ಚುನಾವಣೆ 2023 | ಅವಧಿ ಇದ್ದರೂ ಬಿಜೆಪಿ ತೊರೆಯುತ್ತಿರುವ ಸಾಲು ಸಾಲು ಎಂಎಲ್‌ಸಿಗಳು

Date:

Advertisements
  • ಬಿಜೆಪಿ ಪಟ್ಟಿ ಬಿಡುಗಡೆ ಬೆನ್ನಲ್ಲೇ ಪಕ್ಷದೊಳಗೆ ಟಿಕೆಟ್‌ ವಂಚಿತರ ಬಂಡಾಯ
  • ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಬಲ 40ರಿಂದ 34ಕ್ಕೆ ಕುಸಿಯುವ ಸಾಧ್ಯತೆ

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್‌ ಮಾಡಿ ಮಂಗಳವಾರ ರಾತ್ರಿ ಮೊದಲ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಪಕ್ಷದೊಳಗೆ ಟಿಕೆಟ್‌ ವಂಚಿತರ ಬಂಡಾಯ ಭುಗಿಲೆದ್ದಿದೆ.

ಬಿಜೆಪಿ ಹೈಕಮಾಂಡ್​ ಗುಜರಾತ್‌ ಮಾದರಿಯಲ್ಲೇ ಕರ್ನಾಟಕದಲ್ಲೂ ಹೊಸ ಮುಖಗಳಿಗೆ ಮಣೆ ಹಾಕಿದ್ದು, ಮೊದಲ ಪಟ್ಟಿಯಲ್ಲಿ ಬರೋಬ್ಬರಿ 52 ಹೊಸ ಮುಖಗಳಿಗೆ ಮಣೆ ಹಾಕಿದೆ. ಬಿಜೆಪಿ ಟಿಕೆಟ್​ ಸಿಗಬಹುದು ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದ ಹಲವರಿಗೆ ನಿರಾಸೆಯಾಗಿದೆ.

ಇದರಿಂದ ಅಸಮಾಧಾನಗೊಂಡಿರುವ ಬಿಜೆಪಿ ನಾಯಕರು ಸರತಿ ಸಾಲಾಗಿ ಬಂಡಾಯ ಎದ್ದಿದ್ದಾರೆ. ಅದರಲ್ಲೂ ಬಿಜೆಪಿಯ ವಿಧಾನ ಪರಿಷತ್ ಸದಸ್ಯರು ತಮ್ಮ ಅವಧಿ ಇದ್ದರೂ ರಾಜೀನಾಮೆ ಪರ್ವಕ್ಕೆ ಮುನ್ನುಡಿ ಬರೆದಿದ್ದಾರೆ. ಇದರಿಂದಾಗಿ ಬಿಜೆಪಿಗೆ ಈ ವಿಧಾನಸಭೆ ಚುನಾವಣೆ ದೊಡ್ಡ ಮಟ್ಟದ ಹೊಡೆತ ಕೊಟ್ಟಂತಾಗಿದೆ.

Advertisements

ಬಿಜೆಪಿ ನಡೆಗೆ ಮುನಿಸಿಕೊಂಡು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯ ಕೆಲ ನಾಯಕರು ರಾಜೀನಾಮೆ ನೀಡಿ ಒಬ್ಬೊಬ್ಬರಾಗಿ ಈಗ ಹೊರಬರುತ್ತಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಅಥಣಿ ಟಿಕೆಟ್‌ ವಂಚಿತರಾಗಿದ್ದು, ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಬುಧವಾರ ಘೋಷಿಸಿದ್ದಾರೆ. ಅಥಣಿ ಕ್ಷೇತ್ರಕ್ಕೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹಠ ಹಿಡಿದು ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಣೇಬೆನ್ನೂರು ಕ್ಷೇತ್ರದಿಂದ ಶಾಸಕ ಅರುಣ್ ಕುಮಾರ್​ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರಿಂದ ಅಸಮಾಧಾನಗೊಂಡಿರುವ ಎಂಎಲ್‌ಸಿ ಆರ್‌ ಶಂಕರ್‌, ಬುಧವಾರ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿ ರಾಜೀನಾಮೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ನಡೆ ಬೇಸರ ತರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್ ಶಂಕರ್

ಈಗಾಗಲೇ ಬಿಜೆಪಿ ವಿಧಾನ ಪರಿಸತ್ ಸದಸ್ಯರಾಗಿದ್ದ ಪುಟ್ಟಣ್ಣ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಹಾಗೆಯೇ ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ವಿಧಾನ ಪರಿಷತ್ ಸದಸ್ಯ ಎಚ್​ ವಿಶ್ವನಾಥ್ ಈಗಾಗಲೇ ಬಹಿರಂಗವಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

ಅಲ್ಲದೇ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್​ ಕೂಡ ವಿಧಾನ ಪರಿಷತ್ ಸದಸ್ಯತ್ವಕ್ಕೆ ಶೀಘ್ರವೇ ರಾಜೀನಾಮೆ ನೀಡುವುದಾಗಿ ಈ ಹಿಂದೆ ಬಹಿರಂಗ ಹೇಳಿಕೆ ನೀಡಿದ್ದರು. ಆದರೆ, ಶಿವಮೊಗ್ಗ ಟಿಕೆಟ್​ ಯಾರಿಗೆ ಸಿಗಲಿದೆ ಎನ್ನುವುದರ ಮೇಲೆ ಅವರ ತೀರ್ಮಾನ ಇರಲಿದೆ.

ಸಭಾಪತಿ ಬಸವರಾಜ ಹೊರಟ್ಟಿ ಸೇರಿ ವಿಧಾನ ಪರಿಷತ್‌ನಲ್ಲಿ ಬಿಜೆಪಿ 40 ಸದಸ್ಯ ಬಲ ಹೊಂದಿದೆ. ಸುದೀರ್ಘ ಅವಧಿಯ ಬಳಿಕ ಈ ಸ್ಥಾನಗಳಿಂದ ಬಿಜೆಪಿ ವಿಧಾನ ಪರಿಷತ್‌ನ ಬಹುಮತ ಸಾಧಿಸಿದೆ. ಆದರೆ, ವಿಧಾನಸಭೆ ಚುನಾವಣೆ ಮುಗಿಯುವ ವೇಳೆಗೆ ಬಿಜೆಪಿ ಸದಸ್ಯ ಬಲ 40 ರಿಂದ 34ಕ್ಕೆ ಕುಸಿಯುವ ಸಾಧ್ಯತೆ ಹೆಚ್ಚಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X