ಸಾವಿನ ದುಃಖದಲ್ಲೂ ಮತ ಎಣಿಕೆ ಕೇಂದ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಹಾಜರು

Date:

Advertisements

ಕರ್ನಾಟಕದಲ್ಲಿ ಯಾವ ರಾಜಕೀಯ ಪಕ್ಷ ತನ್ನ ಹಿಡಿತ ಸಾಧಿಸಲಿದೆ ಎಂಬ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಹಿನ್ನೆಡೆ ಮುನ್ನೆಡೆಯ ಭೀತಿ ರಾಜಕೀಯ ನಾಯಕರಲ್ಲಿ ಹೆಚ್ಚಾಗಿದೆ. ಈ ಮಧ್ಯೆ ಮನೆಯಲ್ಲಿ ಸಾವಿನ ಕಹಿ ಘಟನೆ ಮತ್ತು ದುಃಖದ ವಾತವರಣವಿದ್ದರೂ ಕಾಂಗ್ರೆಸ್‌ ಅಭ್ಯರ್ಥಿಯೊಬ್ಬರು ಮತ ಎಣಿಕೆಗೆ ಹಾಜರಾಗಿದ್ದಾರೆ.

ಮತ ಎಣಿಕೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆ ಮುಖ್ಯವಾದ ಕಾರಣ ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಸಹೋದರನ ಮಗನ ಮೃತದೇಹ ಮನೆಯಲ್ಲಿದ್ದರೂ ಮತ ಎಣಿಕೆ ಕೇಂದ್ರದಲ್ಲಿ ಹಾಜರಾಗಿದ್ದಾರೆ.

ರಾಜಾ ವೆಂಕಟಪ್ಪ ನಾಯಕ ಅವರ ಸಹೋದರನ ಮಗ ರೂಪ್ ಕುಮಾರ್ ನಾಯಕ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಂಜೆ ಮೃತಪಟ್ಟಿದ್ದರು. ಸುರಪುರದಲ್ಲಿ ಶನಿವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

Advertisements

ಮೇ10 ರಂದು ಮತದಾನ ಪೂರ್ಣಗೊಂಡು, ಎರಡು ದಿನ ವಿಶ್ರಾಂತಿಯ ದಿನವಾದ ನಂತರ, ಶನಿವಾರ ರಾಜ್ಯದೆಲ್ಲೆಡೆ ಯಾರು ಗೆಲುವು ಸಾಧಿಸುತ್ತಾರೆ ಎಂಬುದಕ್ಕೆ ಪೂರಕವಾಗಿ ಹಲವು ಸುತ್ತಿನ ಮತ ಎಣಿಕೆ ನಡೆಯುತ್ತಿದೆ. ಯಾವ ರಾಜಕೀಯ ನಾಯಕರಿಗೆ ಮುನ್ನೆಡೆ, ಹಿನ್ನೆಡೆಯಾಗಲಿದೆ ಎಂಬ ಫಲಿತಾಂಶ ಇಂದು ನಿರ್ಣಯದ ಕುತೂಹಲ ಮತ್ತು ಭೀತಿ ರಾಜಕೀಯ ನಾಯಕರಲ್ಲಿ ಹೆಚ್ಚಾಗಿದೆ. ನಾಯಕರಿಗೆ ಮತದಾನ ಎಣಿಕೆ ಅತಿ ಮುಖ್ಯವಾದ ದಿನ. ಸದ್ಯ ಮತ ಎಣಿಕೆ ಆರಂಭಗೊಂಡಿದ್ದು, ರಾಜಾ ವೆಂಕಟಪ್ಪ ನಾಯಕ್ ಮುನ್ನಡೆ ಕಾಯ್ದು ಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ನೀಲಿ ಶಾಲು ಕಳಚಿಟ್ಟ ಎನ್‌ ಮಹೇಶ್‌ಗೆ ಸೋಲಿನ ಭೀತಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X