ಚುನಾವಣಾ ಬಿಸಿಯಲ್ಲಿದ್ದ ಕಾರ್ಯಕರ್ತರಿಗೆ ಪೊಲೀಸರ ಚಾಟಿ : 22 ಕೋಟಿ ದಂಡ

Date:

Advertisements
  • ಪ್ರಚಾರದ ವೇಳೆ ನಿಯಮ ಉಲ್ಲಂಘಿಸಿದ ಕಾರ್ಯಕರ್ತರಿಗೆ ಬಿಸಿ
  • ಕ್ಯಾಮರಾ ಕಣ್ಗಾವಲ್ಲಿ ಸೆರೆಯಾದ ಲಕ್ಷ ಲಕ್ಷ ಟ್ರಾಫಿಕ್ ಪ್ರಕರಣಗಳು

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದ ಎಲ್ಲ ಪಕ್ಷಗಳ ಕಾರ್ಯಕರ್ತರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಚೆನ್ನಾಗಿ ಬಿಸಿ ಮುಟ್ಟಿಸಿದ್ದಾರೆ.

ರೋಡ್ ಶೋ, ಬಹಿರಂಗ ಪ್ರಚಾರಗಳಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು, ಮತ್ತವರ ಬೆಂಬಲಿಗರ ಟ್ರಾಫಿಕ್ ವೈಲೇಷನ್‌ಗಳನ್ನು ದಾಖಲಿಸಿರುವ ಪೊಲೀಸರು ನಾಲ್ಕು ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿ, 22.89 ಕೋಟಿ ದಂಡ ಹಾಕಿದ್ದಾರೆ.

ಹೌದು ಪ್ರಚಾರದ ಭರಾಟೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಎಲ್ಲ ರಾಜಕೀಯ ಪಕ್ಷಗಳ ಕಾರ್ಯಕರ್ತರಿಗೆ ಪೊಲೀಸರು ದಂಡದ ನೋಟಿಸ್ ಕಳುಹಿಸಿದ್ದಾರೆ. ನೀತಿ ಸಂಹಿತೆ ಜಾರಿ ಬಳಿಕ ನಿಯಮ ಮೀರಿ ಹೆಚ್ಚುವರಿ ವಾಹನ ಬಳಕೆ ಮಾಡಿರುವ ಪ್ರಕರಣಗಳೇ ಇವುಗಳಲ್ಲಿ ಜಾಸ್ತಿ ಇದ್ದು ಇವುಗಳೆ ಹೆಚ್ಚಿನ ದಂಡಕ್ಕೆ ಕಾರಣವಾಗಿವೆ.

Advertisements

ಈ ಸುದ್ದಿ ಓದಿದ್ದೀರಾ?:ರಾಜ್ಯದ 34 ಕಡೆ ಮತ ಎಣಿಕೆ : ಕೌಂಟಿಂಗ್…

ಬೆಂಗಳೂರು ನಗರದವೊಂದರಲ್ಲೇ 25 ದಿನದಲ್ಲಿ 4.12 ಲಕ್ಷ ಪ್ರಕರಣ ದಾಖಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಚುನಾವಣೆ ಪ್ರಚಾರದ ವಾಹನಗಳ ಮೇಲೆ ಬರೋಬ್ಬರಿ 22.89 ಕೋಟಿ ದಂಡ ಬಿದ್ದಿದೆ. ಇವುಗಳಲ್ಲಿ ಅತಿ ವೇಗದ ಚಾಲನೆ, ಸಿಗ್ನಲ್ ಜಂಪ್, ಜೀಬ್ರಾ ಕ್ರಾಸಿಂಗ್, ಹೆಲ್ಮೆಟ್ ರಹಿತ ಚಾಲನೆ, ಚಾಲನೆ ವೇಳೆ ಮೊಬೈಲ್ ಬಳಕೆ, ತ್ರಿಬಲ್ ರೇಡಿಂಗ್ ಸೇರಿದಂತೆ ಕೇಸ್‌ಗಳು ದಾಖಲಾಗಿವೆ.

ಗಮನಾರ್ಹ ವಿಚಾರ ಏನೆಂದರೆ ನಿಯಮ ಉಲ್ಲಂಘನೆಯ ಈ ಪ್ರಕರಣಗಳು ಹೆಚಾಗಿ ದಾಖಲಾಗಿರುವುದು ಸ್ಮಾರ್ಟ್ ಟ್ರಾಫಿಕ್ ಮೇಂಟೆನೆನ್ಸ್ ನ ಕ್ಯಾಮರಾಗಳಿಂದ ಎನ್ನುವುದು.

ನಗರದಾದ್ಯಂತ ಇರುವ 250 ಐಟಿಎಂಎಸ್ ಕ್ಯಾಮರಾಗಳ ದಾಖಲೆಗಳೊಂದಿಗೆ ಈ ಫೈನ್ ಹಾಕಲಾಗಿದೆ. ಇದರ ಜೊತೆಗೆ ನಿರ್ಭಯಾ ಫಂಡ್ ಅಡಿ ಹಾಕಲಾದ ನೇತ್ರ ಕ್ಯಾಮೆರಾಗಳನ್ನು ದಂಡ ವಿಧಿಸಲು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಇದರ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದೆನ್ನುವುದು ಇಲಾಖೆ ಮೂಲಗಳ ಮಾಹಿತಿ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X