ದಲಿತರನ್ನು ಬೇರೆಡೆ ಕಳಿಸಿ ಎಂದ ಗ್ರಾಮಸ್ಥ; ಕೇಸ್‌ ಬೀಳ್ತವೆ ಹುಷಾರ್ ಎಂದ ಪಕ್ಷೇತರ ಅಭ್ಯರ್ಥಿ

Date:

ಚುನಾವಣಾ ಪ್ರಚಾರದ ಮೇಳೆ ಗ್ರಾಮಸ್ಥರೊಬ್ಬರು ದಲಿತರನ್ನು ಗ್ರಾಮದಿಂದ ಬೇರೆಡೆ ಕಳಿಸಿ ಎಂದು ಹೇಳಿದ್ದು, ಎಲ್ಲರಿಗೂ ಬದುಕುವ ಹಕ್ಕಿದೆ. ಹಿಂಗೆಲ್ಲ ಮಾತಾಡಿದ್ರೆ ಕೇಸ್‌ ಹಾಕ್ತಾರೆ ಹುಷಾರಾಗಿರುವ ಎಂದು ಪಕ್ಷೇತರ ಅಭ್ಯರ್ಥಿ ಎಚ್ಚರಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಕುಪ್ಪಳಿ ಗ್ರಾಮದಲ್ಲಿ ನಡೆದಿದೆ.

ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ಚಂದನ್‌ಗೌಡ ಪ್ರಚಾರಕ್ಕೆಂದು ಕುಪ್ಪಳ್ಳಿಗೆ ತೆರಳಿದ್ದರು. ಗ್ರಾಮಸ್ಥರೊಂದಿಗೆ ಮಾತನಾಡುವ ವೇಳೆ, ಮೈಕ್‌ ಪಡೆದುಕೊಂಡ ವ್ಯಕ್ತಿಯೊಬ್ಬ, “ದಲಿತರನ್ನು ಊರಿಂದ ಬೇರೆ ಜಾಗಕ್ಕೆ ಕಳಿಸಿಕೊಡಿ ಸಾಕು. ಅವರು ನಮ್ಮ ಮನೆಗಳ ಸುತ್ತಲೂ ಇದ್ದು, ನಾವು ಮಧ್ಯದಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಯಾಕಪ್ಪ ಅವರನ್ನು ಬೇರೆ ಕಳಿಸಬೇಕು ಎಂದು ಚಂದನ್‌ ಗೌಡ ಪ್ರಶ್ನಿಸಿದ್ದಾರೆ. ಇದಕ್ಕುತ್ತರಿಸಿದ ವ್ಯಕ್ತಿ, “ನಮಗೆ ದನ-ಕರ ಕಟ್ಟಿಕೊಳ್ಳೇಕೆ ತೊಂದರೆ ಆಗ್ತಾ ಇದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಾಗೆ ಹೇಳಿದ ವ್ಯಕ್ತಿಗೆ ಬುದ್ದಿ ಹೇಳಿದ ಚಂದನ್ ಗೌಡ, “ಸಾಮಾಜಿಕವಾಗಿ ಬದುಕುವ ಹಕ್ಕು ಎಲ್ಲರಿಗೂ ಇದೆ. ಅದನ್ನ ಕಸಿದುಕೊಳ್ಳೋಕೆ ಆಗಲ್ಲ. ಯಾರನ್ನು ಎಲ್ಲಿಂದಲೂ ಕಳಿಸೋಕೆ ಯಾರಿಗೂ ಹಕ್ಕಿಲ್ಲ. ಹೀಗೆಲ್ಲ ಮಾತಾಡಿದ್ರೆ ಕೇಸ್‌ ಬೀಳ್ತವೆ” ಎಂದು ಎಚ್ಚರಿಸಿದ್ದಾರೆ.

“ನಿಮಗೆ ಅವರನ್ನ ಬೇರೆಡೆ ಕಳಿಸಲೇಬೇಕೆಂದಿದ್ದರೆ, ನನ್ನಿಂದ ಆಗಲ್ಲ. ನನಗೆ ನೀವ್ಯಾರೂ ಮತ ಹಾಕಬೇಡಿ. ಓಟು ಕೇಳೋಕೆ ಬರುವ ಎಂಪಿ ಅಥವಾ ಶಾಸಕನ ಬಳಿ ಕೇಳಿ, ಸ್ಥಳಾಂತರ ಮಾಡಿಸಿಕೊಳ್ಳಿ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...