ಮೂರು ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿ: ಗೃಹ ಸಚಿವ ಪರಮೇಶ್ವರ್

Date:

Advertisements

ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರು ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈ ರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ” ಎಂದರು.

“ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದೆ.‌ ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ” ಎಂದು‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರಿಗೆ ತೆರಳಲು ನನಗೆ ಸಿಎಂ ಸೂಚನೆ ನೀಡಿಲ್ಲ, ಚರ್ಚಿಸಿದ್ದಾರಷ್ಟೇ: ಬಿ ಕೆ ಹರಿಪ್ರಸಾದ್‌

“ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ. ಮೂರು ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ. ದ್ವೇಷ ಭಾವನೆ ಬಂದರೆ ಸಮಾಜ ಎಲ್ಲಿ ಉಳಿಯುತ್ತದೆ. ಜನರು ಅಲ್ಲಿ ಜೀವನ ಮಾಡಲು ಆಗುತ್ತದೆಯೇ? ಇದನ್ನು ಸರ್ಕಾರ ನೋಡಿಕೊಂಡು ಸುಮ್ಮನೆ ಇರುವುದಿಲ್ಲ” ಎಂದರು.

“ಮಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ತನಿಖೆಯಲ್ಲಿ ಗಂಭೀರವಾದ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ‌ಕ್ರಮ ತೆಗೆದುಕೊಳ್ಳುತ್ತೇವೆ. ಜನಪ್ರತಿನಿಧಿಗಳು ಶಾಂತಿ ನೆಲೆಸುವ ನಿಟ್ಟಿನಲ್ಲಿ ಸಹಕಾರ ಮಾಡಬೇಕು. ಪ್ರಚೋದನೆ ಮಾಡಲು‌ ಹೋದರೆ‌ ನಿಲ್ಲಿಅಲು ಹೇಗೆ ಸಾಧ್ಯ. ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲು ಸೂಚನೆ ನೀಡಿದ್ದೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ...

ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...

Download Eedina App Android / iOS

X