ಮಂಗಳವಾರ ಮೈಸೂರು ಭಾಗದಲ್ಲಿ ಪ್ರಿಯಾಂಕಾ ಗಾಂಧಿ ಮೋಡಿ : ಕೈ ಅಭ್ಯರ್ಥಿಗಳ ಪರ ಪ್ರಚಾರ

Date:

Advertisements
  • ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಿಯಾಂಕಾ ಗಾಂಧಿ ರೋಡ್ ಶೋ
  • ಮೈಸೂರು ಭಾಗದಲ್ಲಿ ಬಿಜೆಪಿ-ಕಾಂಗ್ರೆಸ್ ಪ್ರಚಾರ ಪೈಪೋಟಿ

ಹಳೆ ಮೈಸೂರು ಭಾಗದ ರಾಜಕೀಯ ಅಖಾಡ ರಂಗೇರಿದ್ದು,ಮಂಗಳವಾರ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಇಲ್ಲಿ ಪ್ರಚಾರ ನಡೆಸಲಿದ್ದಾರೆ.

ಇದರೊಂದಿಗೆ ಮೈಸೂರು ಪ್ರಾಂತ್ಯ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ- ಕಾಂಗ್ರೆಸ್ ನಡುವಿನ ಪ್ರಚಾರ ಪೈಪೋಟಿಯ ಕಣವಾಗಿ ಮಾರ್ಪಟ್ಟಿದೆ.

ಏಪ್ರಿಲ್ 24ರಂದು ಬಿಜೆಪಿ ವರಿಷ್ಠ ಅಮಿತ್ ಶಾ ಈ ಭಾಗದಲ್ಲಿ ಪ್ರಚಾರ ನಡೆಸಿ ತೆರಳಿದರೆ, ಏಪ್ರಿಲ್ 25ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

Advertisements

ರಾಜಕೀಯ ಲೋಕದ ಸ್ಟಾರ್ ನಾಯಕರುಗಳ ಪ್ರಚಾರಕ್ಕೆ ಸಾಕ್ಷಿಯಾಗಿರುವ ಈ ಭಾಗದಲ್ಲಿ ಕಾರ್ಯಕರ್ತರ ಹುಮ್ಮಸ್ಸು ಮುಗಿಲು ಮುಟ್ಟಿದೆ. ಏಪ್ರಿಲ್ 25ರಂದು ರಾಜ್ಯಕ್ಕೆ ಬರಲಿರುವ ಪ್ರಿಯಾಂಕಾ ಗಾಂಧಿ, ಅಂದು ಭಾಗವಹಿಸುವ ಕಾರ್ಯಕ್ರಮ ಪಟ್ಟಿ ಹೀಗಿದೆ.

25 ಏಪ್ರಿಲ್ 2023
ಮಧ್ಯಾಹ್ನ 12:00 – ಟಿ ನರಸೀಪುರ – ಯಾಳವಾರ ಹುಂಡಿಯಲ್ಲಿ ಸಾರ್ವಜನಿಕ ಸಭೆ


• 3.00 PM- ಹನೂರಿನಲ್ಲಿ ಮಹಿಳಾ ಸಂವಾದ – ಗೌರಿಶಂಕರ್ ಕನ್ವೆನ್ಷನ್ ಹಾಲ್ ಹತ್ತಿರ, ಹನೂರು ಟೌನ್


• 5:30 PM – ಕೃಷ್ಣರಾಜನಗರದಲ್ಲಿ ರೋಡ್ ಶೋ – ಅಂಬೇಡ್ಕರ್ ಪ್ರತಿಮೆಯ ವೃತ್ತದ ಮೂಲಕ ಪುರಸಭೆ ಕಚೇರಿ ತೋಪಮ್ಮ ದೇವಸ್ಥಾನ.

ಮಂಗಳವಾರ ಮಧ್ಯಾಹ್ನ 12ಕ್ಕೆ ಟಿ ನರಸೀಪುರ – ಯಾಳವಾರ ಹುಂಡಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಹಾಗೆಯೇ ಮಧ್ಯಾಹ್ನ 3 ಗಂಟೆಗೆ ಹನೂರು ಟೌನ್‌ನ ಗೌರಿಶಂಕರ್ ಕನ್ವೆನ್ಷನ್ ಹಾಲ್ ಹತ್ತಿರ ಪ್ರಿಯಾಂಕಾ ಗಾಂಧಿ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ.

ಸಂಜೆ 5ಕ್ಕೆ ಕೆ ಆರ್ ನಗರಕ್ಕೆ ಬರಲಿರುವ ಅವರು ಅಲ್ಲಿನ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಅವರು ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಈ ಸುದ್ದಿ ಓದಿದ್ದೀರಾ? :ಮೈಸೂರು ಭಾಗದಲ್ಲಿ ಪ್ರಚಾರಕ್ಕೆ ಸಿದ್ಧವಾದ ಬಿಜೆಪಿ : ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಅಮಿತ್ ಶಾ

ಈ ಎಲ್ಲ ಕಾರ್ಯಕ್ರಮಗಳಿಗಾಗಿನ ಅಗತ್ಯ ಸಿದ್ಧತೆಯನ್ನು ರಾಜ್ಯ ಕಾಂಗ್ರೆಸ್‌ ಮಾಡಿಕೊಂಡು ನಾಯಕಿಯ ಸ್ವಾಗತಕ್ಕಾಗಿ ಕಾದು ನಿಂತಿದೆ. ಪ್ರಿಯಾಂಕಾ ಪ್ರಚಾರದ ವೇಳೆ ಕಾಂಗ್ರೆಸ್‌ ರಾಜ್ಯ ಪ್ರಮುಖರು ಅವರೊಂದಿಗಿರಲಿದ್ದಾರೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಪೂರ್ಣ ಪ್ರಮಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹಬ್ಬದ ವಾತಾವರಣವನ್ನು ಹುಟ್ಟುಹಾಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X