- ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಸುವ ವೇಳೆ ಚೇತನ್ ಹಿರೇಕೆರೂರು ಬಂಧನ
- ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯನಾಗಿರುವ ಚೇತನ್ ಹಿರೇಕೆರೂರು
ಗೂಂಡಾ ಕಾಯ್ದೆಯಡಿ ಬಂಧಿತನಾಗಿರುವ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯ ಮತ್ತು ರೌಡಿಶೀಟರ್ ಚೇತನ್ ಹಿರೇಕೆರೂರು ಮನೆಗೆ ಜಗದೀಶ್ ಶೆಟ್ಟರ್ ಭೇಟಿ ನೀಡಿದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರು, ಹುಬ್ಬಳ್ಳಿ-ಧಾರವಾಡ ಕೇಂದ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸುವ ಮುನ್ನ ನಡೆದ ರ್ಯಾಲಿಯಲ್ಲಿ ಚೇತನ್ ಹಿರೇಕೆರೂರು ಭಾಗಿಯಾಗಿದ್ದರು.
ರ್ಯಾಲಿ ವೇಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯ ಚೇತನ್ ಹಿರೇಕೆರೂರು ಅವರನ್ನು ಗೂಂಡಾ ಕಾಯ್ದೆಯಡಿ ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆ ಪೊಲೀಸರು ಗುರುವಾರ ಬಂಧಿಸಿ, ಈಗ ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ. ಆತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ರೌಡಿ ಹಿನ್ನೆಲೆಯ ಪ್ರಕರಣಗಳು ದಾಖಲಾಗಿವೆ.
ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ನಾಗ್ಪುರ್ ಪಡೆಯಿಂದ ಶೆಟ್ಟರ್ ಮೇಲೆ ಗೂಢಾಚಾರಿಕೆ
ಚೇತನ್ ಹಿರೇಕೆರೂರು ಬಂಧನದ ನಂತರ ಕೋಟೆಲಿಂಗೇಶ್ವರ ನಗರದಲ್ಲಿರುವ ಚೇತನ್ ಮನೆಗೆ ಶುಕ್ರವಾರ ಜಗದೀಶ್ ಶೆಟ್ಟರ್ ಬೇಟಿ ನೀಡಿ, ಆತನ ಕುಟುಂಬಸ್ಥರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು.
ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಇಂತಹ ವಿದ್ಯಮಾನ ನಡೆದಿರುವುದು ದ್ವೇಷ ರಾಜಕಾರಣವೇ ಎಂಬ ಅನುಮಾನಕ್ಕೆ ಕಾರಣವಾಗಿದೆ.