ಗಮನ ಸೆಳೆಯುತ್ತಿದೆ ʼಹೊಯ್ಸಳʼ ಚಿತ್ರದ ಜನಪದ ಹಾಡು

Date:

  • ಒಟ್ಟು ಬಾಳೇವು ಬ್ಯಾರೇನ ಐತಿ ಎಂದ ಯೋಗರಾಜ್‌ ಭಟ್‌
  • ಜನಪದ ಹಾಡಿಗೆ ಧ್ವನಿಯಾದ ಅಜನೀಶ್‌ ಲೋಕನಾಥ್‌

ಕನ್ನಡದ ಸ್ಟಾರ್‌ ನಟ ಡಾಲಿ ಧನಂಜಯ್‌ ಅಭಿನಯದ ʼಹೊಯ್ಸಳʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಟೀಸರ್‌ ಮತ್ತು ಟ್ರೈಲರ್‌ಗಳ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರದ “ಬ್ಯಾರೇನ ಐತಿ..” ಲಿರಿಕಲ್‌ ಹಾಡು ಸೋಮವಾರ ಬಿಡುಗಡೆಯಾಗಿದ್ದು, ಸಿನಿ ರಸಿಕರ ಗಮನ ಸೆಳೆಯುತ್ತಿದೆ.

- Advertisement -

ಚಿತ್ರತಂಡ ಹೇಳಿಕೊಂಡಿರುವಂತೆ ಇಡೀ ‘ಹೊಯ್ಸಳ’ ಸಿನಿಮಾದ ಕಥೆ ಸಾಗುವುದು ಗಡಿ ಜಿಲ್ಲೆ ಬೆಳಗಾವಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ. ಉತ್ತರ ಕರ್ನಾಟಕ ಭಾಗದ ಕಥೆಯಾದ ಕಾರಣಕ್ಕೆ ಚಿತ್ರದಲ್ಲಿ ಸ್ಥಳೀಯ ಸೊಗಡಿನ ಜನಪದ ಹಾಡನ್ನು ಬಳಸಿಕೊಳ್ಳಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಜನಪ್ರಿಯತೆ ಗಳಿಸಿದ್ದ ಸುರೇಶ್‌ ಇಂಚಗೇರಿ ಅವರ “ಅದು ಬ್ಯಾರೇನ ಐತಿ…” ಜನಪದ ಹಾಡನ್ನೇ ಹಿರಿಯ ನಿರ್ದೇಶಕ, ಚಿತ್ರ ಸಾಹಿತಿ ಯೋಗರಾಜ್‌ ಭಟ್‌ ಸಿನಿಮಾ ಶೈಲಿಗೆ ಹೊಂದುವಂತೆ ಮರು ರಚನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಹುಟ್ಟಿ ಸಾಯೋದಲ್ಲ ಒಟ್ಟು ಬಾಳೇವು ಬ್ಯಾರೇನ ಐತಿ… ನೀವು ಕಂಡಂಗಲ್ಲ ನಮ್ಮ ಬಾಳೇವು ಬ್ಯಾರೇನ ಐತಿ…” ಎಂಬ ಸಾಲುಗಳು ಕೇಳುಗರಿಗೆ ಮುದ ನೀಡುವಂತಿವೆ. ಖ್ಯಾತ ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ ತಾವೇ ಸಂಗೀತ ನೀಡಿ, ಧ್ವನಿಯಾಗಿರುವ ಈ ಜನಪದ ಹಾಡಿನ ಲಿರಿಕಲ್‌ ವಿಡಿಯೋ ಸದ್ಯ ಯಟ್ಯೂಬ್‌ನಲ್ಲಿ ಸಖತ್‌ ಸದ್ದು ಮಾಡುತ್ತಿದೆ.

ವಿಜಯ್‌ ಎನ್‌ ನಿರ್ದೇಶನದಲ್ಲಿ ಮೂಡಿಬಂದಿರುವ ʼಹೊಯ್ಸಳʼ ಚಿತ್ರದಲ್ಲಿ ಧನಂಜಯ್‌ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಮಿಂಚಿದ್ದಾರೆ. ಅಮೃತಾ ಅಯ್ಯಂಗಾರ್‌ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನವೀನ್‌ ಶಂಕರ್‌, ಅವಿನಾಶ್‌ ಬಿಎಸ್‌, ರಾಜೇಶ್‌ ನಟರಂಗ, ಅಚ್ಯುತ್‌ ಕುಮಾರ್‌, ಮಯೂರಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ʼಕೆ ಆರ್ ಜಿ ಸ್ಟುಡಿಯೋಸ್ʼನ ಕಾರ್ತಿಕ್‌ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಚಿತ್ರ ಮಾರ್ಚ್‌ 30ರಂದು ತೆರೆ ಕಾಣಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಿಂದ ಗುಜರಾತ್‌ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಆಯೋಜನೆಯ ಹಿಂದಿನ ಮರ್ಮವೇನು?

ಹಲವು ದಶಕಗಳಿಂದ ಅತ್ಯಂತ ಶಿಸ್ತುಬದ್ಧವಾಗಿ ನಡೆದುಕೊಂಡು ಬಂದಿದ್ದ ಸಂಪ್ರದಾಯ ಹಾಗೂ ನಿಯಮಗಳನ್ನು...

ಮೈಸೂರು ಯುವ ದಸರಾ: ಉದ್ಘಾಟಕರಾಗಿ ನಟ ಪ್ರಭುದೇವ್‌ಗೆ ಅಧಿಕೃತ ಆಹ್ವಾನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಸಿದ್ಧತೆಗಳು ಬಿರುಸುಗೊಂಡಿದ್ದು, ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ...

ನಟ ದುನಿಯಾ ವಿಜಯ್‌ ಮತ್ತು ಪತ್ನಿ ನಾಗರತ್ನಗೆ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್

ಸ್ಯಾಂಡಲ್‌ವುಡ್ ನಟ ‘ದುನಿಯಾ ವಿಜಯ್’ ಮತ್ತು ಅವರ ಪತ್ನಿ ನಾಗರತ್ನರ ದೀರ್ಘಕಾಲದ...