ಹುಬ್ಬಳ್ಳಿ ಭಾಷಣದಲ್ಲಿ ‘ಸಾರ್ವಭೌಮತ್ವ’ ಪದವನ್ನು ಸೋನಿಯಾ ಗಾಂಧಿ ಬಳಸಿಲ್ಲ; ಕಾಂಗ್ರೆಸ್‌ ಸ್ಪಷ್ಟನೆ

Date:

ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಯ ಚುನಾವಣಾ ಪ್ರಚಾರದ ಭಾಷಣದಲ್ಲಿ ‘ಸಾರ್ವಭೌಮತ್ವ’ ಎಂಬ ಪದವ ಬಳಸಿಲ್ಲ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಅವರು ಆ ಪದವನ್ನು ಬಳಸಿದ್ದಾರೆಂದು ತಪ್ಪಾಗಿ ಉಲ್ಲೇಖಿಸಿದ್ದ ಟ್ವೀಟ್ಅನ್ನು ಅಳಿಸಿದೆ.

- Advertisement -

“ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಅಖಂಡತೆಗೆ ಧಕ್ಕೆ ತರಲು ಕಾಂಗ್ರೆಸ್ ಯಾರಿಗೂ ಅವಕಾಶ ನೀಡುವುದಿಲ್ಲ” ಎಂದು ಸೋನಿಯಾ ಗಾಂಧಿ ಹೇಳಿದ್ದಾಗಿ ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಿತ್ತು. ಸಾರ್ವಭೌಮತೆ ಕುರಿತು ಮಾತನಾಡಿರುವ ಸೋನಿಯಾ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸೋನಿಯಾ ಗಾಂಧಿ ಅವರ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗವು ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್‌ ಜಾರಿ ಮಾಡಿತ್ತು. ನೋಟಿಸ್‌ ಉತ್ತರಿಸಿರುವ ಕಾಂಗ್ರೆಸ್, ‘ಸೋನಿಯಾ ಗಾಂಧಿ ಅವರು ಸಾರ್ವಭೌಮತ್ವ ಪದ ಬಳಸಿಲ್ಲ’ ಎಂದು ಸ್ಪಷ್ಟಪಡಿಸಿದೆ.

“ಮೇ 6ರಂದು ಹುಬ್ಬಳ್ಳಿಯಲ್ಲಿ ಭಾಷಣ ಮಾಡಿದ್ದ ಸೋನಿಯಾ ಗಾಂಧಿ ‘ಸಾರ್ವಭೌಮತ್ವ’ ಎಂಬ ಪದವನ್ನು ಎಂದಿಗೂ ಬಳಸಿಲ್ಲ. ಅವರ ಭಾಷಣವನ್ನು ತಪ್ಪಾಗಿ ವರದಿ ಮಾಡಲಾಗಿದ್ದರಿಂದ, ಅದನ್ನು ಅಳಿಸಲಾಗಿದೆ” ಕಾಂಗ್ರೆಸ್ ಬುಧವಾರ ಟ್ವೀಟ್ ಮಾಡಿದೆ. ಟ್ವೀಟ್‌ನಲ್ಲಿ ಸೋನಿಯಾ ಗಾಂಧಿ ಅವರ ಹಿಂದಿ ಭಾಷಣದ ಪ್ರತಿ ಮತ್ತು ಯೂಟ್ಯೂಬ್‌ ವಿಡಿಯೋ ಲಿಂಕ್‌ಅನ್ನು ಹಂಚಿಕೊಂಡಿದೆ.

ಸೋನಿಯಾ ಗಾಂಧಿ ಮತ್ತು ಅವರ ಪಕ್ಷದ ಮಾನ್ಯತೆಯ ವಿರುದ್ಧ ಎಫ್‌ಐಆರ್‌ಗೆ ಕೋರಿ ಚುನಾವಣಾ ಆಯೋಗಕ್ಕೆ ಸೋಮವಾರ ಬಿಜೆಪಿಯ ಟೀಕೆಗೆ ಸಂಬಂಧಿಸಿದಂತೆ ಗಲಾಟೆ ಸ್ಫೋಟಗೊಂಡಿದೆ. ಪಕ್ಷದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಸ್ಪಷ್ಟಪಡಿಸಲು ಮತ್ತು ಸರಿಪಡಿಸಲು ಚುನಾವಣಾ ಸಮಿತಿಯು ಕಾಂಗ್ರೆಸ್‌ಗೆ ಕೇಳಿದೆ.

ಈ ಸುದ್ದಿ ಓದಿದ್ದೀರಾ?: ಈಗೇನಿದ್ದರೂ `ಆಪರೇಷನ್’ದೇ ಮಾತುಕತೆ!

ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಬಿಜೆಪಿ, “ಭಾರತದ ಒಕ್ಕೂಟದಲ್ಲಿ ಕರ್ನಾಟಕವು ಅತ್ಯಂತ ಪ್ರಮುಖ ಸದಸ್ಯ ರಾಜ್ಯವಾಗಿದೆ. ಭಾರತದ ಒಕ್ಕೂಟದ ಸದಸ್ಯ ರಾಜ್ಯದ ಸಾರ್ವಭೌಮತ್ವವನ್ನು ರಕ್ಷಿಸುವ ಯಾವುದೇ ಕರೆಯು ಪ್ರತ್ಯೇಕತೆಯ ಕರೆಗೆ ಸಮಾನವಾಗಿರುತ್ತದೆ. ಇದು ಅಪಾಯಕಾರಿ ಮತ್ತು ವಿನಾಶಕಾರಿಯಾಗಿದೆ. ಪ್ರಸ್ತುತ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಅವರು ಇಂತಹ ಮಾತುಗಳನ್ನು ಆಡಬಾರದು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...