ಕನ್ನಡ ದ್ರೋಹಿ ಬಿಜೆಪಿ ಸರ್ಕಾರಕ್ಕೆ ಕನ್ನಡಿಗರು ತೆರಿಗೆ ಕಟ್ಟಲ್ಲ ಅಂದರೆ ಏನು ಮಾಡ್ತೀರಿ: ಪ್ರಕಾಶ್ ರಾಥೋಡ್ ಪ್ರಶ್ನೆ

Date:

  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹೇಳಿಕೆ ಖಂಡಿಸಿದ ಪ್ರಕಾಶ್ ರಾಥೋಡ್
  • ಒಕ್ಕೂಟ ತತ್ವದ ಕಾರಣದಿಂದ ಈ ಕ್ಷಣಕ್ಕೂ ಕರ್ನಾಟಕ ವಜ್ರದಷ್ಟು ಗಟ್ಟಿಯಾಗಿದೆ

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ? ಕನ್ನಡಿಗರು ಕನ್ನಡ ದ್ರೋಹಿಯಾದ ಬಿಜೆಪಿ ಸರ್ಕಾರಕ್ಕೆ ತೆರಿಗೆ ಹಣ ನೀಡುವುದಿಲ್ಲ ಎಂದು ಹಠಕ್ಕೆ ಬಿದ್ದರೆ ಅದರ ಪರಿಣಾಮ ಏನಾಗಬಹುದು ಎನ್ನುವ ಕಲ್ಪನೆ ನಿಮಗೆ ಇದೆಯೇ? ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ, `ಕೇಂದ್ರದಿಂದ ಪ್ರಧಾನಿ ಮೋದಿ ಕಳುಹಿಸುವ ಹಣ ಪಡೆಯಲು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬೇಕು’ ಎಂದು ಹೇಳಿದ್ದೀರಿ. ಇದು ಭಾರತದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಅಹಂಕಾರದ ಮಾತಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ನಿಮ್ಮದು ಒಕ್ಕೂಟ ಸರ್ಕಾರ ಎನ್ನುವುದನ್ನು ಮರೆತು ಕನ್ನಡಿಗರಿಗೆ ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದೀರಿ. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ಕೇಂದ್ರದಿಂದ ಹಣ ಬರುವುದಿಲ್ಲ ಎನ್ನುವ ಅರ್ಥದಲ್ಲಿ ನಿಮ್ಮ ಮಾತು ಧ್ವನಿಸುತ್ತಿದೆ” ಎಂದು ಪ್ರಕಾಶ್ ರಾಥೋಡ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಭಾರತದ ಅಡಿಪಾಯ ಒಕ್ಕೂಟ ತತ್ವದ ಕಾರಣದಿಂದ ಈ ಕ್ಷಣಕ್ಕೂ ವಜ್ರದಷ್ಟು ಗಟ್ಟಿಯಾಗಿದೆ. ಇದನ್ನು ದುರ್ಬಲಗೊಳಿಸುವ ಪ್ರಯತ್ನ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ನಡೆಯುತ್ತಿದೆ. ಕರ್ನಾಟಕದ ಬ್ಯಾಂಕ್‌ಗಳನ್ನು ನುಂಗಿದಿರಿ. ಅದೇ ರೀತಿ ಕನ್ನಡಿಗರ ಪಾಲಿನ ಉದ್ಯೋಗದ ಅವಕಾಶಗಳು ಮತ್ತು ಬದುಕಿನ ಅವಕಾಶಗಳನ್ನು ನಿರಂತರವಾಗಿ ಕಿತ್ತುಕೊಳ್ಳುತ್ತಲೇ ಇದ್ದೀರಿ. ಈಗ ಕನ್ನಡದ ಮಕ್ಕಳು ಕುಡಿಯುವ ನಂದಿನಿ ಹಾಲಿನ ಮೇಲೂ ನಿಮ್ಮ ಕಣ್ಣು ಬಿದ್ದಿದೆ. ಇವೆಲ್ಲದರ ಆಚೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೆ ಮಾತ್ರ ಕೇಂದ್ರದ ಅನುದಾನ ಎನ್ನುವ ಅರ್ಥದಲ್ಲಿ ಮಾತನಾಡಿ ಬೆದರಿಕೆ ಹಾಕಿರುವುದನ್ನು ಕನ್ನಡಿಗರು ಎಂದಿಗೂ ಸಹಿಸುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಅರ್ಜಿ ವಜಾ ಮಾಡಿದ ಹೈಕೋರ್ಟ್

“ನಿಮ್ಮ ಬಿಜೆಪಿಗೆ ಇರುವುದು ನೆನ್ನೆ ಮೊನ್ನೆಯ ಇತಿಹಾಸ. ಕನ್ನಡ ಸಂಸ್ಕೃತಿ ಮತ್ತು ಕನ್ನಡತನ ಹಾಗೂ ಕನ್ನಡ ನೆಲಕ್ಕೆ ಸಾವಿರಾರು ವರ್ಷಗಳ ಇತಿಹಾಸ, ಚರಿತ್ರೆ ಇದೆ. ಇದನ್ನು ಕೆಣಕುವ ಪ್ರಯತ್ನ ಮಾಡಬೇಡಿ. ನೀವು ಹಿಮಾಚಲ ಪ್ರದೇಶದಿಂದ ಬಂದು ಕನ್ನಡಿಗರ ಸಹನೆ ಮತ್ತು ಸ್ವಾಭಿಮಾನ ಕೆಣಕಬಾರದು. ನಿಮ್ಮ ರಾಜ್ಯದಲ್ಲೇ ನೀವು ನಿಮ್ಮ ಬಿಜೆಪಿಯನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇನ್ನು ಕರ್ನಾಟಕಕ್ಕೆ ಬಂದು ಈಗಾಗಲೇ ತುರ್ತುನಿಗಾ ಘಟಕದಲ್ಲಿ ಏದುಸಿರು ಬಿಡುತ್ತಿರುವ ಬಿಜೆಪಿಯ ಕುತ್ತಿಗೆ ಹಿಚುಕಬೇಡಿ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಲೋಕಸಭಾ | ಮುಗಿದ ನಾಮಪತ್ರ ಭರಾಟೆ, ಶುರುವಾಗಿ ಮತಬೇಟೆ

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಮುಕ್ತಾಯವಾಗಿದೆ. ಬೀದರ್‌ ಲೋಕಸಭಾ ಕ್ಷೇತ್ರದ...

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....