ಚಾಮರಾಜನಗರ | ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಸಾವು

Date:

Advertisements
  • ರಸ್ತೆ ಹದಗೆಟ್ಟ ಕಾರಣಕ್ಕೆ ಕಾಡಂಚಿನ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲ
  • ಮತಿ ಪತ್ನಿ ನಡೆದುಕೊಂಡು ಹೋಗುತ್ತಿದ್ದಾಗ ದಾಳಿ ನಡೆಸಿದ ಒಂಟಿ ಸಲಗ

ಮತದಾನ ಮಾಡಲು ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿ ವ್ಯಕ್ತಿಯನ್ನು ತುಳಿದು ಸಾಯಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮೇ 10ರಂದು ಮತದಾಣ ಮಾಡಲು ಹಳೆ ಮಾಟಳ್ಳಿ ಗ್ರಾಮದಿಂದ ತೋಕೆರೆ ಗ್ರಾಮಕ್ಕೆ  ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ. ಹನೂರು ತಾಲೂಕಿನ ತೋಕರೆ ಗ್ರಾಮದ ಪುಟ್ಟಸ್ವಾಮಿ (42) ಮೃತ ವ್ಯಕ್ತಿ.

ಹಳೆ ಮಾಟಳ್ಳಿ ಗ್ರಾಮದಿಂದ  ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಕೆರೆ ಗ್ರಾಮಕ್ಕೆ ಪತಿ ಪತ್ನಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪತಿಯ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಕಾಡಾನೆ ದಾಳಿಗೆ ಪುಟ್ಟಸ್ವಾಮಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ನಂತರ ಪತ್ನಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisements
ಚಾಮರಾಜನಗರ 01

ಕಾಡಂಚಿನ ಗ್ರಾಮಗಳ ರಸ್ತೆ ತೀವ್ರ ಹದಗೆಟ್ಟಿರುವುದರಿಂದ ದ್ವಿಚಕ್ರವಾಹನ ಸೇರಿದಂತೆ ಇನ್ನಿತರ ವಾಹನಗಳ ಸಂಚಾರ ಸಾಧ್ಯವಾಗದೇ ಇರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಇನ್ನು ಮುಂದಾದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕಾಡಂಚಿನ ಗ್ರಾಮಗಳಿಗೆ ಮೂಲ ಸೌಲಭ್ಯ ಕಲ್ಪಿಸುವಂತೆ ನಿವಾಸಿಗಳು ಆಗಮಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತದಾನಕ್ಕೆ ತೆರಳಿದ್ದಾಗ ಹೆರಿಗೆ; ಮತ ಕೇಂದ್ರದಲ್ಲೇ ಜನಿಸಿದ ಮಗು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X