ಅಗೌರವದಿಂದ ಮಾತನಾಡುವುದನ್ನು ನಿಲ್ಲಿಸಿ; ರೇವಣ್ಣಗೆ ಶಿವಲಿಂಗೇಗೌಡ ಎಚ್ಚರಿಕೆ

Date:

Advertisements
  • ʼರೇವಣ್ಣ ಅವರು ಏಕವಚನದಲ್ಲಿ ಕಳ್ಳನನ್ನು ಬೆಳೆಸಿಬಿಟ್ಟೆ ಎಂದಿದ್ದಾರೆʼ
  • ʼಸಾಮಾನ್ಯ ಹಳ್ಳಿ ರೈತನ ಮಗನಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದೀನಿʼ

ರೇವಣ್ಣ ಅವರೇ ನಾನು ನಿಮ್ಮ ಬಗ್ಗೆ ಏಕವಚನದಲ್ಲಿ ಮಾತಾಡಬಹುದು. ಆದರೆ, ಹಾಗೆ ಮಾಡಲ್ಲ. ಅಗೌರವದಿಂದ ಮಾತನಾಡುವುದನ್ನು ನೀವು ಮೊದಲು ನಿಲ್ಲಿಸಿ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಮಾಜಿ ಶಾಸಕ ಕೆ ಎಂ ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ದಿನ ದೇವೇಗೌಡರು, ರೇವಣ್ಣ ಅವರು ಸತ್ಯ ಮರೆ ಮಾಚುವಂಥ ಮೂರ್ನಾಲ್ಕು ಆಪಾದನೆಗಳನ್ನು ನನ್ನ ಮೇಲೆ ಮಾಡಿದ್ದಾರೆ. ದೇವೇಗೌಡರ ಬಗ್ಗೆ ಅಪಾರ ಗೌರವವಿದೆ. ಅವರು ಇಂತಹ ಕೆಲಸ ಮಾಡಬಾರದು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ತೆಂಗಿನಮರ ನಾಶವಾದಾಗ ರೈತರಿಗೆ ಪರಿಹಾರ ನೀಡಿ ಎಂದು ಹೋರಾಟ ಮಾಡಿ ಮಲಗಿದರೆ, ನಾಟಕ ಎಂದು ಹೇಳ್ತಾರಲ್ಲ. ಇದು ಅವರಿಗೆ ಗೌರವ ತರುವ ಕೆಲಸನಾ? ನಾನು ಏನಕ್ಕೆ ಮಲಗಿದ್ದೆ ಎಂದು ಅರಸೀಕೆರೆ ತಾಲೂಕಿನ ಜನಕ್ಕೆ ಗೊತ್ತಿದೆ. ಪಾಪ ಅವರಿಗೆ ಭಗವಂತ ಒಳ್ಳೆಯದು ಮಾಡಲಿ, ನಾನೇನು ದ್ವೇಷ ಮಾಡಲ್ಲ” ಎಂದಿದ್ದಾರೆ.

Advertisements

“ರಾಜಕೀಯವಾಗಿ ನಾನು ಬೆಳೆದಿದ್ದು ನನಗೆ ಗೊತ್ತಿದೆ. ರೇವಣ್ಣ ಅವರು ಏಕವಚನದಲ್ಲಿ ಕಳ್ಳನನ್ನು ಬೆಳೆಸಿಬಿಟ್ಟೆ ಎಂದಿದ್ದಾರೆ. ಅವರು ಏನು ಬೆಳೆಸಿರೋದು, ಎಷ್ಟು ಕೊಟ್ಟಿರೋದು, ಏನು ಕೊಟ್ಟಿದ್ದಾರೆ. ನಾನು ಹೇಗೆ ಬೆಳೆದಿದ್ದೀನಿ ಅಂತ ನನಗೆ ಗೊತ್ತಿದೆ” ಎಂದು ತಿರುಗೇಟು ನೀಡಿದ್ದಾರೆ.

“ಅರಸೀಕೆರೆ ಕ್ಷೇತ್ರದಲ್ಲಿ ಜೆಡಿಎಸ್‌ಗೆ 13 ಸಾವಿರ ಮತಗಳಷ್ಟೇ ಬರುತ್ತಿದ್ದವು. ಬೇಕಾದರೆ ತೆಗೆದು ನೋಡಲಿ. ನಾನು ಸ್ಪರ್ಧಿಸಿದ ಬಳಿಕ 80 ಸಾವಿರ ಮತಗಳು ಬಂದಿದ್ದು, ಹೆಚ್ಚಾಗಿದ್ದು ಏಕೆ ಎಂಬುದನ್ನು ಇವರು ತಿಳಿದುಕೊಳ್ಳಬೇಕು. ಎಂಪಿ ಚುನಾವಣೆಯಲ್ಲಿ ಎಷ್ಟು ಓಟು ಕೊಡುತ್ತಿದ್ದೇನೆ. ಇದೆಲ್ಲಾ ಸುಳ್ಳಾ, ಅಂಕಿ ಅಂಶಗಳನ್ನು ತೆಗೆದು ನೋಡಲಿ” ಎಂದು ಗುಡುಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ಬಿಇಒ ಬಲರಾಮ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ; ಎಚ್ ಪಿ ಸ್ವರೂಪ್ ಕಿಡಿ

“ಈ ಬಾರಿ ಅರಸೀಕೆರೆಯಲ್ಲಿ ಚುನಾವಣೆ ಮಾಡಲಿ ಗೊತ್ತಾಗುತ್ತೆ. ಪಾಪ ಟಿಕೆಟ್ ಕೊಡುತ್ತೇನೆಂದು ಬಾಣಾವರ ಆಶೋಕ್ ಅವರನ್ನು ಕರೆದುಕೊಂಡು ಬಂದು ಇವರು ಮಾಡಿದ್ದು ಮೋಸ ಅಲ್ವಾ? ಈಗ ಅವನ್ಯಾರೋ ಬಿಜೆಪಿಯಲ್ಲಿ ಇದ್ದವನನ್ನು ಕರೆದುಕೊಂಡು ಬಂದು ಹೋರಾಟ ಮಾಡುತ್ತಿದ್ದಾರಲ್ಲಾ ಮಾಡಲಿ” ಎಂದು ಸವಾಲು ಹಾಕಿದ್ದಾರೆ.

“ನಿಮ್ಮ ಘನತೆ, ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಿಕೊಳ್ಳಬೇಡಿ. ನನಗೂ ನೋವಿದೆ ರೇವಣ್ಣ ಅವರೇ, ನಿಮ್ಮ ಬಗ್ಗೆ ಮಾತನಾಡಲ್ಲ. ಸಭೆ, ಸಮಾರಂಭಗಳಲ್ಲಿ ಗೌರವದಿಂದ ಮಾತನಾಡಿ” ಎಂದು ಎಚ್ಚರಿಸಿದ್ದಾರೆ.

“ನೀವೇನು ಎಲ್ಲವನ್ನೂ ತಂದು ಹಾಕಿಲ್ಲ, ನಾನೂ ಕಷ್ಟಪಟ್ಟು ಮೇಲೆ ಬಂದಿದ್ದೀನಿ. ನಾನೇನು ಮಾಜಿ ಪ್ರಧಾನಿಯ ಮಗ ಅಲ್ಲ, ವಂಶಸ್ಥನೂ ಅಲ್ಲ. ಸಾಮಾನ್ಯ ಹಳ್ಳಿ ರೈತನ ಮಗನಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದೀನಿ” ಎಂದು ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X