ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ

Date:

Advertisements

ಉತ್ತರ ಕನ್ನಡ ಜಿಲ್ಲೆ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. 6 ಕಾರುಗಳಲ್ಲಿ ಬಂದಿರುವ 24 ಕ್ಕೂ ಹೆಚ್ಚು ಇ.ಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸೈಲ್ ಬೆಂಗಳೂರಿನಲ್ಲಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್​ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್​​ನಲ್ಲಿ ಜಾಮೀನು ಪಡೆದುಕೊಂಡಿದ್ದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಪುಟದಿಂದ ರಾಜಣ್ಣ ವಜಾ- ಕಾಂಗ್ರೆಸ್ಸಿಗರಿಗೆ ಪಾಠವಾಗುವುದೇ?

ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್​​ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಆನಂತರ ಜೈಲು ಪಾಲಾಗಿದ್ದ ಅವರು ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು.

ನಂತರ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸೈಲ್ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನವೆಂಬರ್​​​ನಲ್ಲಿ ವಿಚಾರಣೆ ನಡೆಸಿದ್​ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಸೈಲ್​​​ಗೆ ವಿಧಿಸಿರುವ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಡಲು ಸೂಚಿಸಿತ್ತು. ದಂಡದ ಮೊತ್ತದ ಶೇ 25 ರಷ್ಟನ್ನು ಠೇವಣಿ ಇಡುವಂತೆ ಸೂಚನೆ ನೀಡಿದ್ದ ಹೈಕೋರ್ಟ್ ಸೈಲ್​ಗೆ ಜಾಮೀನು ನೀಡಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

Download Eedina App Android / iOS

X