ಉರಿಗೌಡ, ನಂಜೇಗೌಡರ ಸೃಷ್ಟಿ; ಒಂದು ಕಲ್ಲಲ್ಲಿ 2 ಹಕ್ಕಿ ಹೊಡೆಯುವ ಹುನ್ನಾರ ಎಂದ ಕಿಶೋರ್‌

Date:

Advertisements

ಉರಿಗೌಡ ಮತ್ತು ನಂಜೇಗೌಡ ಎಂಬ ನಕಲಿ ಪಾತ್ರಗಳನ್ನು ಬಳಸಿಕೊಂಡು ಒಕ್ಕಲಿಗ ಮತದಾರರನ್ನು ಸೆಳೆಯಲು ಯತ್ನಿಸಿದ ಬಿಜೆಪಿಗರ ನಡೆಯನ್ನು ಖಂಡಿಸಿರುವ ಬಹುಭಾಷಾ ನಟ ಕಿಶೋರ್‌, ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಯತ್ನ ಎಂದು ಕಿಡಿ ಕಾರಿದ್ದಾರೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಲ್ಪಿತ ಪಾತ್ರಗಳ ಬಗೆಗಿನ ವರದಿಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕಿಶೋರ್, “ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದು ರಾಜಕೀಯ ಮಾಡಲಾಗುತ್ತಿದೆ. ಇದು ಇಂದಿನ ಪ್ರಜಾಪ್ರಭುತ್ವ. ನಂಜೇಗೌಡ ಮತ್ತು ಉರಿಗೌಡರ ಸೃಷ್ಟಿ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯೋ ಯತ್ನವೇ? ಟಿಪ್ಪುವನ್ನು ಕೊಂದವರೆೆಂದು ಹೇಳಿ ಮುಸ್ಲಿಮರು ಮತ್ತು ಒಕ್ಕಲಿಗರನ್ನು ಒಬ್ಬರ ಮೇಲೊಬ್ಬರನ್ನು ಎತ್ತಿಕಟ್ಟುತ್ತಲೇ ಒಕ್ಕಲಿಗರು ಬ್ರಿಟೀಷರ ಪರವಾಗಿದ್ದರೆಂದು ಹೇಳಿ ಮುಂದೊಂದು ದಿನ ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ” ಎಂದು ಪ್ರಶ್ನಿಸಿದ್ದಾರೆ.

“ಮೊದಲು ಹಿಂದೂ-ಮುಸ್ಲಿಂ ಎಂದು ಮನೆಯ ಸದಸ್ಯರನ್ನು ಎತ್ತಿಕಟ್ಟಿದರು. ಗಾಂಧಿ ಎಂದು ಗಾಂಧಿಯನ್ನು ಕೊಂದರು. ರೈತರನ್ನು ಭಯೋತ್ಪಾದಕರು ಎಂದರು. ಉರಿ ಹೊತ್ತಿಸಿ, ನಂಜು ಕಾರಿ, ಒಕ್ಕಲಿಗರೆಂದರು. ಟಿಪ್ಪುವೆಂದರು, ಬಿಹಾರಿಗಳೆಂದರು, ತಮಿಳರೆಂದರು, ಧರ್ಮವೆಂದರು, ಜಾತಿಯೆಂದರು, ದಲಿತರೆಂದರು, ಭಾಷೆ ಎಂದರು, ದೇಶವೆಂದರು, ಇತಿಹಾಸ ತಿರುಚಿ ಸುಳ್ಳು ಸುದ್ದಿ ಹರಡಿದರು” ಎಂದು ಆಕ್ರೋಶ ವಕ್ತಪಡಿಸಿದ್ದಾರೆ.

Advertisements

“ಕೇವಲ ಅಧಿಕಾರದಾಸೆಯಿಂದ ಸರ್ವಜನಾಂಗದ ಶಾಂತಿಯ ತೋಟವನ್ನು ಕದಡಿ, ʼವಸುದೇವ ಕುಟುಂಬಕಂʼನ ಹೆಮ್ಮೆಯ ಕುಟುಂಬವನ್ನು ಮುರಿಯಲು ಬರುತ್ತಿದ್ದಾರೆ. ಮಾಡಿದ ಕೆಲಸದ ಮೇಲೆ ಮತ ಯಾಚಿಸಲು ಯೋಗ್ಯತೆಯಿಲ್ಲದ ಧರ್ಮಾಂಧ ಮನೆಹಾಳರು. ಚುನಾವಣೆಯ ಕಾಲವಿದು ಎಚ್ಚರ” ಎಂದು ರಾಜ್ಯದ ಜನರಿಗೆ ಕಿವಿ ಮಾತು ಹೇಳಿದ್ದಾರೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X