ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

Date:

  • ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿ
  • ಬಂಧಿತ ಆರೋಪಿ ಲಾರೆನ್ಸ್‌ ಬಿಷ್ಣೋಯಿ ಸಹಚರ

ಬಾಲಿವುಡ್‌ನ ಖ್ಯಾತ ನಟ ಸಲ್ಮಾನ್‌ ಖಾನ್‌ ಅವರಿಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಬಂಧಿತನನ್ನು ರಾಜಸ್ಥಾನದ ಜೋಧ್‌ಪುರ್‌ ಮೂಲದ ಧಾಕಡ್‌ ರಾಮ್‌ ಬಿಷ್ಣೋಯಿ ಎಂದು ಗುರುತಿಸಲಾಗಿದೆ. ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿರುವ ಮುಂಬೈನ ಬಾಂದ್ರಾ ಠಾಣೆಯ ಪೊಲೀಸರ ತಂಡ ಭಾನುವಾರ ಜೋಧ್‌ಪುರ್‌ ಸಮೀಪದಲ್ಲಿರುವ ʼರೋಹಿಚಾ ಕಲನ್‌ʼಗೆ ಭೇಟಿ ನೀಡಿ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ, ಈ ಹಿಂದೆ ಸಲ್ಮಾನ್‌ ಖಾನ್‌ ಹತ್ಯಗೆ ಯತ್ನಿಸಿದ್ದ ಲಾರೆನ್ಸ್‌ ಬಿಷ್ಣೋಯಿ ಸಹಚರ ಎನ್ನಲಾಗಿದೆ.

ಇತ್ತೀಚೆಗೆ ಸಲ್ಮಾನ್‌ ಖಾನ್‌ ಆಪ್ತ ಸಹಾಯಕ ಪ್ರಶಾಂತ್‌ ಗುಂಜಲ್ಕರ್‌ ಅವರಿಗೆ ಇ-ಮೇಲ್‌ ಮೂಲಕ ಸಂದೇಶ ರವಾನಿಸಿದ್ದ ಧಾಕಡ್‌ ರಾಮ್‌, ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಆತನ ಸಂದೇಶದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಹೆಸರು ಕೂಡ ಉಲ್ಲೇಖವಾಗಿತ್ತು. “ಗೋಲ್ಡಿ ಬ್ರಾರ್‌ ನಿಮ್ಮ ಮಾಲೀಕನ (ಸಲ್ಮಾನ್‌ ಖಾನ್‌) ಜೊತೆಗೆ ಮಾತನಾಡಲು ಇಚ್ಛಿಸಿದ್ದಾನೆ. ನಿಮ್ಮ ಮಾಲೀಕ ಇನ್ನೂ ಲಾರೇನ್ಸ್‌ ಬಿಷ್ಣೋಯಿಯ ಸಂದರ್ಶನದ ವಿಡಿಯೋ ನೋಡಿಲ್ಲವಾದರೆ, ಮೊದಲು ಆ ಸಂದರ್ಶನದ ವಿಡಿಯೋ ನೋಡಲು ಹೇಳಿ. ಆತ ಈ ವಿವಾದವನ್ನು ಇಲ್ಲಿಗೆ ಅಂತ್ಯಗೊಳಿಸಲು ಇಚ್ಛಿಸಿದ್ದರೆ ಗೋಲ್ಡಿ ಬ್ರಾರ್‌ ಜೊತೆಗೆ ಮುಖಾಮುಖಿ ಮಾತುಕತೆಗೆ ಬರುತ್ತಾನೆಯೇ ಕೇಳಿ. ಈ ಬಾರಿ ಸುಮ್ಮನೆ ಸಂದೇಶ ಕಳುಹಿಸಿದ್ದೇವೆ. ಮುಂದಿನ ಬಾರಿ ಹೀಗಾಗುವುದಿಲ್ಲ, ನಮ್ಮ ನಡೆಯನ್ನು ಕಂಡು ನೀವೇ ಆಘಾತಕ್ಕೊಳಗಾಗುತ್ತೀರಿ” ಎಂದು ಬೆದರಿಸಿದ್ದ.

ಈ ಸುದ್ದಿ ಓದಿದ್ದೀರಾ? ಮಲಯಾಳಂನ ಹಿರಿಯ ನಟ ಇನ್ನೋಸೆಂಟ್‌ ಇನ್ನಿಲ್ಲ

ಇದಾದ ಬೆನ್ನಲ್ಲೇ ಸಲ್ಮಾನ್‌ ಖಾನ್‌ ಮುಂಬೈನ ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಈ ಹಿಂದೆ ನಟನ ಹತ್ಯೆಗೆ ಯತ್ನಿಸಿದ್ದ ಮತ್ತು ಅನ್ಯ ಪ್ರಕರಣದಲ್ಲಿ ಈಗಾಗಲೇ ಸೆರೆವಾಸ ಅನುಭವಿಸುತ್ತಿರುವ ಲಾರೇನ್ಸ್‌ ಬಿಷ್ಣೋಯಿ, ಗೋಲ್ಡಿ ಬ್ರಾರ್‌ ಮತ್ತು ರೋಹಿತ್‌ ಗರ್ಗಿ ಅವರ ವಿರುದ್ಧ ಜೀವ ಬೆದರಿಕೆ ಹಾಕಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದರು. ಮಾರ್ಚ್‌ 24ರಂದು ಸಲ್ಮಾನ್‌ ಖಾನ್‌ ಆಪ್ತ ಸಹಾಯಕರಿಗೆ ಬಂದಿರುವ ಇ-ಮೇಲ್‌ ವಿಳಾಸದ ವಿವರವನ್ನು ಪೊಲೀಸರು ಕಲೆ ಹಾಕಿದ್ದರು. ಇ-ಮೇಲ್‌ ಖಾತೆಗೆ ಬಳಸಲಾಗಿರುವ ಮೊಬೈಲ್‌ ಸಂಖ್ಯೆ ಲಂಡನ್‌ ಮೂಲದ ವ್ಯಕ್ತಿಯ ಹೆಸರಿನಲ್ಲಿದೆ ಎಂದು ಮಾಹಿತಿ ನೀಡಿದ್ದರು. ಇದಾದ ಕೆಲವೇ ದಿನಕ್ಕೆ ಆರೋಪಿಯನ್ನು ಪತ್ತೆ ಹಚ್ಚಿ ಬಂಧನಕ್ಕೊಳಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ...

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು...

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ...

ಬಿಗ್‌ಬಾಸ್ ಶೋನಲ್ಲಿ ಭೋವಿ ಜನಾಂಗಕ್ಕೆ ಅವಹೇಳನ ಆರೋಪ: ಸ್ಪರ್ಧಿ ತನಿಷಾ ವಿರುದ್ಧ ಎಫ್‌ಐಆರ್

ಇತ್ತೀಚೆಗಷ್ಟೇ ಕನ್ನಡದ 'ಬಿಗ್‌ಬಾಸ್ ರಿಯಾಲಿಟಿ ಶೋ'ನಲ್ಲಿ ಸ್ಪರ್ಧಾಳುವಾಗಿದ್ದ ವರ್ತೂರು ಸಂತೋಷ್ ಹುಲಿ...