ಚುನಾವಣಾ ರಾಜಕಾರಣಕ್ಕೆ ‘ಗುಡ್‌ಬೈ’ ಹೇಳಿದ ವೈಎಸ್‌ವಿ ದತ್ತ; ಪಶ್ಚಾತ್ತಾಪದ ಪಾದಯಾತ್ರೆ

Date:

ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಜೆಡಿಎಸ್‌ನ ಮುಖಂಡ, ಮಾಜಿ ಶಾಸಕ ವೈಎಸ್‌ವಿ ದತ್ತ ಘೋಷಿಸಿದ್ದಾರೆ. ಕಡೂರು ಕ್ಷೇತ್ರದಲ್ಲಿ ಪಶ್ಚಾತ್ತಾಪದ ಪಾದಯಾತ್ರೆ ನಡೆಯಲು ಮುಂದಾಗಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು. ಈ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಲು ಮುಂದಾಗಿದ್ದಾರೆ. ಈ ಬಗ್ಗೆ ಪತ್ರವೊಂದನ್ನು ಅವರು ಬರೆದಿದ್ದಾರೆ.

ಪತ್ರದಲ್ಲಿ ಚುನಾವಣೆಯ ಸಂದರ್ಭದಲ್ಲಾದ ಬೆಳವಣಿಗೆಗಳ ಪಟ್ಟಿ ಮಾಡಿರುವ ಅವರು, “ನಾನೀಗ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ನಾನು ಎಲ್ಲಿ ಎಡವಿದೆ. ನನ್ನ ಮತದಾರ ಬಂಧುಗಳಾದ ನಿಮ್ಮ ನಿರೀಕ್ಷೆಯನ್ನು ಮುಟ್ಟಲು ನಾನು ಎಲ್ಲಿ ವಿಫಲನಾದೆ ಎಂಬ ತಿಳಿದುಕೊಳ್ಳಬೇಕು” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇತ್ತೀಚೆಗೆ ನಡೆದ ಚುನಾವಣೆ ನನ್ನ ಪಾಲಿಗೆ ಅವಿಸ್ಮರಣೀಯವಾಗಿರುತ್ತದೆ ಎಂದು ಭಾವಿಸಿದ್ದೆ. ಇದೇ ನನ್ನ ಕೊನೆಯ ಚುನಾವಣೆ ಎಂದೂ ಹೇಳಿದ್ದೆ. ಫಲಿತಾಂಶವು ನನಗೆ ವಾಸ್ತವಾಂಶದ ದರ್ಶನ ನೀಡಿತು” ಎಂದು ಪರಾಜಿತಗೊಂಡ ಬಗ್ಗೆ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಬಿಜೆಪಿ ಸೋಲಿಗೆ ಪ್ರಮುಖ ಐದು ಕಾರಣಗಳಿವು

“2006ರಲ್ಲಿ ಕಡೂರು ಕ್ಷೇತ್ರಕ್ಕೆ ಕಾಲಿಟ್ಟ ದಿನದಿಂದ 2023ರವರೆಗಿನ ನನ್ನ ನಡೆವಳಿಕೆ, ನಿರ್ಧಾರಗಳು ಹಾಗೂ ಮತದಾರರೊಂದಿಗಿನ ನನ್ನ ಒಡನಾಡದ ವಿಚಾರದಲ್ಲಿ ನಾನೇ ಎಲ್ಲೋ ಎಡವಿದ್ದೇನೆ ಎಂಬ ಅನುಮಾನ ನನ್ನನ್ನು ಸದಾ ಕಾಡತೊಡಗಿದೆ. ಚುನಾವಣಾ ಫಲಿತಾಂಶದ ಬಗ್ಗೆ ನಾನೆಂದೂ ತಲೆಕಡೆಸಿಕೊಂಡವನಲ್ಲ. ನನ್ನ ರಾಜಕೀಯ ಜೀವನದಲ್ಲಿ ಗೆಲುವಿಗಿಂತ ಸೋಲನ್ನೇ ಜಾಸ್ತಿ ನೋಡಿದವನು. ಸೋಲು ಗೆಲುವು ಎರಡನ್ನೂ ಸಮಚಿತ್ತದಿಂದ ಸಮಭಾವದಿಂದ ನೋಡುವ ಮನಸ್ಥಿತಿ ನನ್ನದು. ಹಾಗಾಗಿ ಬಂದ ಫಲಿತಾಂಶದ ಬಗ್ಗೆ ನನಗೆ ಎಳ್ಳಷ್ಟೂ ಬೇಸರವಿಲ್ಲ” ಎಂದು ತಿಳಿಸಿದ್ದಾರೆ.

“ನನ್ನನ್ನು ಬೆಂಬಲಿಸಿದ ಹಿತೈಷಿಗಳಿಗೆ ಹಾಗೂ ನನ್ನ ತಪ್ಪಿನ ಕಾರಣದಿಂದ ನನ್ನಿಂದ ದೂರವಾಗಿರುವ ಮಾನಸ್ಸುಗಳನ್ನು ಒಗ್ಗೂಡಿಸುವ ಸಲುವಾಗಿ ನನ್ನ ಜನ್ಮದಿನವಾದ ಜೂನ್ 24ರಿಂದ ‘ಪ್ರಾಯಶ್ಚಿತ್ತ ಪಾದಯಾತ್ರೆ ‘ ಎಂಬ ಹೆಸರಿನೊಂದಿಗೆ ನಿಮ್ಮ ಊರುಗಳಿಗೆ ಬರುತ್ತಿದ್ದೇನೆ. ನನ್ನ ತಪ್ಪನ್ನು ನಿಮ್ಮ ಮುಂದೆ ನಿವೇದಿಸಿಕೊಂಡು, ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬದಲಾವಣೆ ತರಲೇಬೇಕೆಂದು ನಾವೆಲ್ಲ ಒಗ್ಗಟ್ಟಾಗಿ ನಿಂತಿದ್ದೇವೆ: ಎಂ.ಬಿ ಪಾಟೀಲ್‌

ಈ ಬಾರಿ ಲೋಕಸಭೆಯಲ್ಲಿ ಬದಲಾವಣೆ ತರಲೇಬೇಕೆಂದು ನಾವೆಲ್ಲ ಒಗ್ಗಟ್ಟಾಗಿ ನಿಂತಿದ್ದೇವೆ ಎಂದು...

ಮೈಸೂರು | ಬಿಜೆಪಿ ಸರ್ಕಾರ ಧಾರ್ಮಿಕ ದ್ವೇಷ ಹರಡಿ ರಾಜಕೀಯ ಮಾಡುತ್ತಿದೆ: ಡಾ. ತಿಮ್ಮಯ್ಯ

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಧರ್ಮ ಧರ್ಮಗಳ ಎತ್ತಿಕಟ್ಟಿ ರಾಜಕೀಯ ಮಾಡುತ್ತಿದೆ. ದೇಶದಲ್ಲಿ...

ಮೈಸೂರು | ಕೋಮುವಾದಿ ಶಕ್ತಿ ಸೋಲಿಸಿ, ಸಂವಿಧಾನ ಉಳಿಸಿ: ಸುಹೇಲ್ ಅಹಮದ್

ಸ್ವಾತಂತ್ರ್ಯ ಭಾರತದಲ್ಲಿ ಇಂದಿನ ಲೋಕಸಭಾ ಚುನಾವಣೆ ಐತಿಹಾಸಿಕವಾದದ್ದು ಯಾಕೆ ಅಂದ್ರೆ ಪ್ರಜಾಪ್ರಭುತ್ವ...

ಯಾದಗಿರಿ | ರಾಕೇಶ ಹತ್ಯೆ ಖಂಡಿಸಿ ಮಾದಿಗ ಸಮಾಜದ ಪ್ರತಿಭಟನೆ

ದಲಿತ ಯುವಕ ರಾಕೇಶ ಕೊಲೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ಮಾದಿಗ ಸಮಾಜ...