ವಿಜಯಪುರ | ನೂತನ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಒದಗಿಸಲು ಮನವಿ

Date:

Advertisements

ನಗರದ ಗಾಂಧಿ ಚೌಕ್‌ನಲ್ಲಿ ಪ್ರಾರಂಭವಾಗಿರುವ ಸರ್ಕಾರಿ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಸದಸ್ಯರು ಜಿಲ್ಲಾಧಿಕಾರಿಗಳಿಗೆ ಅಕ್ಟೋಬರ್‌ ಎರಡರಂದು ಮನವಿ ಸಲ್ಲಿಸಿದ್ದಾರೆ.

ಗಾಂಧಿ ಚೌಕ್‌ನಲ್ಲಿರುವ ಸರ್ಕಾರಿ ಗ್ರಂಥಾಲಯ ನಿರ್ಮಾಣವಾಗಿ ಕಾರ್ಯಾರಂಭ ಮಾಡಿದೆ. ಆದರೆ, ಅದನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ. ಕಟ್ಟಡ ಈಗಾಗಲೇ ಸೋರುತ್ತಿದೆ. ಗುತ್ತಿಗೆದಾರರಿಗೆ ನೀಡಿದ ನಿಯಮಗಳ ಪ್ರಕಾರ ಅವರು ಕೇಲವು ತಿಂಗಳ ಹಿಂದೆಯೇ ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಮುಗಿಸಿ, ನಗರದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕಾಗಿತ್ತು. ಇಲ್ಲಿಯವರೆಗೂ ಆ ಕಾರ್ಯ ಸಾಧ್ಯವಾಗಿಲ್ಲ. ಏಷ್ಟೋ ಸಾರಿ ಸಂಬಂಧ  ಪಟ್ಟ ಅಧಿಕಾರಿಗಳಿಗೆ ಮನವರಿಕೆ ಮಾಡಿದರೂ ಮತ್ತು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಡಿವಿಪಿ ಕಾರ್ಯಕತ್ರರು ಆರೋಪಿಸಿದ್ದಾರೆ.

ಈ ನಗರಕ್ಕೆ ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಸಾವಿರಾರು ವಿದ್ಯಾರ್ಥಿಗಳು ಬರುತ್ತಾರೆ. ಸರ್ಕಾರಿ ಗ್ರಂಥಾಲಯ ಮತ್ತು ಪುಸ್ತಕಗಳ ಅವಶ್ಯಕತೆ ಅವರಿಗಿದೆ. ಅವರಿಗೆ ಬೇಕಾದ ಪುಸ್ತಕಗಳನ್ನು ಒದಗಿಸಿ ಕೊಡಿ ಎಂದು ಹಲವು ಬಾರಿ ಕೇಳಿದರೂ, ಅಧಿಕಾರಿಗಳು ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಸುತ್ತಿಲ್ಲ. ಈಗಿರುವ ಶಾಸ್ತ್ರಿ ಮಾರ್ಕೆಟ್ ಗ್ರಂಥಾಲಯದಲ್ಲಿ ಯಾವುದೇ ಮೂಲಭೂತ ವ್ಯವಸ್ಥೆ ಇಲ್ಲ. ಕೆಲವು ಸಾರ್ವಜನಿಕರು ಕುಡಿದು ಅಲ್ಲೇ ಮಲಗಿಕೊಳ್ಳುತ್ತಾರೆ. ಸರಿಯಾದ ಸಮಯಕ್ಕೆ ಸಿಬ್ಬಂದಿ ಕೆಲಸಕ್ಕೆ ಬರುವುದಿಲ್ಲ. ತಾವು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಗ್ರಂಥಾಲಯದ ಕಾಮಗಾರಿಯನ್ನ ಸಂಪೂರ್ಣವಾಗಿಸಿ, ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯವನ್ನು ಒದಗಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

Advertisements

ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್, ಆನಂದ ಮುದುರ್, ಮಾದೇಶ್ ಛಲವಾದಿ, ದರ್ಶನ್ ಸಾಲೋಟಗಿ, ಪ್ರಭು ಹೊಸಮನಿ, ಅಸ್ಲಾಂ, ಮಂಜು, ರವಿ, ಶಕೀಲ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಜಯಪುರ-ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ...

ವಿಜಯಪುರ | ಮೇ 27ರಿಂದ ‘ಮೇ ಸಾಹಿತ್ಯ ಮೇಳ’: ಹರ್ಷ ಮಂದರ್, ತೀಸ್ತಾ, ಪ್ರಕಾಶ್ ಅಂಬೇಡ್ಕರ್ ಭಾಗಿ

‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆ ಎರಡು...

ವಿಜಯಪುರ | ನಕಲಿ ಮತದಾನ ಆರೋಪ; ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ದೂರು

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದನಾ ಮಾಡಿದ್ದಾರೆ...

ಸಾರ್ವಜನಿಕವಾಗಿ ಖಡ್ಗ ಜಳಪಿಸಿದ್ದ ಯತ್ನಾಳ್ ಬೆಂಬಲಿಗನ ಬಂಧನ : ಅಲೋಕ್​ ಕುಮಾರ್

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ; ಜನರಲ್ಲಿ ಭಯದ ವಾತವರಣ ಯತ್ನಾಳ್ ಬೆಂಬಲಿಗ ಖಡ್ಗ ಜಳಪಿಸಿರುವ...

Download Eedina App Android / iOS

X