ಚುನಾವಣೆ 2023 | ಅವಧಿ ಇದ್ದರೂ ಬಿಜೆಪಿ ತೊರೆಯುತ್ತಿರುವ ಸಾಲು ಸಾಲು ಎಂಎಲ್‌ಸಿಗಳು

Date:

  • ಬಿಜೆಪಿ ಪಟ್ಟಿ ಬಿಡುಗಡೆ ಬೆನ್ನಲ್ಲೇ ಪಕ್ಷದೊಳಗೆ ಟಿಕೆಟ್‌ ವಂಚಿತರ ಬಂಡಾಯ
  • ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಬಲ 40ರಿಂದ 34ಕ್ಕೆ ಕುಸಿಯುವ ಸಾಧ್ಯತೆ

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್‌ ಮಾಡಿ ಮಂಗಳವಾರ ರಾತ್ರಿ ಮೊದಲ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಪಕ್ಷದೊಳಗೆ ಟಿಕೆಟ್‌ ವಂಚಿತರ ಬಂಡಾಯ ಭುಗಿಲೆದ್ದಿದೆ.

ಬಿಜೆಪಿ ಹೈಕಮಾಂಡ್​ ಗುಜರಾತ್‌ ಮಾದರಿಯಲ್ಲೇ ಕರ್ನಾಟಕದಲ್ಲೂ ಹೊಸ ಮುಖಗಳಿಗೆ ಮಣೆ ಹಾಕಿದ್ದು, ಮೊದಲ ಪಟ್ಟಿಯಲ್ಲಿ ಬರೋಬ್ಬರಿ 52 ಹೊಸ ಮುಖಗಳಿಗೆ ಮಣೆ ಹಾಕಿದೆ. ಬಿಜೆಪಿ ಟಿಕೆಟ್​ ಸಿಗಬಹುದು ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದ ಹಲವರಿಗೆ ನಿರಾಸೆಯಾಗಿದೆ.

ಇದರಿಂದ ಅಸಮಾಧಾನಗೊಂಡಿರುವ ಬಿಜೆಪಿ ನಾಯಕರು ಸರತಿ ಸಾಲಾಗಿ ಬಂಡಾಯ ಎದ್ದಿದ್ದಾರೆ. ಅದರಲ್ಲೂ ಬಿಜೆಪಿಯ ವಿಧಾನ ಪರಿಷತ್ ಸದಸ್ಯರು ತಮ್ಮ ಅವಧಿ ಇದ್ದರೂ ರಾಜೀನಾಮೆ ಪರ್ವಕ್ಕೆ ಮುನ್ನುಡಿ ಬರೆದಿದ್ದಾರೆ. ಇದರಿಂದಾಗಿ ಬಿಜೆಪಿಗೆ ಈ ವಿಧಾನಸಭೆ ಚುನಾವಣೆ ದೊಡ್ಡ ಮಟ್ಟದ ಹೊಡೆತ ಕೊಟ್ಟಂತಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ನಡೆಗೆ ಮುನಿಸಿಕೊಂಡು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯ ಕೆಲ ನಾಯಕರು ರಾಜೀನಾಮೆ ನೀಡಿ ಒಬ್ಬೊಬ್ಬರಾಗಿ ಈಗ ಹೊರಬರುತ್ತಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಅಥಣಿ ಟಿಕೆಟ್‌ ವಂಚಿತರಾಗಿದ್ದು, ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಬುಧವಾರ ಘೋಷಿಸಿದ್ದಾರೆ. ಅಥಣಿ ಕ್ಷೇತ್ರಕ್ಕೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹಠ ಹಿಡಿದು ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಣೇಬೆನ್ನೂರು ಕ್ಷೇತ್ರದಿಂದ ಶಾಸಕ ಅರುಣ್ ಕುಮಾರ್​ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರಿಂದ ಅಸಮಾಧಾನಗೊಂಡಿರುವ ಎಂಎಲ್‌ಸಿ ಆರ್‌ ಶಂಕರ್‌, ಬುಧವಾರ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿ ರಾಜೀನಾಮೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ನಡೆ ಬೇಸರ ತರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್ ಶಂಕರ್

ಈಗಾಗಲೇ ಬಿಜೆಪಿ ವಿಧಾನ ಪರಿಸತ್ ಸದಸ್ಯರಾಗಿದ್ದ ಪುಟ್ಟಣ್ಣ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಹಾಗೆಯೇ ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ವಿಧಾನ ಪರಿಷತ್ ಸದಸ್ಯ ಎಚ್​ ವಿಶ್ವನಾಥ್ ಈಗಾಗಲೇ ಬಹಿರಂಗವಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

ಅಲ್ಲದೇ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್​ ಕೂಡ ವಿಧಾನ ಪರಿಷತ್ ಸದಸ್ಯತ್ವಕ್ಕೆ ಶೀಘ್ರವೇ ರಾಜೀನಾಮೆ ನೀಡುವುದಾಗಿ ಈ ಹಿಂದೆ ಬಹಿರಂಗ ಹೇಳಿಕೆ ನೀಡಿದ್ದರು. ಆದರೆ, ಶಿವಮೊಗ್ಗ ಟಿಕೆಟ್​ ಯಾರಿಗೆ ಸಿಗಲಿದೆ ಎನ್ನುವುದರ ಮೇಲೆ ಅವರ ತೀರ್ಮಾನ ಇರಲಿದೆ.

ಸಭಾಪತಿ ಬಸವರಾಜ ಹೊರಟ್ಟಿ ಸೇರಿ ವಿಧಾನ ಪರಿಷತ್‌ನಲ್ಲಿ ಬಿಜೆಪಿ 40 ಸದಸ್ಯ ಬಲ ಹೊಂದಿದೆ. ಸುದೀರ್ಘ ಅವಧಿಯ ಬಳಿಕ ಈ ಸ್ಥಾನಗಳಿಂದ ಬಿಜೆಪಿ ವಿಧಾನ ಪರಿಷತ್‌ನ ಬಹುಮತ ಸಾಧಿಸಿದೆ. ಆದರೆ, ವಿಧಾನಸಭೆ ಚುನಾವಣೆ ಮುಗಿಯುವ ವೇಳೆಗೆ ಬಿಜೆಪಿ ಸದಸ್ಯ ಬಲ 40 ರಿಂದ 34ಕ್ಕೆ ಕುಸಿಯುವ ಸಾಧ್ಯತೆ ಹೆಚ್ಚಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ...