ವಿಜಯಪುರ | ಸೈನಿಕ ಶಾಲೆಯಲ್ಲಿ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾವಳಿ

Date:

Advertisements

ವಿಜಯಪುರದ ಸೈನಿಕ ಶಾಲೆಯ ಆವರಣದಲ್ಲಿ ಅಖಿಲ ಭಾರತ ಮಟ್ಟದ ಟೇಬಲ್ ಟೆನಿಸ್ ಕ್ರೀಡಾಂಗಣ ಸಜ್ಜಾಗಿದೆ. ಈ ಕ್ರೀಡಾಂಗಣದಲ್ಲಿ ಅಖಿಲ ಭಾರತ ಮಟ್ಟದ ಐಪಿಎಸ್‌ಸಿ ಒಕ್ಕೂಟದ ಶಾಲೆಗಳ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿಯಾಗಿ ನಡೆದಿದೆ.

ಕರ್ನಾಟಕದ ನಾನಾ ಜಿಲ್ಲೆ, ಮಧ್ಯಪ್ರದೇಶ, ಒಡಿಶಾ ಮೊದಲಾದ ರಾಜ್ಯಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದು, ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಧ್ಯಪ್ರದೇಶದ ಇಂದೋರ್‌ನ ಎಂಬ್ರಾಲ್ಡ್ ಹೈಟ್ ಇಂಟರ್ನ್ಯಾಷನಲ್ ಸ್ಕೂಲ್, ಗ್ವಾಲಿಯರ್‌ನ ಸಿಂಧ್ಯಾ ಕನ್ಯಾ ವಿದ್ಯಾಲಯ ಸೇರಿದಂತೆ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ರೆಸಿಡೆನ್ಸಿ ಸೈನಿಕ ಶಾಲೆಯ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದರು.

ಹಲವಾರು ವಿಭಾಗಗಳಲ್ಲಿ ಅಗ್ರಗಣ್ಯ ಸಾಧನೆ ಮಾಡಿ ಮಧ್ಯಪ್ರದೇಶ ತಂಡವು ಬಂಗಾರದ ಪದಕ ತನ್ನದಾಗಿಸಿಕೊಂಡಿತು. ಸೈನಿಕ ಶಾಲೆಗೆ ಬೆಳ್ಳಿ ಪದಕ ಲಭಿಸಿತು.

Advertisements

12ವರ್ಷ, 14ವರ್ಷ, 17ವರ್ಷ ಹಾಗೂ 19ವರ್ಷದೊಳಗಿನ ಯುವ ಬಾಲಕಿಯರ ಸಿಂಗಲ್ಸ್‌ನಲ್ಲಿ ಪ್ರಥಮ ಸ್ಥಾನವನ್ನು ಇಂದೋರ್‌ನ ಎಂಬ್ರಾಲ್ಡ್ ಹೈಟ್ ಇಂಟರ್ನ್ಯಾಷನಲ್ ಶಾಲೆ ಪಡೆದುಕೊಳ್ಳುವ ಮೂಲಕ ಬಂಗಾರದ ಪದಕ ಗೆದ್ದುಕೊಂಡಿತು. 12ವರ್ಷ ಮತ್ತು 14ವರ್ಷದೊಳಗಿನ ಯುವ ಬಾಲಕಿಯರ ಸಿಂಗಲ್ಸ್‌ಲ್ಲಿ ಅತಿಥೇಯ ವಿಜಯಪುರದ ಸೈನಿಕ ಶಾಲೆ ಬೆಳ್ಳಿ ಪದಕ ತನ್ನದಾಗಿಸಿಕೊಂಡಿತು.

17ವರ್ಷ ಹಾಗೂ 19ವರ್ಷದೊಳಗಿನ ಯುವ ಬಾಲಕಿಯರ ಸಿಂಗಲ್ಸ್‌ನನಲ್ಲಿ ಮಧ್ಯಪ್ರದೇಶದ ಗ್ವಾಲಿಯರ್‌ನ ಸಿಂಧ್ಯಾ ಕನ್ಯಾ ವಿದ್ಯಾಲಯ ತಂಡ ಬೆಳ್ಳಿ ಪದಕ ಪಡೆದರೆ, 12ವರ್ಷ, 14ವರ್ಷ ಹಾಗೂ 17 ವರ್ಷದೊಳಗಿನ ಯುವ ಬಾಲಕಿಯರ ಸಿಂಗಲ್ಸ್‌ನಲ್ಲಿ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ರೆಸಿಡೆನ್ಸಿ ಸೈನಿಕ ಸ್ಕೂಲ್ ತಂಡ ಕಂಚಿನ ಪದಕ ಪಡೆದುಕೊಂಡಿತು.

ಸೈನಿಕ ಶಾಲೆ ವಿಜಯಪುರದ ಕ್ರೀಡಾಪಟುಗಳಾದ 12 ವರ್ಷದೊಳಗಿನ ಯುವ ಬಾಲಕಿಯರ ಸಿಂಗಲ್ಸ್‌ನಲ್ಲಿ ಲಾವಣ್ಯ, ಪ್ರಿಯಾಂಕ, ಸಾನ್ವಿ ಹೂಗಾರ್ ಮತ್ತು ಗಾಯತ್ರಿ, 14 ರ‍್ಷದೊಳಗಿನ ಯುವ ಬಾಲಕಿಯರ ಸಿಂಗಲ್ಸ್‌ನಲ್ಲಿ ಸುಪ್ರಿಯಾ ಹಾಗೂ ಅಭಿಜ್ಞಾ, 17 ವರ್ಷದೊಳಗಿನ ಯುವ ಬಾಲಕಿಯರ ಸಿಂಗಲ್ಸ್‌ನಲ್ಲಿ ಕ್ರೀಡಾಪಟು ಪ್ರಿಯದರ್ಶಿನಿ ಸ್ಥಾನ ಗಿಟ್ಟಿಸಿಕೊಂಡರು.

ಸಮಾರೋಪ ಸಮಾರಂಭದಲ್ಲಿ ಸೈನಿಕ ಶಾಲೆಯ ಪ್ರಾಚಾರ್ಯರಾದ ಪ್ರತಿಭಾ ಬಿಸ್ಟ್ ಅವರು ವಿಜೇತ ತಂಡಗಳಿಗೆ ಪಾರಿತೋಷಕ ವಿತರಿಸಿ ಹಾಗೂ ಶುಭಕೋರಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X