ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ

Date:

ರಾಜ್ಯ ವಿಧಾನಸಭಾ ಚುನಾವಣೆಯ ಮುಖ್ಯಘಟ್ಟವಾದ ಮತದಾನ ಪ್ರಕ್ರಿಯೆ ಬುಧವಾರ ಸಂಪನ್ನಗೊಂಡಿದೆ. ಎಲ್ಲ ರಾಜಕೀಯ ನಾಯಕರು ಚುನಾವಣೆ ಪ್ರಚಾರದಿಂದ ನಿರಾಳರಾಗಿದ್ದು, ಫಲಿತಾಂಶ ಕಡೆ ದೃಷ್ಟಿ ನೆಟ್ಟಿದ್ದಾರೆ.

- Advertisement -

ಈ ನಡುವೆ ಬಹುತೇಕ ರಾಜಕೀಯ ನಾಯಕರು ಸ್ವಲ್ಪ ರಿಲ್ಯಾಕ್ಸ್‌ ಆಗಿದ್ದು, ತಮ್ಮ ತಮ್ಮ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಭಾವನಾತ್ಮಕ ಕೃತಜ್ಞತೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

“ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ತಾವೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ್ದೀರಿ. ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು” ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

“ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ತಾವು ಪ್ರಚಾರ ಮಾಡಿದ್ದಾರೆ. ಅವರೆಲ್ಲರೂ ನನಗೆ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಕೂಡಾ ಸಾಧ್ಯವಾಗಿಲ್ಲ. ಈ ಪ್ರೀತಿ ಮತ್ತು ಅಭಿಮಾನವೇ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಶಕ್ತಿ. ಇವರೆಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು” ಎಂದು ಹೇಳಿದ್ದಾರೆ.

“ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ: ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ” ಎಂದು ಆಶಯ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ...

12 ವರ್ಷಗಳ ಆಡಳಿತದ ಕೊಡುಗೆ: ಮೋದಿ ಜನ್ಮದಿನದಂದು ಸರ್ಕಾರಿ ಶಾಲೆ ಗಿಫ್ಟ್ ನೀಡಿದ ಸಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, 'ಕಾಕ್ರೋಚ್ ಜನತಾ...

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...