ʻಲವ್‌ ಮಾಕ್‌ಟೇಲ್‌-3ʼ ಘೋಷಿಸಿದ ಡಾರ್ಲಿಂಗ್‌ ಕೃಷ್ಣ : ಬೇಡ ಗುರು ಸಾಕು ಎಂದ ಅಭಿಮಾನಿಗಳು

Date:

ಪ್ರೇಕ್ಷಕರನ್ನು ಲಘುವಾಗಿ ಪರಿಗಣಿಸಬೇಡಿ ಎಂದ ನೆಟ್ಟಿಗರು

- Advertisement -

ಅಭಿಪ್ರಾಯ ತಿಳಿಸಿದ್ದಕ್ಕೆ ಬ್ಲಾಕ್‌ ಮಾಡಿದ ಮಿಲನ ನಾಗರಾಜ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ ಡಾರ್ಲಿಂಗ್‌ ಕೃಷ್ಣ ಯುಗಾದಿ ಹಬ್ಬದ ಪ್ರಯುಕ್ತ ʼಲವ್‌ ಮಾಕ್‌ಟೇಲ್‌-3ʼ ಚಿತ್ರವನ್ನು ಘೋಷಣೆ ಮಾಡಿದ್ದಾರೆ. ಹೊಸ ಸಿನಿಮಾ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಖುಷಿಯಲ್ಲಿದ್ದ ನಟನಿಗೆ ನೆಟ್ಟಿಗರು ತರಾಟೆ ತೆಗೆದುಕೊಂಡಿದ್ದು, ಈ ಕತೆಯನ್ನು ನೀವು ಉದ್ಯೋಗ ಖಾತ್ರಿ ಯೋಜನೆ ಮಾಡಿಕೊಂಡಿದ್ದಿರೇನು ಎಂದು ಕಿಡಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಡಾರ್ಲಿಂಗ್‌ ಕೃಷ್ಣ ಬುಧವಾರ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ʼಲವ್‌ ಮಾಕ್‌ಟೇಲ್‌-3ʼ ಶೀರ್ಷಿಕೆಯ ಜೊತೆಗೆ ಯುಗಾದಿ ಹಬ್ಬದ ಶುಭಾಶಯದ ಸಂದೇಶವಿರುವ ಫೋಟೋವನ್ನು ಹಂಚಿಕೊಂಡಿದ್ದರು. ಇದೀಗ ಅವರು ʼಲವ್‌ ಮಾಕ್‌ಟೇಲ್‌-3ʼ ಸಿನಿಮಾ ಘೋಷಿಸುತ್ತಲೇ ಅಭಿಮಾನಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ.

ಡಾರ್ಲಿಂಗ್‌ ಕೃಷ್ಣ ಹೊಸ ಸಿನಿಮಾ ಘೋಷಣೆಗೆ ಪ್ರತಿಕ್ರಿಯಿಸಿರುವ ಇನ್‌ಸ್ಟಾಗ್ರಾಂ ಬಳಕೆದಾರ ಗಿರೀಶ್‌, ” ʼಲವ್‌ ಮಾಕ್‌ಟೇಲ್‌ʼ ಸಿನಿಮಾ ಮೇಲಿದ್ದ ಅಭಿಮಾನದಿಂದಾಗಿ ಜನ ʼಲವ್‌ ಮಾಕ್‌ಟೇಲ್‌-2ʼ ನೋಡಲು ಚಿತ್ರಮಂದಿರಗಳಿಗೆ ಬಂದರಷ್ಟೇ. ಹೂರಣವೇ ಇಲ್ಲದ ಕತೆಯನ್ನಿಟುಕೊಂಡು ʼಲವ್‌ ಮಾಕ್‌ಟೇಲ್‌-3ʼ ಮಾಡಲು ಹೊರಟಿದ್ದೀರಾ” ಎಂದು ವ್ಯಂಗ್ಯವಾಡಿದ್ದಾರೆ.

ʼಲವ್‌ ಮಾಕ್‌ಟೇಲ್‌-3ʼ ಘೋಷಣೆಯ ಬಗ್ಗೆ ತಿಳಿದ ಟ್ವಿಟರ್‌ ಬಳಕೆದಾರ ದೀಪಕ್‌ ಎಂಬುವವರು, ” ʼಲವ್‌ ಮಾಕ್‌ಟೇಲ್‌-3ʼ ಸಿನಿಮಾ ಮಾಡುವ ಯೋಜನೆಯನ್ನು ದಯವಿಟ್ಟು ನಿಲ್ಲಿಸಿ. ಇತ್ತೀಚೆಗೆ ನಿಮ್ಮ ಯಾವ ಸಿನಿಮಾಗಳು ಕೂಡ ಯಶಸ್ಸು ಕಂಡಿಲ್ಲ. ಪ್ರೇಕ್ಷಕರನ್ನು ಲಘುವಾಗಿ ಪರಿಗಣಿಸಬೇಡಿ. ಸಿನಿಮಾಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವುದು ಅಗತ್ಯ” ಎಂದು ಖಾರವಾಗಿಯೇ ಕಿವಿಮಾತು ಹೇಳಿದ್ದಾರೆ.

ಕೆಲವರು, “ಅತಿಯಾದರೆ ಅಮೃತವೂ ವಿಷ ಆಗುತ್ತದೆ” ಎಂದರೆ, ಇನ್ನು ಕೆಲವರು, “ಹೀಗೆ ಸರಣಿಗಳನ್ನು ಮಾಡಿ ಮೂಲ ʼಲವ್‌ ಮಾಕ್‌ಟೇಲ್‌ʼ ಚಿತ್ರದ ಹೆಸರನ್ನು ಹಾಳು ಮಾಡಬೇಡಿ” ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಚಿತ್ರದ ಬಗ್ಗೆ ನಮ್ಮ ಅಭಿಪ್ರಾಯ ತಿಳಿಸಿದರೆ ಮಿಲನ ನಾಗರಾಜ್‌ ನಮ್ಮನ್ನು ಟ್ವಿಟರ್‌ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬ್ಲಾಕ್‌ ಮಾಡುತ್ತಿದ್ದಾರೆ ಎಂದು ಕೆಲವರು ದೂರಿದ್ದಾರೆ.

2020ರಲ್ಲಿ ಡಾರ್ಲಿಂಗ್‌ ಕೃಷ್ಣ ಮತ್ತು ಮಿಲನ ನಾಗರಾಜ್‌ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಲವ್‌ ಮಾಕ್‌ಟೇಲ್‌ʼ ಸಿನಿಮಾ ಭರ್ಜರಿ ಯಶಸ್ಸು ಗಳಿಸಿತ್ತು. ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಬಂದ ಬೆನ್ನಲ್ಲೇ ಕೃಷ್ಣ ʼಲವ್‌ ಮಾಕ್‌ಟೇಲ್‌-2ʼ ಸಿನಿಮಾ ಮಾಡಿದರು. ಆದರೆ, ʼಲವ್‌ ಮಾಕ್‌ಟೇಲ್‌-2ʼ ನಿರೀಕ್ಷಿತ ಮಟ್ಟಿಗೆ ಯಶಸ್ಸು ಕಾಣಲಿಲ್ಲ. ಹೀಗಿರುವಾಗ ಕೃಷ್ಣ, ʼಲವ್‌ ಮಾಕ್‌ಟೇಲ್‌-3ʼ ಘೋಷಿಸಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಕೃಷ್ಣ ಮತ್ತು ಮಿಲನ ಜೋಡಿ ಈ ಗಿಮಿಕ್‌ಗಳನ್ನು ಬಿಟ್ಟು ಭಿನ್ನ ಕಥಾಹಂದರ ಮತ್ತು ಪಾತ್ರಗಳ ಮೂಲಕ ಗುರುತಿಸಿಕೊಳ್ಳಲಿ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತಬ್ಧ ಚಿತ್ರ ಮಾತಾಡಿದಂತೆ, ಶಬ್ದ ಕಣ್ಣಿಗೆ ಕಾಣಿಸುವಂತೆ- ಸಿನೆಮಾದ ತೆರೆಮರೆಯ ತಾತ್ವಿಕತೆ

ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ...

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...