ಚುನಾವಣೆ 2023 | ಯಾದಗಿರಿ: ಒಂದು ರೂ. ನಾಣ್ಯ ಸಂಗ್ರಹದಿಂದ ಠೇವಣಿ ಭರಿಸಿದ ಪಕ್ಷೇತರ ಅಭ್ಯರ್ಥಿ

Date:

Advertisements

ಕಳೆದ ಒಂದು ವರ್ಷದಿಂದ ಪಾದಯಾತ್ರೆ ಮೂಲಕ ಯಾದಗಿರಿ ಮತಕ್ಷೇತ್ರದ ಹಳ್ಳಿಗಳಲ್ಲಿ ಸುತ್ತಾಡಿ ಒಂದು ರೂಪಾಯಿ ನಾಣ್ಯ ಸಂಗ್ರಹಿಸಿದ್ದ ಪಕ್ಷೇತರ ಅಭ್ಯರ್ಥಿ ಯಂಕಪ್ಪ ದೇವಿಂದ್ರಪ್ಪ ರಾಮಸಮುದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಅವರು ಹಳ್ಳಿಗಳಲ್ಲಿ ಸಂಗ್ರಹಿಸಿದ್ದ ನಾಣ್ಯಗಳನ್ನು ನೀಡಿ, ಠೇವಣಿ ಭರಿಸಿದ್ದಾರೆ.

ಯಾದಗಿರಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಯಂಕಪ್ಪ‌, ಒಂದು ರೂಪಾಯಿ ನಾಣ್ಯಗಳನ್ನು ಠೇವಣಿಯಾಗಿ ಚುನಾವಣೆ ಅಧಿಕಾರಿಗಳಿಗೆ ಸಲ್ಲಿಸಿದರು. ಮೂವರು ಸಿಬ್ಬಂದಿ ಸುಮಾರು 2 ಗಂಟೆ ಕಾಲ ನಾಣ್ಯಗಳನ್ನು ಎಣಿಕೆ ಮಾಡಿದರು.

ಒಟ್ಟು 10 ಸಾವಿರ ರೂಪಾಯಿ ಹಣ ಒಂದು ರೂಪಾಯಿ‌ ನಾಣ್ಯಗಳಲ್ಲಿ ಸಂಗ್ರಹವಾಗಿತ್ತು. ““ಒಂದು ರೂಪಾಯಿಯಲ್ಲಿ ಒಂದು ಮತದಾನದಿಂದ ಒಂದು ದಿನ. “ನನಗೆ ನಿಮ್ಮ ಮತದಾನ ಕೊಡಿ, ನಾನು ನಿಮಗೆ ಬಡತನದಿಂದ ಸ್ವಾತಂತ್ರ್ಯ ಕೊಡಿಸುವೆ” ಎನ್ನುವ ಘೋಷಗಳೊಂದಿಗೆ ರಥಯಾತ್ರೆ ಮೂಲಕ ಗ್ರಾಮಗಳಲ್ಲಿ ಯಂಕಪ್ಪ ಸಂಚರಿಸಿ, ನಾಣ್ಯಗಳನ್ನು ಸಂಗ್ರಹಿಸಿದ್ದರು.

Advertisements

ಮೈಸೂರಿನ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಲ್ಲಿ ಎಂ.ಎ ವಿದ್ಯಾರ್ಥಿಯಾಗಿರುವ ಯಂಕಪ್ಪ, 23ನೇ ವಯಸ್ಸಿನಲ್ಲಿ ಮನೆ ತೊರೆದು ಮತದಾನ ಜಾಗೃತಿಗಾಗಿ ಗ್ರಾಮಗಳ‌ಲ್ಲಿ ಸಂಚಾರ ಮಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

“ಒಬ್ಬರಿಂದ ಕೇವಲ ಒಂದು ರೂಪಾಯಿ ನಾಣ್ಯವನ್ನಷ್ಟೆ ಸಂಗ್ರಹ ಮಾಡಿದ್ದಾರೆ. ₹10 ಮುಖಬೆಲೆಯ ನೋಟು ಕೊಟ್ಟರೂ ಸ್ವೀಕರಿಸಿಲ್ಲ. ಯಂಕಪ್ಪ ಬಡತನದಲ್ಲಿ ಬೆಳೆದಿದ್ದರಿಂದ ಬಡತನವನ್ನು ಅಳಿಸಲು ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಬಾರಿ ಅಲ್ಲದಿದ್ದರೂ ಮುಂದಿನ ಬಾರಿಯಾದರೂ ಚುನಾವಣೆಯಲ್ಲಿ ಗೆಲ್ಲಲಿ ಎನ್ನುವುದು ನಮ್ಮ ಆಸೆಯಾಗಿದೆ” ಎಂದು ರಾಮಸಮುದ್ರ ಗ್ರಾಮದ ನಿವಾಸಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X