ವಿಜಯಪುರ | ನಕಲಿ ಮತದಾನಕ್ಕೆ ಯತ್ನಿಸಿದವರು ಪೊಲೀಸ್‌ ವಶಕ್ಕೆ

Date:

ಬಿಜೆಪಿ ಅಭ್ಯರ್ಥಿಯ ಪರ ಮತ ಚಲಾಯಿಸಲು ನಕಲಿ ಮತದಾರರನ್ನು ವಿಜಯಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಕರೆತಂದಿರುವುದಾಗಿ ಶಿವಸೇನಾ ಪಕ್ಷದ ಅಭ್ಯರ್ಥಿ ಸತೀಶ್‌ ಅಶೋಕ್‌ ಪಾಟೀಲ ಆರೋಪಿಸಿದ್ದಾರೆ.

ಇಂದು (ಮೇ 10) ಮತದಾನ ಶುರುವಾದ ಸಮಯದಲ್ಲಿ ವಿಜಯಪುರ ನಗರದ ಬೂತನಾಳ ರಸ್ತೆಯಿಂದ ನಗರ ಪ್ರವೇಶಿಸುತ್ತಿದ್ದ ಕೆಲ ನಕಲಿ ಮತದಾರರನ್ನು ಕಾಂಗ್ರೆಸ್‌ ಕಾರ್ಯಕರ್ತರು ಹಿಡಿದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ವಿಡಿಯೋದಲ್ಲಿ, ಇಬ್ಬರು ಮಾತನಾಡಿದ್ದು ತಾವು ಚಿಂಚೋಳಿಯಲ್ಲಿಇರುವ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಲು ಬಂದಿರುವುದಾಗಿ ವಿಡಿಯೋದಲ್ಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ʻʻಸುಮಾರು 120ಕ್ಕೂ ಹೆಚ್ಚು ಮಂದಿ ನಕಲಿ ಮತದಾರರು, ಮತ ಚಲಾಯಿಸಲು ಬಂದಿದ್ದು, ನಮ್ಮನ್ನು ನೋಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಇಬ್ಬರನ್ನು ಪ್ರಸ್ತುತ ಪೊಲೀಸರ ವಶಕ್ಕೆ ನೀಡಲಾಗಿದೆʼʼ ಎಂದು ಹೆಸರು ಹೇಳಲಿಚ್ಛಿಸದ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ತಿಳಿಸಿದರು.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೋಮವಾರ (ಮೇ 8)ದಂದೇ ಮನವಿ ಪತ್ರ ಸಲ್ಲಿಸಿರುವ ಅವರು, ʻʻಸೋಮವಾರ ನಡೆದ ಬಿಜೆಪಿ ಪಕ್ಷದ ರ್‍ಯಾಲಿಯಲ್ಲಿ ಭಾಗವಹಿಸಿದ್ದ ʼಸಿದ್ಧಸಿರಿʼ ಬ್ಯಾಂಕಿನ ಮ್ಯಾನೇಜರ್‌ಗಳು ಮತ್ತು ಸಿಬ್ಬಂದಿ ವರ್ಗದವರು ಬೇರೆ ಜಿಲ್ಲೆ ಮತ್ತು ತಾಲೂಕುಗಳಿಂದ ನಕಲಿ ಮತ ಹಾಕಲು ಬಂದಿದ್ದು, ಅಂತವರಿಗೆ ಮತ ಹಾಕಲು ಅವಕಾಶ ಕೊಡಬಾರದುʼʼ ಎಂದು ಆಗ್ರಹಿಸಿದ್ದರು.

ಕಳೆದ ಚುನಾವಣೆಯಲ್ಲಿಯೂ ಹೀಗೆ ಬೇರೆ ಮತಕ್ಷೇತ್ರದ ಜನರು ಬಂದು ಸುಮಾರು 3,000ದಿಂದ 4,000ವರೆಗೆ ನಕಲಿ ಮತ ಚಲಾಯಿಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದರು. ಈ ಬಾರಿ ಹೀಗಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಪತ್ರದಲ್ಲಿ ತಿಳಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ...

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ...

ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ...

ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ...