ವಿಜಯಪುರ | ನಕಲಿ ಮತದಾನ ಆರೋಪ; ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ದೂರು

Date:

Advertisements

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದನಾ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ದೂರು ನೀಡಿದ್ದಾರೆ.

ವಿಜಯಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸಿದ್ದಸಿರಿ ಸಂಸ್ಥೆಯ ಬ್ಯಾಂಕ್‌ ಮತ್ತು ಸಕ್ಕರೆ ಕಾರ್ಖಾನೆಗೆ ಯತ್ನಾಳ್ ಅಧ್ಯಕ್ಷರಾಗಿದ್ದಾರೆ. ಈ ಎರಡೂ ಸಂಸ್ಥೆಗಳ ಸಿಬ್ಬಂದಿ ಹೆಸರಿನಲ್ಲಿ ನಕಲಿ ಮತದಾನ ಮಾಡಿದ್ದಾರೆ ಎಂದು ಯತ್ನಾಳ್‌ ವಿರುದ್ಧ ಸ್ಪರ್ಧಿಸಿ ಸೋಲುಂಡ ಕಾಂಗ್ರೆಸ್‌ನ ಅಬ್ದುಲ್ ಹಮೀದ್ ಮುಶ್ರಫ್ ಆರೋಪಿಸಿದ್ದಾರೆ.

“ಯತ್ನಾಳ್‌ ಮಾಡಿರುವ ನಕಲಿ ಮತದಾನಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಅಧಿಕಾರಿಗಳಿಗೆ ನೀಡಿದ್ದೇನೆ. ಆದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳೂ ಯತ್ನಾಳ್‌ ಜೊತೆ ಶಾಮೀಲಾಗಿರುವ ಶಂಕೆ ಇದೆ” ಎಂದು ಅವರು ಹೇಳಿದ್ದಾರೆ.

Advertisements

ಯತ್ನಾಳ್‌ಗೆ ನೋಟಿಸ್‌
ಚುನಾವಣಾ ಪ್ರಚಾರದ ವೇಳೆ ಯತ್ನಾಳ್ ಅವರು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಸಿ ಟೀಕಿಸಿದ್ದರು. ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಯತ್ನಾಳ್ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X