ಬಿಜೆಪಿಯಿಂದ ಮಂತ್ರಿಗಿರಿಯ ಆಫರ್‌ ಬಂದಿತ್ತು; ರಮ್ಯ

Date:

Advertisements

ಕಾಂಗ್ರೆಸ್‌ ಪರ ಚುನಾವಣಾ ಪ್ರಚಾರ ಮಾಡಲಿರುವ ರಮ್ಯ

ರಾಜಕೀಯ ಮರು ಪ್ರವೇಶದ ಸುಳಿವು ನೀಡಿದ ಮಾಜಿ ಸಂಸದೆ

ಕಳೆದ ಕೆಲ ವರ್ಷಗಳಿಂದ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಖ್ಯಾತ ನಟಿ, ಮಾಜಿ ಸಂಸದೆ ರಮ್ಯ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಪರ ಪ್ರಚಾರಕ್ಕಿಳಿಯುತ್ತಿದ್ದಾರೆ. ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿರುವ ಹೊತ್ತಿನಲ್ಲೇ ತಮಗೆ ಬಿಜೆಪಿ ಮತ್ತು ಜೆಡಿಎಸ್‌ನಿಂದಲೂ ಆಫರ್‌ ಬಂದಿತ್ತು ಎಂದು ಅಚ್ಚರಿ ಮೂಡಿಸಿದ್ದಾರೆ.

Advertisements

ಶನಿವಾರ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ರಮ್ಯ, ತಾವು ಕಾಂಗ್ರೆಸ್‌ ಪಕ್ಷ ತೊರೆದ ಬಗ್ಗೆ, ಈಗ ಮತ್ತದೇ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಮಾತನಾಡಿದ್ದಾರೆ. “2019ರ ಲೋಕಸಬಾ ಚುನಾವಣೆಗೂ ಮುನ್ನ ಅನಾರೋಗ್ಯದ ಕಾರಣದಿಂದಾಗಿ ನಾನು ರಾಜಕೀಯದಿಂದ ಹಿಂದೆ ಸರಿಯಲು ನಿರ್ಧರಿಸಿದೆ. ಈ ಬಗ್ಗೆ ನಾನು ನೇರವಾಗಿ ರಾಹುಲ್‌ ಗಾಂಧಿ ಅವರೊಂದಿಗೆ ಮಾತನಾಡಿದಾಗ ಅದಕ್ಕವರು ಒಪ್ಪಲಿಲ್ಲ. ಆದರೆ, ನನಗೆ ಎಲ್ಲದರಿಂದಲೂ ಬಿಡುವು ಬೇಕಿತ್ತು. ಹೀಗಾಗಿ ಕೆಲ ಕಾಲ ದೂರ ಉಳಿದುಕೊಂಡಿದ್ದೆ. ಈಗ ಕೆ.ಸಿ ವೇಣುಗೋಪಾಲ್‌ ಮತ್ತು ಸುರ್ಜೇವಾಲಾ ಅವರು ಪಕ್ಷದ ಪರವಾಗಿ ಪ್ರಚಾರ ಮಾಡುವಂತೆ ನನ್ನನ್ನು ಸಂಪರ್ಕಿಸಿದರು. ಎಲ್ಲ ಅಭ್ಯರ್ಥಿಗಳ ಪ್ರಚಾರ ಮಾಡಲು ಸಾಧ್ಯವಾಗುವುದಿಲ್ಲ. ಕೆಲವು ಅಗತ್ಯ ಕ್ಷೇತ್ರಗಳಲ್ಲಿ ನಾನು ಕಾಂಗ್ರೆಸ್‌ ಪರ ಮತ ಯಾಚನೆ ಮಾಡಲಿದ್ದೇನೆ” ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ತಮಗೆ ಬಿಜೆಪಿಯಿಂದ ಆಫರ್‌ ಬಂದ ಬಗ್ಗೆ ಮಾತನಾಡಿರುವ ರಮ್ಯ, “ಈ ಬಾರಿಯ ಚುನಾವಣೆ ಘೋಷಣೆಯಾಗುವುದಕ್ಕೂ ಮೊದಲು ಬಿಜೆಪಿಯ ಪ್ರಮುಖ ನಾಯಕರೇ ನನ್ನನ್ನು ಸಂಪರ್ಕಿಸಿ ಪಕ್ಷ ಸೇರಿಕೊಳ್ಳುವಂತೆ ಆಹ್ವಾನಿಸಿದ್ದರು. ನಾನು ಕಾಂಗ್ರೆಸ್‌ ಪಕ್ಷದ ಜೊತೆಗಿನ ಸಂಬಂಧ ಕಡಿದುಕೊಂಡಿದ್ಧೇನೆ ಎಂದುಕೊಂಡಿದ್ದರು. ಹೀಗಾಗಿ ಬಿಜೆಪಿ ಸೇರಿದರೆ ಮಂತ್ರಿ ಪದವಿಯನ್ನು ನೀಡುವುದಾಗಿಯೂ ಹೇಳಿದ್ದರು. ಬಿಜೆಪಿ ಮಾತ್ರವಲ್ಲದೆ ಜೆಡಿಎಸ್‌ನಿಂದಲೂ ಆಫರ್‌ ಬಂದಿತ್ತು. ಒಮ್ಮೆ ಆಕಸ್ಮಿಕವಾಗಿ ಕುಮಾರಸ್ವಾಮಿ ಅವರು ಭೇಟಿಯಾಗಿದ್ದರು. ಆಗ ನಿಮ್ಮಂಥ ಸಮರ್ಥರು ರಾಜಕಾರಣದಿಂದ ದೂರ ಇರಬಾರದು. ನೀವು ಮತ್ತೆ ಸಕ್ರಿಯ ರಾಜಕಾರಣಕ್ಕೆ ಬರಬೇಕು ಎಂದು ಪರೋಕ್ಷವಾಗಿ ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದರು. ಆದರೆ, ನಾನು ಎಂದು ಮಾಹಿತಿ ನೀಡಿದ್ದಾರೆ. ಉದಾರವಾದಿ ಸಿದ್ಧಾಂತವನ್ನು ನಂಬಿದವಳು ಹೀಗಾಗಿ ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷಕ್ಕೆ ಹೋಗಲಾರೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೈತ ನಾಯಕ ಪುಟ್ಟಣ್ಣಯ್ಯನವರ ಮಗನ ಪರ ದರ್ಶನ್‌ ಪ್ರಚಾರ : ರೈತರ ರಾಯಭಾರಿ ಎಂದ ಅಭಿಮಾನಿಗಳು

“ಕೇವಲ ಬಿಜೆಪಿ ಮತ್ತು ಜೆಡಿಎಸ್‌ನಿಂದ ಮಾತ್ರವಲ್ಲ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್‌ನಿಂದಲೂ ಆಫರ್‌ ಇತ್ತು. ಆರು ವಿಧಾನಸಭಾ ಕ್ಷೇತ್ರಗಳನ್ನು ಸೂಚಿಸಿ, ಆಯ್ಕೆಗೆ ಅವಕಾಶ ಕೊಟ್ಟಿದ್ದರು. ಆದರೆ, ಸದ್ಯಕ್ಕೆ ಚುನಾವಣಾ ಸ್ಪರ್ಧೆ ಬೇಡ ಎಂದು ನಿರಾಕರಿಸಿದೆ. ಈ ಬಾರಿ ಪಕ್ಷದ ಪರ ಚುನಾವಣಾ ಪ್ರಚಾರ ಮಾಡುತ್ತೇನಷ್ಟೇ” ಎನ್ನುವ ಮೂಲಕ ಸದ್ಯದಲ್ಲೇ ರಾಜಕೀಯ ಪ್ರವೇಶಿಸುವ ಬಗ್ಗೆ ಸುಳಿವು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X