ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ; ಸಚಿವ ಸಂಪುಟ ರಚನೆಗೆ ಸಿಎಂ-ಡಿಸಿಎಂ ಕಸರತ್ತು

Date:

Advertisements

ನಾಲ್ಕೈದು ದಿನಗಳ ಹಗ್ಗಜಗ್ಗಾಟದ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ. ಆದರೆ, ಮುಖ್ಯಮಂತ್ರಿ ಹುದ್ದೆ ಸಮಸ್ಯೆ ಬಗೆಹರಿಯುತ್ತಿದ್ದಂತೆಯೇ ಸಚಿವ ಸಂಪುಟದ ತಲೆನೋವು ಶುರುವಾಗಿದೆ. ಶುಕ್ರವಾರ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಮತ್ತೆ ದೆಹಲಿಗೆ ತೆರಳಲಿದ್ದಾರೆ.

ಇಬ್ಬರೂ ನಾಯಕರು ತಮಗೆ ಪ್ರಬಲ ಖಾತೆಗಳು ಬೇಕು. ಜೊತೆಗೆ, ತಮ್ಮ ಆಪ್ತರಿಗೂ ಸಚಿವ ಸ್ಥಾನ ನೀಡಬೇಕೆಂದು ಕೇಳಿದ್ದಾರೆ. ರಾಜ್ಯದ 36 ಖಾತೆಗಳ ಪೈಕಿ ಸಿದ್ದರಾಮಯ್ಯ ಅವರು ಮೂರು ಖಾತೆ ಮತ್ತು ಡಿ.ಕೆ ಶಿವಕುಮಾರ್ ಎರಡು ಖಾತೆಗಳನ್ನು ತಮ್ಮಲ್ಲಿ ಇಟ್ಟುಕೊಳ್ಳಲಿದ್ದಾರೆ. ಸಿದ್ದರಾಮಯ್ಯ ಜೊತೆಗಿರುವ 10 ಶಾಸಕರು ಹಾಗೂ ಡಿ.ಕೆ ಶಿವಕುಮಾರ್‌ ಜೊತೆಗಿನ 10 ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದು. ಉಳಿದ, ಸ್ಥಾನಗಳಿಗೆ ತಾವೇ ಶಾಸಕರನ್ನು ಆಯ್ಕೆ ಮಾಡುವುದಾಗಿ ಹೈಕಮಾಂಡ್‌ ಹೇಳಿದೆ ಎಂದು ತಿಳಿದುಬಂದಿದೆ. ಮೂರು ಖಾತೆಗಳನ್ನು ಖಾಲಿ ಉಳಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಡಿ.ಕೆ ಶಿವಕುಮಾರ್ ತಮಗೆ ಹಣಕಾಸು ಖಾತೆ ಬೇಕೆಂದು ಕೇಳಿದ್ದರು. ಆದರೆ, ಮುಖ್ಯಮಂತ್ರಿಯಾದ ತಮ್ಮ ಬಳಿಯೇ ಆ ಖಾತೆ ಇರಲಿ ಎಂದು ಸಿದ್ದರಾಮಯ್ಯ ಕೇಳಿದ್ದಾರೆ. ಹೀಗಾಗಿ, ಇಂಧನ, ಜಲ ಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಪೈಕಿ ಎರಡು ಖಾತೆಗಳನ್ನು ಪಡೆದುಕೊಳ್ಳಲು ಶಿವಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ?: 24ನೇ ಸಿಎಂ ಸಿದ್ದರಾಮಯ್ಯ | ರಾಜ್ಯ ಕಂಡ ಮುಖ್ಯಮಂತ್ರಿಗಳು ಮತ್ತು ರಾಷ್ಟ್ರಪತಿ ಆಳ್ವಿಕೆಯ ಸಂಪೂರ್ಣ ವಿವರ

ಗೃಹ ಖಾತೆಯನ್ನು ಬಿ.ಕೆ ಹರಿಪ್ರಸಾದ್‌ ಅವರಿಗೆ ನೀಡುವ ಸಾಧ್ಯತೆ ಇದೆ ಎಂದೂ ತಿಳಿದುಬಂದಿದೆ. ಶುಕ್ರವಾರ ಸಚಿವರ ಪಟ್ಟಿ ಅಂತಿಮವಾಗಲಿದ್ದು, ಶನಿವಾರ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಜೊತೆಗೆ ಡಿ.ಕೆ ಶಿವಕುಮಾರ್ ಹಾಗೂ 20 ಮಂದಿ ಸಚಿವರೂ ಕೂಡ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X