ಶಿವಮೊಗ್ಗ | ಎಸ್‌ಡಿಪಿಐಗೂ ರಾಗಿಗುಡ್ಡ ಘಟನೆಗೂ ಯಾವುದೇ ಸಂಬಂಧವಿಲ್ಲ: ಜಿಲ್ಲಾಧ್ಯಕ್ಷ ಇಮ್ರಾನ್

Date:

Advertisements

ಪ್ರವಾದಿ ಮುಹಮ್ಮದ್ ಅವರ ಜನ್ಮದಿನಾಚರಣೆ ‘ಮೀಲಾದುನ್ನಬಿ’ಯ ಪ್ರಯುಕ್ತ ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆಯ ಬಳಿಕ ಉಂಟಾದ ಪ್ರಕ್ಷುಬ್ಧ ಘಟನೆಗೂ ಎಸ್‌ಡಿಪಿಐ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಶಿವಮೊಗ್ಗ ಜಿಲ್ಲಾಧ್ಯಕ್ಷ ಇಮ್ರಾನ್ ಸ್ಪಷ್ಟೀಕರಣ ನೀಡಿದ್ದಾರೆ.

ಬಜರಂಗದಳದ ರೋಹನ್ ಕಲ್ಲೆಸೆತವೇ ಶಿವಮೊಗ್ಗ ಗಲಭೆಯ ಆರಂಭ ಬಿಂದುವೇ? ಎಂಬ ವರದಿಯನ್ನು ಈ ದಿನ.ಕಾಮ್ ಪ್ರಕಟಿಸಿತ್ತು. ವರದಿಯಲ್ಲಿ ಸ್ಥಳೀಯರ ಆರೋಪವನ್ನು ಉಲ್ಲೇಖಿಸಿ ‘ಎಸ್‌ಡಿಪಿಐನವರೂ ಕೂಡ ಪ್ರಕ್ಷುಬ್ಧ ಘಟನೆಯಲ್ಲಿ ಇದ್ದರು’ ಎಂಬುದನ್ನು ಉಲ್ಲೇಖಿಸಿತ್ತು.

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಈ ದಿನ.ಕಾಮ್‌ಗೆ ಸ್ಪಷ್ಟೀಕರಣ ನೀಡಿರುವ ಶಿವಮೊಗ್ಗ ಜಿಲ್ಲಾಧ್ಯಕ್ಷ ಇಮ್ರಾನ್, “ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ಒಂದು ರಾಜಕೀಯ ಪಕ್ಷ. ಮೀಲಾದುನ್ನಬಿಗೂ ಎಸ್‌ಡಿಪಿಐಗೂ ಏನೂ ಸಂಬಂಧವಿರಲ್ಲ. ನಮ್ಮ ಪಕ್ಷದಲ್ಲಿ ಎಲ್ಲ ಜಾತಿ ಧರ್ಮದವರೂ ಇದ್ದಾರೆ. ಪಕ್ಷದಲ್ಲಿ ಗುರುತಿಸಿಕೊಂಡಿರುವವರ ಪೈಕಿ ಮೀಲಾದುನ್ನಬಿ ಆಚರಿಸುವವರೂ ಇದ್ದಾರೆ. ಮಾಡದಿರುವವರೂ ಇದ್ದಾರೆ. ಮೀಲಾದುನ್ನಬಿ ಆಚರಿಸುವುದು ಅವರವರ ವೈಯಕ್ತಿಕ ಸ್ವಾತಂತ್ರ್ಯ. ಆದರೆ ಮೊನ್ನೆ ರಾಗಿಗುಡ್ಡದಲ್ಲಿ ನಡೆದ ಘಟನೆಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ” ಎಂದು ತಿಳಿಸಿದ್ದಾರೆ.

Advertisements

sdpi shimoga president imran

‘ಎಸ್‌ಡಿಪಿಐ ಜನರ ಸಮಸ್ಯೆಗೆ ಸ್ಪಂದಿಸಿ ಎಲ್ಲ ಕಡೆಗೆ ಬೆಳೆಯುತ್ತಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಸ್ಥಳೀಯ ಚುನಾವಣೆಯೂ ಇದೆ. ಹೀಗಾಗಿ, ಪಕ್ಷದ ಬೆಳವಣಿಗೆ ಸಹಿಸದವರು ಬೇರೆ ಪಕ್ಷದ ಬಗ್ಗೆ ಆಸಕ್ತಿ ಇರುವವರು ನಮ್ಮನ್ನು ಎಳೆದು ತಂದಿದ್ದಾರೆ. ನಾನು ಸ್ವತಃ ಮೀಲಾದುನ್ನಬಿ ಆಚರಿಸುತ್ತೇನೆ. ಆದರೆ ಬೇರೆಯವರೂ ಮಾಡಿ ಎಂದು ನಾನು ಒತ್ತಾಯ ಮಾಡುವುದಿಲ್ಲ. ಮೊನ್ನೆ ನಡೆದ ರಾಗಿಗುಡ್ಡದ ಘಟನೆಯಲ್ಲಿ ಎಸ್‌ಡಿಪಿಐನವರು ಇದ್ದರು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಾಗಲೀ, ಪೊಲೀಸ್ ಇಲಾಖೆಯಾಗಲಿ ಎಲ್ಲೂ ಹೇಳಿಕೆ ನೀಡಿಲ್ಲ. ಅಂದ ಮೇಲೆ ನಮ್ಮ ಬೆಳವಣಿಗೆ ಸಹಿಸದವರು ಪಕ್ಷದ ವಿರುದ್ಧ ನಡೆಸಿರುವ ಷಡ್ಯಂತ್ರ. ಹಾಗಾಗಿ, ಎಸ್‌ಡಿಪಿಐಗೂ ರಾಗಿಗುಡ್ಡ ಘಟನೆಗೂ ಯಾವುದೇ ಸಂಬಂಧವಿಲ್ಲ” ಎಂದು ಇಮ್ರಾನ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X