‘ನೀನು ಮೋಹನ್ನಾ ಅಥವಾ ಮಹಮ್ಮದ್ದಾ’: ಅವಿಭಕ್ತ ಕುಟುಂಬಗಳು ಹಿಂದೂಗಳಲ್ಲವೇ ಎಂದು ಪ್ರತಾಪ್ ಸಿಂಹಗೆ ಕುಟುಕಿದ ಕಾಂಗ್ರೆಸ್‌

Date:

Advertisements

ಟ್ವಿಟರ್‌ ಬಳಕೆದಾರರೊಬ್ಬರಿಗೆ ‘ನೀನು ಮೋಹನ್ನಾ ಅಥವಾ ಮಹಮ್ಮದ್ದಾ’ ಎಂದು ಕೇಳುವ ಮೂಲಕ ಮೈಸೂರು ಸಂಸದ ಪ್ರತಾಪ್ ಸಿಂಹ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಪ್ರತಾಪ್‌ ಸಿಂಹ ಅವರ ಟ್ವೀಟ್‌ವೊಂದಕ್ಕೆ ಮೋಹನ್ ಎಂಬುವವರು, “ನಮ್ಮ ಮನೆಯಲ್ಲಿ 17 ಮತಗಳಿವೆ ಅವೆಲ್ಲವೂ ಸಿದ್ದರಾಮಣ್ಣಂಗೆ ಹಾಕುತ್ತೇವೆ ಪ್ರತಾಪಣ್ಣ” ಎಂದು ಕಾಮೆಂಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಸಂಸದ ಪ್ರತಾಪ್ ಸಿಂಹ, “17 ಮತಗಳು? ಅಣ್ತಮ್ಮ ನಿನ್ನ ಹೆಸರು ಮೋಹನ್ನಾ ಅಥವಾ ಮಹಮ್ಮದ್ದಾ” ಎಂದು ಪ್ರಶ್ನಿಸಿದ್ದರು.

Advertisements

ಓರ್ವ ಸಂಸದನಾಗಿ ತನ್ನ ಸ್ಥಾನದ ಘನತೆ ಮೆರೆಯಬೇಕಾಗಿದ್ದನ್ನು ಬಿಟ್ಟು ಕ್ಷುಲ್ಲಕವಾಗಿ ಮಾತನಾಡಿರುವುದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಸದಾ ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಬಿಜೆಪಿ ನಾಯಕನ ಪ್ರಶ್ನೆಗೆ ನೆಟ್ಟಿಗರೇ ಉತ್ತರ ಕೊಟ್ಟಿರುವುದು ಸುದ್ದಿ ಆಗಿದೆ.

ಈ ಸುದ್ದಿ ಓದಿದ್ದೀರಾ? ಅಂಬೇಡ್ಕರ್‌ಗೆ ಅವಮಾನ ಮಾಡಿದ ಬಿಜೆಪಿ ಅಭ್ಯರ್ಥಿ, ಶಾಸಕ ರಘು

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಪ್ರತಾಪ್ ಸಿಂಹ ಅವರೇ, ನಿಮಗೆ ಅರ್ಹತೆ ಇದೆಯೋ ಇಲ್ಲವೋ ಅಂತೂ ನೀವು ಸಂಸದರಾಗಿದ್ದೀರಿ. ಕಡೇ ಪಕ್ಷ ಆ ಜವಾಬ್ದಾರಿ ಅರಿತು ಮಾತನಾಡಿ” ಎಂದು ಕುಟುಕಿದೆ.

“ಮಾತೆತ್ತಿದರೆ ಸಂಸ್ಕೃತಿ ಸಂಸ್ಕಾರದ ಪಾಠ ಮಾಡುವ ನಿಮಗೆ ಹಿಂದೂ ‘ಅವಿಭಕ್ತ’ ಕುಟುಂಬಗಳ ಪರಿಚಯ ಇಲ್ಲದಿರುವುದು ಆಶ್ಚರ್ಯವೇ ಸರಿ. ಅವಿಭಕ್ತ ಕುಟುಂಬಗಳು ನಿಮ್ಮ ಪ್ರಕಾರ ಹಿಂದೂಗಳಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಮುಸ್ಲಿಮರಷ್ಟೇ ಹೆಚ್ಚು ಮಕ್ಕಳನ್ನು ಹೊಂದಿರುತ್ತಾರೆ ಎನ್ನುವ ಅರ್ಥದ ಪ್ರತಾಪ್ ಸಿಂಹ ಅವರ ಕಾಮೆಂಟ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X