ಸಕಲೇಶಪುರ | ಕಾಂಗ್ರೆಸ್‌ನಿಂದ ಸ್ಥಳೀಯ ಮುಖಂಡರ ಕಡೆಗಣನೆ; ಬಂಡಾಯ ಅಭ್ಯರ್ಥಿ ಜೆ ಸಿ ರವಿ ಆರೋಪ

Date:

Advertisements
  • ʼಸಕಲೇಶಪುರ ಕ್ಷೇತ್ರಕ್ಕೆ ಮುರಳಿ ಮೋಹನ್ ಕೊಡುಗೆ ಏನೂ ಇಲ್ಲ‌ʼ
  • ʼಸಕಲೇಶಪುರ ಕ್ಷೇತ್ರದಲ್ಲಿ 68 ಸಾವಿರ ದಲಿತ ಮತದಾರರಿದ್ದಾರೆ

ಹಾಸನ ಜಿಲ್ಲೆಯಲ್ಲಿ ನಾಲ್ಕು ಲಕ್ಷ ಮಂದಿ ದಲಿತ ಮತದಾರರು ಇದ್ದರೂ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಸಕಲೇಶಪುರದಿಂದ ಹೊರ ರಾಜ್ಯದ ವ್ಯಕ್ತಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಈ ಕಾರಣಕ್ಕಾಗಿ ನಾನು ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಉಳಿದಿದ್ದೇನೆ ಎಂದು ಜೆ ಸಿ ರವಿ ಹೇಳಿದರು.

ಸಕಲೇಶಪುರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಸಕಲೇಶಪುರ – ಆಲೂರು – ಕಟ್ಟಾಯ (ಎಸ್‌ಸಿ) ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 68 ಸಾವಿರ ಮಂದಿ ದಲಿತ ಸಮುದಾಯದ ಮತದಾರಿದ್ದಾರೆ. ಅವರಲ್ಲಿ ವಿದ್ಯಾವಂತರು, ಹೋರಾಟಗಾರರು, ಶಾಸಕರಾಗಲು ಅರ್ಹತೆ ಇರುವ ಸಾಕಷ್ಟು ಮಂದಿ ಇದ್ದಾರೆ” ಎಂದರು.

“ಜಿಲ್ಲಾ ವ್ಯಾಪ್ತಿಯಲ್ಲಿ ಅರ್ಹತೆ ಇರುವವರು ಹಲವರಿದ್ದರೂ, ಪಕ್ಷದಲ್ಲಿ ದಶಕಗಳಿಂದ ದುಡಿದವರನ್ನು ಕಡೆಗಣಿಸಿ ಮುರಳಿ ಮೋಹನ್ ಅವರಿಗೆ ಟಿಕೆಟ್ ನೀಡಿರುವ ಉದ್ದೇಶವೇನು” ಎಂದು ಪ್ರಶ್ನಿಸಿದರು.

Advertisements

“ಮುರಳಿ ಮೋಹನ್‌ ಅವರು ಕ್ಷೇತ್ರದಲ್ಲಾಗಲಿ, ಜಿಲ್ಲೆಯಲ್ಲಾಗಲಿ ಕಾಂಗ್ರೆಸ್ ಕಟ್ಟಿ ಬೆಳೆಸಿಲ್ಲ. ಕ್ಷೇತ್ರಕ್ಕೆ ಅವರ ಕೊಡುಗೆ ಏನೂ ಇಲ್ಲ. ಕೇವಲ ಮೂರು ವರ್ಷದಿಂದ ಓಡಾಡಿಕೊಂಡು ಇರುವ ಇವರಿಗೆ ಟಿಕೆಟ್ ನೀಡುವುದಾದರೆ 30 ರಿಂದ 40 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕೆ ದುಡಿದಿರುವ ಈ ಜಿಲ್ಲೆಯ ದಲಿತ ಸಮುದಾಯದ ನಾಯಕರ ಗತಿ ಏನು?” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಹಾಸನ ಕ್ಷೇತ್ರ | ದಾಸ ಒಕ್ಕಲಿಗರ ನಡುವಿನ ಕಾದಾಟವಾದರೂ, ಮುಸ್ಲಿಂ ಮತದಾರರೆ ನಿರ್ಣಾಯಕ

“ಹಾಸನ ಜಿಲ್ಲೆಯ ದಲಿತ ಕಾಂಗ್ರೆಸ್ ಮುಖಂಡರು ಯಾರೂ ಚುನಾವಣೆಯಲ್ಲಿ ಸ್ಪರ್ಧಿಸಲು ಸಮರ್ಥರಿಲ್ಲ ಎಂದು ತಿಳಿದಿರುವ ಹೈಕಮಾಂಡ್‌ ಸ್ವಾಭಿಮಾನಿ ಕಾಂಗ್ರೆಸ್ ಕಾರ್ಯಕರ್ತರ ಮನಸ್ಸಿಗೆ ಧಕ್ಕೆ ತಂದಿದೆ. ದಲಿತರನ್ನು ಕೇವಲ ಕಾಂಗ್ರೆಸ್ ಮತದಾಳು ಎಂದು ತಿಳಿದಿರುವ ಹೈಕಮಾಂಡ್‌ಗೆ ನಮ್ಮಲ್ಲಿ ಸಮರ್ಥ ನಾಯಕರಿದ್ದಾರೆಂದು ತೋರಿಸಬೇಕಿದೆ” ಎಂದರು.

“ಆದ್ದರಿಂದ ಹಾಸನ ಜಿಲ್ಲೆಯ ದಲಿತ ಸಮುದಾಯದ ಎಲ್ಲ ಮುಖಂಡರು, ಕಾರ್ಯಕರ್ತರ ಪರವಾಗಿ ಹಾಗೂ ಈ ಕ್ಷೇತ್ರದ ದಲಿತರಿಗೆ ಅನ್ಯಾಯ ಮಾಡಿರುವ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ಗೆ ಸಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡರಾದ ಮಣಿಕಂಠ, ಆನಂದ, ಶಂಕ್ರಪ್ಪ, ಸೋಮಣ್ಣ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X