ಹೃದಯಾಘಾದಿಂದ ಆಸ್ಪತ್ರೆ ಸೇರಿದ್ದ ಕಿರಣ್
ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದ ನಿರ್ದೇಶಕ
ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಕಿರಣ್ ಗೋವಿ ಶನಿವಾರ ನಿಧನರಾಗಿದ್ದಾರೆ. ಹೃದಯಾಘಾತದಿಂದ ಇತ್ತೀಚೆಗೆ ಆಸ್ಪತ್ರೆ ಸೇರಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
50 ವರ್ಷದ ಕಿರಣ್ ಬುಧವಾರ ತಮ್ಮ ಕಚೇರಿಯಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿತ್ತು. ಸ್ಥಳದಲ್ಲೇ ಕುಸಿದು ಬಿದ್ದಿದ್ದ ಅವರನ್ನು ಕುಟುಂಬಸ್ಥರು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಮೂರು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರದ ಹೊತ್ತಿಗೆ ಅವರ ಸ್ಥಿತಿ ಗಂಭೀರಗೊಂಡು ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಜಾಕ್ವೆಲಿನ್ಗೆ ಜೈಲಿನಿಂದ ಪ್ರೇಮಪತ್ರ ಬರೆದ ಸುಕೇಶ್
ಆರ್ಕೆಸ್ಟ್ರಾ ಮೂಲಕ ಸ್ಯಾಂಡಲ್ವುಡ್ ನಂಟು ಬೆಳೆಸಿಕೊಂಡಿದ್ದ ಕಿರಣ್, ʼಸಂಚಾರಿʼ, ʼಪಯಣʼ, ʼಯಾರಿಗುಂಟು ಯಾರಿಗಿಲ್ಲʼ, ʼಪಾರು ವೈಫ್ ಆಫ್ ದೇವದಾಸ್ʼ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದರು. ಹಿರಿಯ ನಿರ್ದೇಶಕನ ಅಕಾಲಿಕ ಮರಣಕ್ಕೆ ಚಿತ್ರರಂಗದ ಹಲವು ಗಣ್ಯರು ಕಂಬಿನಿ ಮಿಡಿದಿದ್ದಾರೆ.
ಸದ್ಯ ಕಿರಣ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗುತ್ತಿದ್ದು, ಭಾನುವಾರ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.