮೇಲೆ ನಾವು ಮಾತನಾಡುವುದು ಅಥವಾ ಆ ವಿಚಾರವನ್ನು ಬೆಳೆಸುವಂತಹ ಹೇಳಿಕೆಗಳನ್ನು ಯಾರೂ ಕೊಡಬಾರದು ಎಂದು ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ವಿವಾದಿತ ವಿಚಾರದ ಬಗ್ಗೆ ನಾಗರಿಕ ಸಮಾಜಕ್ಕೆ ನೀಡಿರುವ ಸಂದೇಶದಲ್ಲಿ ಉರಿಗೌಡ ಹಾಗೂ ನಂಜೇಗೌಡರ ವಿಚಾರವಾಗಿ ರಾಜಕಾರಣಿಗಳು ಅನಗತ್ಯವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಶ್ರೀಗಳು ಹೇಳಿದ್ದಾರೆ.

ಯಾವುದೇ ವಿಚಾರದ ಬಗ್ಗೆ ಪೂರ್ಣ ಮಾಹಿತಿ ಇಲ್ಲದೆ ಯಾರೇ ಆಗಲಿ ಮಾತನಾಡುವುದು ಸರಿಯಲ್ಲ. ಈ ಹಿಂದೆ ಈ ಬಗ್ಗೆ ಮಾತನಾಡಿರುವ ಸಿ.ಟಿ. ರವಿ, ಅಶ್ವತ್ಥನಾರಾಯಣ, ಗೋಪಾಲಯ್ಯ ಅವರನ್ನೂ ಸೇರಿದಂತೆ ಯಾರು ಯಾರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೋ ಅವರಿಗೆ ಈ ಬಗ್ಗೆ ಅಗತ್ಯ ಇತಿಹಾಸದ ಮಾಹಿತಿಯನ್ನು ಮನದಟ್ಟು ಮಾಡಲಾಗಿದೆ. ಹೀಗಾಗಿ ಅವರು ಸುಮ್ಮನಾಗುತ್ತಾರೆ ಹಾಗೂ ಸುಮ್ಮನಾಗಿದ್ದಾರೆ ಎಂದುಕೊಂಡಿದ್ದೇನೆ.

ಕಲ್ಪನೆ ಮಾಡಿಕೊಂಡು ಬರೆಯುವುದು ಕಾದಂಬರಿ ಆಗುತ್ತದೆ. ಶಾಸನ ಹಾಗೂ ಇತಿಹಾಸ ಎನ್ನುವುದರ ಮೇಲೆ ರಚಿತವಾದ್ದು ಮುಂದಿನ ಪೀಳಿಗೆಗೆ ಶಕ್ತಿಯಾಗುತ್ತದೆ. ಉರಿ-ನಂಜೇಗೌಡರ ವಿಚಾರದಲ್ಲಿ ಇಂತಹ ಯಾವುದೇ ದಾಖಲೆಗಳು ಇದುವರೆಗೂ ಲಭ್ಯವಾಗಿಲ್ಲ. ಹೀಗಾಗಿ ಈ ವಿಚಾರದಲ್ಲಿ ದಾಖಲೆ ಇಲ್ಲದೆ ಮಾತನಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳ ಮೂಲಕ ಯುವ ಸಮುದಾಯ ಹಾಗೂ ಸಮಕಾಲೀನ ಸಮಾಜದಲ್ಲಿ ಗೊಂದಲ ಮೂಡಿಸಬಾರದು, ಸಮುದಾಯಕ್ಕೂ ಧಕ್ಕೆ ತರಬಾರದು ಎಂದು ಶ್ರೀಗಳು ಹೇಳಿದರು.

ಉರಿ-ನಂಜೇಗೌಡರ ವಿಚಾರದಲ್ಲಿ ಇದುವರೆಗೆ ಅಗತ್ಯ ಮಾಹಿತಿ ಇಲ್ಲ. ಹೀಗಾಗಿ ಅದಕ್ಕೆ ಸಂಬಂಧಪಟ್ಟ ದಾಖಲೆಗಳೇನಾದರೂ ಲಭ್ಯವಾದಲ್ಲಿ ಅದನ್ನು ಆದಿಚುಂಚನಗಿರಿ ಶ್ರೀಮಠಕ್ಕೆ ತಲುಪಿಸಿ, ನಾವು ಅದರ ಬಗ್ಗೆ ಮುಂದಿನ ಅಧ್ಯಯನ ಮಾಡಿಸಿ ನಿಖರತೆ ಪಡೆದುಕೊಳ್ಳುವ ಕಾರ್ಯ ಮಾಡಿಕೊಡುತ್ತೇವೆ. ಅಲ್ಲಿಯ ವರೆಗೂ ನಿಖರತೆ ಇಲ್ಲದ ವಿಚಾರದ ಬಗ್ಗೆ ಯಾರೂ ಮಾತನಾಡಬೇಡಿ ಎಂದು ನಿರ್ಮಲಾನಂದನಾಥ ಶ್ರೀಗಳು ಹೇಳಿದರು.

ವಿವಾದಿತ ವಿಚಾರ ಒಂದು ಸಮಾಜದ ಬಗ್ಗೆ ನಕಾರಾತ್ಮಕ ವಿಚಾರವನ್ನು ಬಿಂಬಿಸುವ ರೀತಿ ನಡೆಯುತ್ತಿದೆ. ಇದಕ್ಕೆ ಕೊನೆ ಹಾಡಬೇಕಿದೆ. ಹೀಗಾಗಿ ಈ ವಿಚಾರದ ಬಗ್ಗೆ ಯಾರೂ ಮಾತನಾಡದಿರುವುದು ಒಳಿತು ಎಂದು ಶ್ರೀಗಳು ಆಗ್ರಹಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X