ಚುನಾವಣೆ 2023 | ಯಾದಗಿರಿ: ಒಂದು ರೂ. ನಾಣ್ಯ ಸಂಗ್ರಹದಿಂದ ಠೇವಣಿ ಭರಿಸಿದ ಪಕ್ಷೇತರ ಅಭ್ಯರ್ಥಿ

Date:

ಕಳೆದ ಒಂದು ವರ್ಷದಿಂದ ಪಾದಯಾತ್ರೆ ಮೂಲಕ ಯಾದಗಿರಿ ಮತಕ್ಷೇತ್ರದ ಹಳ್ಳಿಗಳಲ್ಲಿ ಸುತ್ತಾಡಿ ಒಂದು ರೂಪಾಯಿ ನಾಣ್ಯ ಸಂಗ್ರಹಿಸಿದ್ದ ಪಕ್ಷೇತರ ಅಭ್ಯರ್ಥಿ ಯಂಕಪ್ಪ ದೇವಿಂದ್ರಪ್ಪ ರಾಮಸಮುದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಅವರು ಹಳ್ಳಿಗಳಲ್ಲಿ ಸಂಗ್ರಹಿಸಿದ್ದ ನಾಣ್ಯಗಳನ್ನು ನೀಡಿ, ಠೇವಣಿ ಭರಿಸಿದ್ದಾರೆ.

ಯಾದಗಿರಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಯಂಕಪ್ಪ‌, ಒಂದು ರೂಪಾಯಿ ನಾಣ್ಯಗಳನ್ನು ಠೇವಣಿಯಾಗಿ ಚುನಾವಣೆ ಅಧಿಕಾರಿಗಳಿಗೆ ಸಲ್ಲಿಸಿದರು. ಮೂವರು ಸಿಬ್ಬಂದಿ ಸುಮಾರು 2 ಗಂಟೆ ಕಾಲ ನಾಣ್ಯಗಳನ್ನು ಎಣಿಕೆ ಮಾಡಿದರು.

ಒಟ್ಟು 10 ಸಾವಿರ ರೂಪಾಯಿ ಹಣ ಒಂದು ರೂಪಾಯಿ‌ ನಾಣ್ಯಗಳಲ್ಲಿ ಸಂಗ್ರಹವಾಗಿತ್ತು. ““ಒಂದು ರೂಪಾಯಿಯಲ್ಲಿ ಒಂದು ಮತದಾನದಿಂದ ಒಂದು ದಿನ. “ನನಗೆ ನಿಮ್ಮ ಮತದಾನ ಕೊಡಿ, ನಾನು ನಿಮಗೆ ಬಡತನದಿಂದ ಸ್ವಾತಂತ್ರ್ಯ ಕೊಡಿಸುವೆ” ಎನ್ನುವ ಘೋಷಗಳೊಂದಿಗೆ ರಥಯಾತ್ರೆ ಮೂಲಕ ಗ್ರಾಮಗಳಲ್ಲಿ ಯಂಕಪ್ಪ ಸಂಚರಿಸಿ, ನಾಣ್ಯಗಳನ್ನು ಸಂಗ್ರಹಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೈಸೂರಿನ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಲ್ಲಿ ಎಂ.ಎ ವಿದ್ಯಾರ್ಥಿಯಾಗಿರುವ ಯಂಕಪ್ಪ, 23ನೇ ವಯಸ್ಸಿನಲ್ಲಿ ಮನೆ ತೊರೆದು ಮತದಾನ ಜಾಗೃತಿಗಾಗಿ ಗ್ರಾಮಗಳ‌ಲ್ಲಿ ಸಂಚಾರ ಮಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

“ಒಬ್ಬರಿಂದ ಕೇವಲ ಒಂದು ರೂಪಾಯಿ ನಾಣ್ಯವನ್ನಷ್ಟೆ ಸಂಗ್ರಹ ಮಾಡಿದ್ದಾರೆ. ₹10 ಮುಖಬೆಲೆಯ ನೋಟು ಕೊಟ್ಟರೂ ಸ್ವೀಕರಿಸಿಲ್ಲ. ಯಂಕಪ್ಪ ಬಡತನದಲ್ಲಿ ಬೆಳೆದಿದ್ದರಿಂದ ಬಡತನವನ್ನು ಅಳಿಸಲು ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಬಾರಿ ಅಲ್ಲದಿದ್ದರೂ ಮುಂದಿನ ಬಾರಿಯಾದರೂ ಚುನಾವಣೆಯಲ್ಲಿ ಗೆಲ್ಲಲಿ ಎನ್ನುವುದು ನಮ್ಮ ಆಸೆಯಾಗಿದೆ” ಎಂದು ರಾಮಸಮುದ್ರ ಗ್ರಾಮದ ನಿವಾಸಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...