ಮತ ಎಣಿಕೆ ಚನ್ನಪಟ್ಟಣದಲ್ಲಿ ಎಚ್‌ ಡಿ ಕುಮಾರಸ್ವಾಮಿ ಮುನ್ನಡೆ

Date:

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಅಭ್ಯರ್ಥಿ ಎಚ್‌ ಡಿ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ.

ಮೇ 10ರಂದು ನಡೆದ ಚುನಾವಣೆಯಲ್ಲಿ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಚನ್ನಪಟ್ಟಣವೂ ಒಂದು. 2018ರ ವಿಧಾನಸಭಾ ಚುನಾವಣೆಯಲ್ಲಿ, ಎಚ್‌.ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಿ.ಪಿ ಯೋಗೇಶ್ವರ್ ಕಣಕ್ಕಿಳಿದಿದ್ದರು. ಚನ್ನಪಟ್ಟಣ ಕ್ಷೇತ್ರದಲ್ಲಿ 2,16,448 ಮತದಾರರಿದ್ದು, 85.23% ಮತದಾನವಾಗಿತ್ತು.

- Advertisement -

ಯೋಗೇಶ್ವರ್ ಅವರು 2013ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿಯಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಶಾಲಿಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಯೋಗೇಶ್ವರ್, ಕುಮಾರಸ್ವಾಮಿ ವಿರುದ್ಧ ಸೋಲುಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕ್ಷೇತ್ರದ ಶಾಸಕರೂ ಆಗಿರುವ ಎಚ್.ಡಿ ಕುಮಾರಸ್ವಾಮಿ ಅವರು ಭವಿಷ್ಯದ ಮುಖ್ಯಮಂತ್ರಿ ಎಂದೇ ಬಿಂಬಿಸಲಾಗುತ್ತಿದೆ. ಅವರಿಗೂ ಈ ಚುನಾವಣೆ ಅಗ್ನಿಪರೀಕ್ಷೆಯಾಗಿದ್ದು, ಅವರನ್ನು ಸೋಲಿಸಲು ಪಣತೊಟ್ಟಿದ್ದ ಬಿಜೆಪಿ ನಾಯಕರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದರು. ಜೆಡಿಎಸ್‌ ಕೂಡ ಪಂಚರತ್ನ ಯಾತ್ರೆ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸಿತ್ತು.

ಕ್ಷೇತ್ರದ ಮತದಾರರು ಕುಮಾರಸ್ವಾಮಿ ಅವರ ಕೈ ಹಿಡಿಯುತ್ತಾರೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ. 2018ರ ಚುನಾವಣೆಯಲ್ಲಿ ಎಚ್‌ ಡಿ ಕುಮಾರಸ್ವಾಮಿ 87,995 ಮತ ಪಡೆದಿದ್ದರು. ಬಿಜೆಪಿಯ ಸಿ.ಪಿ ಯೋಗೇಶ್ವರ್ 66,465 ಮತ್ತು ಕಾಂಗ್ರೆಸ್‌ನ ಎಚ್.ಎಂ ರೇವಣ್ಣ 30,208 ಮತ ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ನಿಂದ ಎಚ್.ಎಂ ರೇವಣ್ಣರ ಬದಲಿಗೆ ಗಂಗಾಧರ್ ಕಣದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮುಖ್ಯಮಂತ್ರಿಗಳ 9 ಪುತ್ರರು ಕಣದಲ್ಲಿ: ಯಾರಿಗೆ ಕಹಿ – ಯಾರಿಗೆ ಸಿಹಿ?

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...