ಹುಬ್ಬಳಿ-ಧಾರವಾಡ ಪೂರ್ವ | ಗೊಂದಲ ಸೃಷ್ಟಿಸಿರುವ ಬಿಜೆಪಿ ಅಭ್ಯರ್ಥಿಯ ಜಾತಿ ದಾಖಲಾತಿ

Date:

Advertisements
  • ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಬೆಂಬಲಿತ ಅಭ್ಯರ್ಥಿ ಡಾ. ಕ್ರಾಂತಿಕಿರಣ
  • ಸರ್ಕಾರಿ ದಾಖಲೆಯಲ್ಲಿ ಒಕ್ಕಲಿಗ, ಟಿಕೆಟ್ ಕೊಟ್ಟಿರುವುದು ಮೀಸಲು ಕ್ಷೇತ್ರಕ್ಕೆ

ಧಾರವಾಡ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಐದು ಕ್ಷೇತ್ರದ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದು, ಹುಬ್ಬಳಿ-ಧಾರವಾಡ ಪೂರ್ವ ಎಸ್ಸಿ ಮೀಸಲು ಕ್ಷೇತ್ರಕ್ಕೆ ನರರೋಗ ತಜ್ಞ ಡಾ. ಕ್ರಾಂತಿ ಕಿರಣ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಆದರೆ, ಡಾ. ಕ್ರಾಂತಿಕಿರಣ ಅವರ ಜಾತಿ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ದಾಖಲೆಯೊಂದು ಗೊಂದಲ ಸೃಷ್ಟಿಸಿದೆ.

ಹುಬ್ಬಳಿ-ಧಾರವಾಡ ಪೂರ್ವ ಎಸ್ಸಿ ಮೀಸಲು ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷ ಒಕ್ಕಲಿಗ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಿತಾ? ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಡಾ. ಕ್ರಾಂತಿಕಿರಣ ಅವರ ಸರ್ಕಾರಿ ನೌಕರಿ ಮಾಹಿತಿ ಕುರಿತು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ನಿರ್ದೇಶಕರು ಸಹಿ ಮಾಡಿರುವ ದಾಖಲೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಡಾ. ಕ್ರಾಂತಿಕಿರಣ ಅವರ ಜಾತಿ ʼಒಕ್ಕಲಿಗʼ ಎಂದು ನಮೂದಾಗಿದೆ. ಇವರಿಗೆ ಟಿಕೆಟ್ ಕೊಡಿಸುವಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಸಕ್ತಿ ವಹಿಸಿದ್ದರು ಎನ್ನುವುದು ಕೂಡ ಚರ್ಚೆಯಾಗುತ್ತಿದೆ.

Advertisements

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡುವುದು ಜನಪ್ರತಿನಿಧಿ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದ್ದು, ಡಾ. ಕ್ರಾಂತಿ ಕಿರಣ ಅವರು ಒಕ್ಕಲಿಗರಾಗಿದ್ದುಕೊಂಡು ಅವರು ಹೇಗೆ ಎಸ್ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ.

ಜಾತಿ ದಾಖಲಾತಿ ಗೊಂದಲ ವಿಚಾರವಾಗಿ ಡಾ. ಕ್ರಾಂತಿಕಿರಣ ಅವರನ್ನು ಈ ದಿನ. ಕಾಮ್‌, “ನಾನು ಪರಿಶಿಷ್ಟ ಜಾತಿಗೆ ಸೇರಿದ್ದೇನೆ. ನನ್ನ ಜಾತಿ ಬಗ್ಗೆ ನನಗೆ ಯಾವುದೇ ಗೊಂದಲಗಳು ಇಲ್ಲ. ಇಂತಹದೊಂದು ನಕಲಿ ದಾಖಲಾತಿ ಹೇಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂಬುದು ನನಗೆ ಆಶ್ಚರ್ಯವಾಗಿದೆ. ನನ್ನ ಜಾತಿಯ ಬಗ್ಗೆ ಅನುಮಾನ ಇದ್ದವರು ಸರ್ಕಾರಿ ದಾಖಲಾತಿಗಳನ್ನು ಪರಿಶೀಲಿಸಬಹುದು” ಎಂದು ಸ್ಪಷ್ಟಪಡಿಸಿದರು.

ಹುಬ್ಬಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಗ್ಗೆ ಮಾತನಾಡುವುದಾದರೆ, ಛಲವಾದಿ ಸಮುದಾಯಕ್ಕೆ ಸೇರಿದ ಪ್ರಸಾದ ಅಬ್ಬಯ್ಯ 2013 ಮತ್ತು 2018ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದಾರೆ. 2008ರಲ್ಲಿ ಬಿಜೆಪಿಯ ವೀರಭದ್ರಪ್ಪ ಹಾಲಹರವಿ (ಮಾದಿಗ ಜನಾಂಗ) ಅವರು ಗೆದ್ದು ಶಾಸಕರಾಗಿದ್ದರು. 2018ರಲ್ಲಿ ಬಿಜೆಪಿಯಿಂದ ಚಂದ್ರಶೇಖರ ಗೋಕಾಕ್ ಸ್ಪರ್ಧಿಸಿ ಸೋಲು ಕಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ| 2023ರ ಐಟಿ ನಿಯಮಗಳು- ಅಭಿವ್ಯಕ್ತಿ ಸ್ವಾತಂತ್ರ್ಯ ಹಣಿಯುವ ಮತ್ತೊಂದು ಹುನ್ನಾರ?

ಮಾಜಿ ಸಿಎಂ ಜಗದೀಶ ಶೆಟ್ಟರ್ ಪ್ರತಿನಿಧಿಸುವ ಸೆಂಟ್ರಲ್ ಹಾಗೂ ಕಲಘಟಗಿ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಬಾಕಿ ಉಳಿಸಿಕೊಳ್ಳಲಾಗಿದೆ. ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕರು ಇರುವ ಕುಂದಗೋಳ ಹಾಗೂ ಹುಬ್ಬಳಿ, ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಹುಬ್ಬಳಿ-ಧಾರವಾಡ ಸೆಂಟ್ರಲ್ ಹಾಗೂ ಕಲಘಟಗಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾಗಲೂ ಆ ಎರಡೂ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಸೆಸ್ಪೆನ್ಸ್ ಇಡಲಾಗಿದೆ.

ಹುಬ್ಬಳಿ, ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ಬಿಜೆಪಿ ಹಾಲಿ ಶಾಸಕ ಅರವಿಂದ ಬೆಲ್ಲದ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಹಾಲಿ ಶಾಸಕ ಅಮೃತ ದೇಸಾಯಿ ಹಾಗೂ ನವಲಗುಂದ ಕ್ಷೇತ್ರಕ್ಕೆ ಹಾಲಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಕುಂದಗೋಳ ಕ್ಷೇತ್ರಕ್ಕೆ ಎಂ.ಆರ್.ಪಾಟೀಲ ಅವರ ಹೆಸರು ಅಂತಿಮಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X