ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಭಿವೃದ್ಧಿಗಾಗಿ ಬಹುಜನ ಸಮಾಜ ಪಕ್ಷಕ್ಕೆ (ಬಿಎಸ್ಪಿ) ಮತ ನೀಡಬೇಕು ಎಂದು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಕುಂದೂರು ರಾಜು ಮನವಿ ಮಾಡಿದ್ದಾರೆ.
ಚನ್ನರಾಯಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ, ಮೆರವಣಿಗೆ ನಡೆಸಿ ಅವರು ಮಾತನಾಡಿದರು. “ಡಾ. ಬಿ.ಆರ್ ಅಂಬೇಡ್ಕರ್ ಅವರ ಆಶಯದಂತೆ ʼಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳುʼ ಎಂಬ ಸಿದ್ಧಾಂತವನ್ನು ಜಾರಿ ಮಾಡಲು ಬಿಎಸ್ಪಿ ಕಂಕಣ ಬದ್ಧವಾಗಿದೆ. ತಾಲೂಕಿನ ಸಮಸ್ತ ಜನತೆಯ ಶ್ರೇಯ ಅಭಿವೃದ್ಧಿಗಾಗಿ ನಾವು ಸದಾ ದುಡಿಯಲು ಅವಕಾಶ ಕಲ್ಪಿಸಿಕೊಡಬೇಕು” ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಸೂಚನೆ
“ಶ್ರವಣಬೆಳಗೊಳ ಕ್ಷೇತ್ರದ ಅಭಿವೃದ್ಧಿಗಾಗಿ ಎಲ್ಲ ಮತದಾರರು ತಮ್ಮ ಅಮೂಲ್ಯವಾದ ಮತಗಳನ್ನು ಆನೆಯ ಗುರುತಿಗೆ ನೀಡಬೇಕು” ಎಂದು ವಿನಂತಿಸಿಕೊಂಡರು.
ಈ ವೇಳೆ ಬಿಎಸ್ಪಿ ಮುಖಂಡರು ಸಿ.ಜಿ ಸೋಮಶೇಖರ್, ಟಿ ಡಿ ಹರೀಶ್, ಸಿದ್ದಲಿಂಗಯ್ಯ, ಬಸವರಾಜು, ನಂಜುಂಡಸ್ವಾಮಿ, ಸೇರಿದಂತೆ ಇತರರು ಇದ್ದರು.