ಶಿವಮೊಗ್ಗ | ಬೇಸಿಗೆಗೂ ಮುನ್ನ ಶರಾವತಿಯಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ ಸಾಧ್ಯತೆ

Date:

Advertisements

ಶರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯದ ವಿದ್ಯುದಾಗಾರದಲ್ಲಿ ನೀರಿನ ಕೊರತೆ ಉಂಟಾಗಿದೆ. ಮಳೆ ಕೈ ಕೊಟ್ಟಿರುವ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ ದಿನೆದಿನೇ ಕ್ಷೀಣಿಸುತ್ತಿದೆ. ಬೇಸಿಗೆ ಬರುವಷ್ಟರಲ್ಲಿ ಜಲಾಶಯದ ಜಲವಿದ್ಯುತ್ ಉತ್ಪಾದನೆ ಹಂತಹಂತವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಈಗಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಯಾಗಿದ್ದು ರೈತರು, ಜನರು ವಿದ್ಯುತ್ ವ್ಯತ್ಯಯದಿಂದ ಪರಿತಪಿಸುತ್ತಿದ್ದಾರೆ. ಜನರು ಬೇಸಿಗೆಯಲ್ಲಿ ಇನ್ನಷ್ಟು ಸಂಕಷ್ಟ ಎದುರಿಸುವ ಲಕ್ಷಣಗಳು ಗೋಚರಿಸುತ್ತಿವೆ.

ಲಿಂಗಮನಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆಗೆ ಇನ್ನು ಕೇವಲ 140ದಿನಕ್ಕೆ ಸಾಕಾಗುವಷ್ಟು ಮಾತ್ರ ನೀರಿದೆ. ಮಳೆ ಬಾರದೇ ಹೋದರೆ ಬೇಸಿಗೆಯ ಹೊತ್ತಿಗೆ ಜಲಾಶಯದ ನೀರು ಡೆಡ್ ಸ್ಟೋರೇಜ್ ತಲುಪಲಿದೆ.

Advertisements

ಸಾಕಷ್ಟು ಸಂದಿಗ್ಧ ಪರಿಸ್ಥಿತಿಯಲ್ಲಿ ಬೇಡಿಕೆ ತಕ್ಕಷ್ಟು ವಿದ್ಯುತ್ ಪೂರೈಸಿದ ಹೆಗ್ಗಳಿಕೆ ಶರಾವತಿ ಕೊಳ್ಳದ ವಿದ್ಯುದಾಗಾರಗಳಿಗಿದೆ. ಆದರೆ‌, ಈ ಬಾರಿ ಮಳೆ ಕೊರತೆಯಿಂದ ಲಿಂಗನಮಕ್ಕಿ ಜಲಾಶಯ ಶೇ. 50ರಷ್ಟು ಮಾತ್ರ ಭರ್ತಿಯಾಗಿದೆ. ಈ ಐದು ಜಲ ವಿದ್ಯುದಾಗಾರಗಳಿಂದ ರಾಜ್ಯದ ವಿದ್ಯುತ್ ಬೇಡಿಕೆಯ ಶೇ. 25ರಷ್ಟು ಪೂರೈಸಬಹುದು.

ಜಲಾಶಯದಲ್ಲಿ ಬುಧವಾರ (ಸೆ.25) 1,786.30ಅಡಿ ನೀರಿತ್ತು. ಒಳ ಹರಿವು 629 ಕ್ಯೂಸೆಕ್. ಹಾಲಿ ವಿದ್ಯುತ್​ಗೆ 2,691.75 ಕ್ಯೂಸೆಕ್ ನೀರನ್ನು ಬಳಸಲಾಗುತ್ತಿದೆ. ಹಾಲಿ ಜಲಾಶಯದಲ್ಲಿ 43.45% ನೀರಿದೆ. ಕಳೆದ ವರ್ಷ ಜಲಾಶಯದಲ್ಲಿ ಈ ವೇಳೆಗೆ 1,813.60ಅಡಿ ನೀರಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X