ಸಿದ್ದರಾಮಯ್ಯ ಪರ ಪ್ರಚಾರಕ್ಕಿಳಿದ ಸ್ಯಾಂಡಲ್‌ವುಡ್‌ ತಾರೆಯರು

Date:

ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ

- Advertisement -

ಬೆಳಗಿನ ರೋಡ್‌ ಶೋನಲ್ಲಿ ನಟಿ ನಿಶ್ವಿಕಾ ನಾಯ್ಡು ಭಾಗಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ವರುಣಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಸ್ಯಾಂಡಲ್‌ವುಡ್‌ನ ಖ್ಯಾತನಾಮರು ಗುರುವಾರ ಮತ ಯಾಚನೆ ನಡೆಸಲಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ತಮ್ಮ ಆಪ್ತರ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ ಕುಮಾರ್‌, ನಟಿ, ಮಾಜಿ ಸಂಸದೆ ರಮ್ಯಾ, ಸ್ಟಾರ್‌ ನಟ ದುನಿಯಾ ವಿಜಯ್‌ ಮತ್ತು ಯುವ ನಟಿ ನಿಶ್ವಿಕಾ ನಾಯ್ಡು ಅವರು ಸಿದ್ದರಾಮಯ್ಯನವರ ಪರ ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ.

ಈಗಾಗಲೇ ಸಿದ್ದರಾಮಯ್ಯ ಅವರ ಜೊತೆಗೆ ರೋಡ್‌ ಶೋ ಆರಂಭಿಸಿರುವ ನಿಶ್ವಿಕಾ ನಾಯ್ಡು, “ನನಗೆ ರಾಜಕೀಯ ಅಷ್ಟಾಗಿ ಗೊತ್ತಿಲ್ಲ. ರಾಕೇಶ್‌ ಸಿದ್ದರಾಮಯ್ಯನವರು ನನ್ನ ಚಿಕ್ಕಪ್ಪ. ಹೀಗಾಗಿ ನನ್ನ ಕೈಲಾದ ಬೆಂಬಲವನ್ನು ನೀಡುವ ಸಲುವಾಗಿ ನಾನು ಪ್ರಚಾರದಲ್ಲಿ ಭಾಗಿಯಾಗಿದ್ದೀನಿ. ಇಲ್ಲಿನ ಜನ ಅಪ್ಪಾಜಿಯ ಮೇಲಿಟ್ಟಿರುವ ಪ್ರೀತಿಯನ್ನು ನೋಡುತ್ತಿದ್ದರೆ ಖುಷಿಯಾಗುತ್ತದೆ. ಮೊದಲ ಬಾರಿಗೆ ಈ ರೀತಿ ಪ್ರಚಾರಕ್ಕೆ ಬಂದಿದ್ದೀನಿ. ವರುಣಾ ಕ್ಷೇತ್ರದ ಜನತೆ ಅಪ್ಪಾಜಿಯವರ ಕೈ ಹಿಡಿಯುತ್ತಾರೆ” ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದಾದ ಬೆನ್ನಲ್ಲೇ ಸೊರಬ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದ ಶಿವಣ್ಣ, ತಮ್ಮ ಸಂಬಂಧಿ, ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ನಡೆಸಿದ್ದರು. ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ಅವರನ್ನು ಬೆಂಬಲಿಸಿ ರೋಡ್‌ ಶೋ ನಡೆಸಿದ್ದ ಅವರು, ತೀರ್ಥಹಳ್ಳಿಯಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲೂ ಭಾಗಿಯಾಗಿದ್ದರು. ಇದೀಗ ಸಿದ್ದರಾಮಯ್ಯನವರ ಪ್ರಚಾರ ಕೈಗೊಂಡಿದ್ದು, ಜಗದೀಶ್‌ ಶೆಟ್ಟರ್‌, ಭೀಮಣ್ಣ ನಾಯಕ್‌, ಅಶೋಕ್‌ ಖೇಣಿ ಮುಂತಾದವರ ಪರ ಪ್ರಚಾರ ಮಾಡುವುದಾಗಿ ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾನು ರಾಹುಲ್‌ ಗಾಂಧಿ ಅಭಿಮಾನಿ ಎಂದ ಶಿವರಾಜ್‌ ಕುಮಾರ್‌

ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರವಿಕುಮಾರ್‌ ಗೌಡ ಪರ ಇತ್ತೀಚೆಗೆ ರೋಡ್‌ ಶೋ ನಡೆಸುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿದ್ದ ನಟಿ ರಮ್ಯಾ, ಬುಧವಾರ ಟಿ. ನರಸೀಪುರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಎಚ್‌.ಸಿ ಮಹದೇವಪ್ಪ ಅವರ ಪರವೂ ಮತ ಯಾಚನೆ ಮಾಡಿದ್ದಾರೆ. ಗುರುವಾರ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ನಾನು ಮಂಡ್ಯ ಗೌಡತಿ ಎನ್ನುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದೆ ಸುಮಲತಾ ವಿರುದ್ಧ ಕಣಕ್ಕಿಳಿಯುವ ಸುಳಿವು ನೀಡಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರ ಬಗ್ಗೆ ಮೊದಲಿನಿಂದಲೂ ಅಭಿಮಾನ ಹೊಂದಿರುವ ನಟ ದುನಿಯಾ ವಿಜಯ್‌, ಕಾಂಗ್ರೆಸ್‌ ಪಕ್ಷದ ಪರವಾಗಲ್ಲದೇ ಕೇವಲ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ವರುಣಾದಲ್ಲಿ ರೋಡ್‌ ಶೋ ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತಬ್ಧ ಚಿತ್ರ ಮಾತಾಡಿದಂತೆ, ಶಬ್ದ ಕಣ್ಣಿಗೆ ಕಾಣಿಸುವಂತೆ- ಸಿನೆಮಾದ ತೆರೆಮರೆಯ ತಾತ್ವಿಕತೆ

ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ...

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...