ರಾಜ್ಯಾದ್ಯಂತ ಕಳೆಗಟ್ಟಿದ ಮತಗಟ್ಟೆ | ಮಾಗಡಿ ಅಭ್ಯರ್ಥಿಗೆ ವೋಟ್ ಹಾಕಿದ ಹೆಚ್ಡಿಕೆ ಕುಟುಂಬ

Date:

Advertisements
  • ರಾಜ್ಯಾದ್ಯಂತ ಬಿರುಸುಗೊಂಡ ಮತದಾನ ಪ್ರಕ್ರಿಯೆ
  • ಸರತಿಯಲ್ಲಿ ನಿಂತು ಮತ ಚಲಾಯಿಸಿ ರಾಜಕೀಯ ಗಣ್ಯರು

ರಾಜ್ಯ ವಿಧಾನಸಭೆ ಚುನಾವಣೆ 2023ರ ಮತದಾನ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ವಯೋವೃದ್ದರಾದಿಯಾಗಿ ಮತದಾನದ ಹಕ್ಕುಹೊಂದಿರುವವರು ಉತ್ಸಾಹದಿಂದಲೇ ಮತಗಟ್ಟೆಗೆ ತಲುಪಿ ಮತ ಚಲಾವಣೆ ಮಾಡುತ್ತಿದ್ದಾರೆ.

ಜನಸಾಮಾನ್ಯರಂತೆ ರಾಜಕೀಯ ಗಣ್ಯರೂ ಸರತಿಯಲ್ಲಿ ನಿಂತು ವೋಟ್ ಚಲಾಯಿಸಿ ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಇದರಂತೆ ಮಾಗಡಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ಮತ ಚಲಾಯಿಸಿದೆ. ಚನ್ನಪಟ್ಟದ ಅಭ್ಯರ್ಥಿ ಕುಮಾರಸ್ವಾಮಿ, ರಾಮನಗರ ಅಭ್ಯರ್ಥಿ ನಿಖಿಲ್ ಸೇರಿದಂತೆ ಇಡೀ ಕುಟುಂಬ ಮತಗಟ್ಟೆಗೆ ಬಂದು ಮಾಗಡಿ ಕ್ಷೇತ್ರದ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ.

Advertisements

ಖುದ್ದು ಇವರೇ ಅಭ್ಯರ್ಥಿಗಳಾಗಿದ್ದರೂ ತಮಗೇ ಮತ ಚಲಾಯಿಸಿಕೊಳ್ಳಲಾರದೆ ಬೇರೊಬ್ಬರಿಗೆ ಮತ ಹಾಕುವಂತಾಗಿದ್ದಕ್ಕೆ ಇದ್ದ ಕಾರಣ ಅವರು ನೆಲೆಸಿರುವ ಕೇತಗಾನಹಳ್ಳಿ ಮನೆ. ಈ ಮನೆ ಇರುವುದು ಮಾಗಡಿ ಕ್ಷೇತ್ರದ ವ್ಯಾಪ್ತಿಯಲ್ಲಾಗಿರುವ ಕಾರಣ ಇವರ ವೋಟು ಅಲ್ಲಿನ ಅಭ್ಯರ್ಥಿಗೆ ದೊರೆತಿದೆ.

ಈ ಸುದ್ದಿ ಓದಿದ್ದೀರಾ?:ಚುನಾವಣಾ ಅಕ್ರಮ | ₹147 ಕೋಟಿ ನಗದು, ₹375 ಕೋಟಿ ಮೌಲ್ಯದ ವಸ್ತುಗಳ ವಶ

ಇವರಂತೆ ಮೈಸೂರಿನ ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ ಚಲಾವಣೆ ಮಾಡಿದರು. ಇವರನ್ನು ಹೊರತುಪಡಿಸಿದಂತೆ ಇನ್ನಿತರ ಹಲವು ಗಣ್ಯರು ಮತ ಚಲಾವಣೆ ಮಾಡಿದರು.

ಸಿದ್ದರಾಮಯ್ಯ

ವರುಣಾದಲ್ಲಿ ಮತ ಚಲಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಶಶಿಕಲಾ ಜೊಲ್ಲೆ

ಕುಟುಂಬದೊಂದಿಗೆ ಮತ ಚಲಾಯಿಸಿದ ಸಚಿವೆ ಶಶಿಕಲಾ ಜೊಲ್ಲೆ

ಮುರುಗೇಶ್‌ ನಿರಾಣಿ

ಕುಟುಂಬದೊಂದಿಗೆ ಮತ ಚಲಾಯಿಸಿದ ಸಚಿವ ಮುರುಗೇಶ್‌ ನಿರಾಣಿ

ಭಾಸ್ಕರ್‌ ರಾವ್

ಕುಟುಂಬದೊಂದಿಗೆ ಮತ ಚಲಾಯಿಸಿದ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್‌ ರಾವ್‌

ನಿರ್ಮಲಾ ಸೀತಾರಾಮ್

ಬೆಂಗಳೂರಿನ ಜಯನಗರದಲ್ಲಿ ಮತ ಚಲಾಯಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಪ್ರಿಯಾಕೃಷ್ಣ

ಕುಟುಂಬದೊಂದಿಗೆ ಮತ ಚಲಾಯಿಸಿದ ಬೆಂಗಳೂರು ಗೋವಿಂದರಾಜನಗರ, ವಿಜಯನಗರದ ಕಾಂಗ್ರೆಸ್‌ ಅಭ್ಯರ್ಥಿಗಳಾದ ಪ್ರಿಯಕೃಷ್ಣ, ಮಾಜಿ ಸಚಿವ ಕೃಷ್ಣಪ್ಪ

ಮನೋಜ್_ ಕುಮಾರ್_ ಮೀನಾ

ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ಮತ ಚಲಾಯಿಸಿದರು.

ಜಾವಗಲ್_ ಶ್ರೀನಾಥ್

2023ರ ವಿಧಾನಸಭೆ ಚುನಾವಣಾ ರಾಯಭಾರಿ ಜಾವಗಲ್‌ ಶ್ರೀನಾಥ್‌ ಮೈಸೂರಿನಲ್ಲಿ ಮತ ಚಲಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X