ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ; ಸುಳಿವು ನೀಡಿದ ಪ್ರಲ್ಹಾದ್ ಜೋಶಿ

Date:

Advertisements
  • ವರಿಷ್ಠರ ಸಭೆ ಬಳಿಕ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ
  • ಲೋಕಸಭೆ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುವೆ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ, ಅದರಿಂದ ಹೊರಬರಲು ಹೊಸ ನಾಯಕನನ್ನು ಹುಡುಕಿಕೊಳ್ಳಲೇಬೇಕಾದ ಅನಿವಾರ್ಯತೆಯಲ್ಲಿ ನಿಂತಿದೆ. ಇದಕ್ಕೆ ಪೂರಕವೆನ್ನುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಕೇಂದ್ರದ ವರಿಷ್ಠರು ನಿರ್ಧರಿಸುತ್ತಾರೆ. ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಪಕ್ಷ ಪುಟಿದು ನಿಲ್ಲಬೇಕಿದೆ. ಅದಕ್ಕಾಗಿನ ಅಗತ್ಯ ಕಾಯಕಲ್ಪ ಮಾಡಲಾಗುತ್ತದೆ. ರಾಜ್ಯದಲ್ಲಿ ಅತಿ ಶೀಘ್ರ ರಾಷ್ಟ್ರೀಯ ಪ್ರಮುಖರ ಸಭೆಯೊಂದಿದ್ದು, ಅಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ” ಎಂದು ಅವರು ಹೇಳಿದರು.

“ಪಕ್ಷದ ಸೋಲಿನ ಪರಾಮರ್ಶೆಯನ್ನು ಮಾಡಲಾಗುತ್ತಿದೆ. ಈ ಸೋಲು ಕೇವಲ ವ್ಯಕ್ತಿಯೊಬ್ಬರ ಸೋಲಲ್ಲ, ಇದರ ಹೊಣೆಯನ್ನು ಪಕ್ಷ ಹೊರುತ್ತದೆ. ಎಲ್ಲಿ ಏನು ತಪ್ಪಾಗಿದೆ ಎಂದು ನಾವು ವಿಮರ್ಶೆ ಮಾಡುತ್ತೇವೆ” ಎಂದು ಜೋಶಿ ಹೇಳಿದರು.

Advertisements

“ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಬೇರೆ, ಲೋಕಸಭೆ ಚುನಾವಣೆ ಬೇರೆ. ಬೇರೆ ಬೇರೆ ವಿಚಾರಗಳ ಮೇಲೆ ಈ 2 ಚುನಾವಣೆಗಳು ನಡೆಯುತ್ತವೆ. ಈಗ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ 330ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ” ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ: ಬಸವರಾಜ ಬೊಮ್ಮಾಯಿ‌

ಈ ಚುನಾವಣೆಯಲ್ಲಿನ ಬಿಜೆಪಿ ಸೋಲು ನಿಜಕ್ಕೂ ಬೇಸರ ತರಿಸಿದೆ. ಪಕ್ಷದ ಈ ಸೋಲನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಶ್ರಮ ವಹಿಸುತ್ತೇವೆ ಎಂದು ಅವರು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X