ರಾಯಚೂರು | ರಾಜ್ಯದಲ್ಲಿ ಬರ, ಬೆಳೆ ಉಳಿಸಲು ಟ್ಯಾಂಕರ್‌ಗಳ ಮೊರೆಹೋದ ರೈತರು

Date:

Advertisements

ರಾಜ್ಯದಲ್ಲಿ ಕೈಕೊಟ್ಟ ಮುಂಗಾರಿನಿಂದ ಎಲ್ಲ ಜಿಲ್ಲೆಗಳು ಬರಗಾಲ ಅನುಭವಿಸುತ್ತಿದ್ದಾರೆ. ನೀರಿನ ಅಭಾವ ಉಂಟಾಗಿದೆ. ಹಳ್ಳ, ನದಿ, ಜಲಾಶಯಗಳಲ್ಲಿಯೂ ನೀರಲ್ಲದೆ ರೈತರು ಬೆಳೆಗಳಿಗೆ ನೀರುಣಿಸಲು ಪರದಾಡುತ್ತಿದ್ದಾರೆ. ಇತ್ತ ರಾಯಚೂರಿನಲ್ಲಿ ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್‌ಗಳ ಮೊರೆಹೋಗಿದ್ದಾರೆ.

ಮಳೆಯಾಶ್ರಿತ ಪ್ರದೇಶದಲ್ಲಿ ಬಿತ್ತನೆ ಮಾಡಿದ‌‌ ಬೆಳೆ ಒಣಗಿ ಹೋಗುತ್ತಿದ್ದರೆ, ಇತ್ತ ತುಂಗಭದ್ರಾ ಎಡದಂಡೆಯ ಕಾಲುವೆ ನೀರನ್ನು ನಂಬಿಕೊಂಡು ವ್ಯವಸಾಯ ಮಾಡಿಕೊಳ್ಳುತ್ತಿರುವ ರೈತರು ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆದ ಮೆಣಸಿನಕಾಯಿ ಬೆಳೆಗೆ ಹಾನಿಯಾಗುತ್ತಿರುವುದರಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳಲ್ಲಿ ನೀರನ್ನು ತಂದು ನೀರುಣಿಸುವ ಸಹಾಸಕ್ಕೆ ಮುಂದಾಗಿದ್ದಾರೆ.

ಒಂದೂವರೆ ಎಕರೆಯಲ್ಲಿ ಮೆಣಸಿನಕಾಯಿ ಬೆಳೆ ಹಾಕಿದ್ದೇನೆ. ಇದರ ಇಳುವರಿ ಕೂಡ ಉತ್ತಮವಾಗಿ ಬಂದಿದೆ. ಪಕ್ಕದಲ್ಲಿಯೇ ತುಂಗಭದ್ರಾ ಎಡದಂಡೆ ಕಾಲುವೆ ಹಾದು ಹೋಗಿದೆ. ಆದರೆ, ನೀರಿಲ್ಲ. ಹೀಗಾಗಿ, ಟ್ಯಾಂಕರ್ ಮೂಲಕ ನೀರು ತಂದು ಬೆಳೆ ಉಳಿಸಿಕೊಳ್ಳುತ್ತಿದ್ದೇನೆ ಎನ್ನುತ್ತಾರೆ ಆಶಾಪುರ ಗ್ರಾಮದ ರೈತ ವೀರೇಶ್‌.

Advertisements

ಸದ್ಯ ಬೆಳೆದಿರುವ ಬೆಲೆಗೆ ಸಾಕಷ್ಟು ಹಣಹಾಕಿ ಬೆಳೆದಿದ್ದೇವೆ. ಒಂದು ಟ್ಯಂಕ್‌ ನೀರಿಗೆ ನಾಲ್ಕು ಸಾವಿರ ಖರ್ಚುಮಾಡಿ ಬೆಳೆ ಉಳಿಸಿಕೊಳ್ಳುತ್ತಿದ್ದೇವೆ. ನಮ್ಮ ಅಕ್ಕಪಕ್ಕದ ರೈತರು ಸಹ ಟ್ಯಾಂಕರ್ ಮೂಲಕ ನೀರು ತಂದು ಬೆಳೆಗಳಿಗೆ ಉಣಿಸಲು ಮುಂದಾಗಿದ್ದಾರೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಾರೆ.

ಇತ್ತ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳ, ಯರೇಹಂಚಿನಾಳ, ಸೊಂಪುರ ಸೇರಿದಂತೆ ವಿವಿಧ ಗ್ರಾಮದಲ್ಲಿ ರೈತರು ಸಹ ಬೆಳೆ ಸಂರಕ್ಷಿಸಲು ಟ್ಯಾಂಕರ್‌ ನೀರಿನ ಮೊರೆ ಹೋಗುತ್ತಿದ್ದಾರೆ. ಟ್ಯಾಂಕರ್ ಮೂಲಕ ನೀರುಣಿಸುವುದು ಸರಳ ಕೆಲಸವಲ್ಲ. ಆದರೂ, ಬಂದಿರುವ ಬೆಳೇಯನ್ನು ಉಳಿಸಿಕೊಳ್ಳಲು ಟ್ಯಾಂಕರ್‌ಗಳನ್ನು ಬಾಡಿಗೆ ಪಡೆದು ನೀರು ಹಾಯಿಸುತ್ತಿದ್ದಾರೆ. ಬರದ ಹಿನ್ನೆಲೆಯಲ್ಲಿ ಏನೇ ಬೆಳೆ ಬಂದರೂ ಬೆಲೆ ಸಿಗುತ್ತದೆ ಎನ್ನುವ ಆತ್ಮವಿಶ್ವಾಸದಲ್ಲಿರುವ ರೈತರು, ಸದ್ಯಕ್ಕೆ ಉಳಿದಿರುವ ಈರುಳ್ಳಿ, ಮೆಣಸಿನಕಾಯಿಗೆ ನೀರುಣಿಸಿ ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X