ನಿರೀಕ್ಷೆ ಹೆಚ್ಚಿಸಿದ ʼಹೊಯ್ಸಳʼ ಟ್ರೈಲರ್‌

Date:

Advertisements

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಡಾಲಿ ಧನಂಜಯ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಹೊಯ್ಸಳ’ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಚಿತ್ರತಂಡ ಸೋಮವಾರ ಬಹುನಿರೀಕ್ಷಿತ ಟ್ರೈಲರ್‌ ಬಿಡುಗಡೆಗೆ ಮಾಡಿದ್ದು, ಎರಡೂವರೆ ನಿಮಿಷಗಳ ಟ್ರೈಲರ್‌ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಬಹುಪಾಲು ಸಿನಿಮಾಗಳಲ್ಲಿ ಖಳನ ಪಾತ್ರದಲ್ಲಿಯೇ ಕಾಣಿಸಿಕೊಳ್ಳುತ್ತಿದ್ದ ಧನಂಜಯ್‌ ಈ ಚಿತ್ರದಲ್ಲಿ ಗುರುದೇವ ಹೊಯ್ಸಳ ಎಂಬ ಖಡಕ್‌ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಮಿಂಚಿದ್ದಾರೆ. ಮಹಾರಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದ ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ತೊಡೆ ತಟ್ಟಿ ನಿಲ್ಲುವ ದಕ್ಷ ಪೊಲೀಸ್‌ ಅಧಿಕಾರಿಯ ಬದುಕಿನ ಸುತ್ತ ಚಿತ್ರದ ಕಥೆ ಮೂಡಿಬಂದಿದೆ ಎಂಬುದನ್ನು ಟ್ರೈಲರ್‌ನಲ್ಲಿ ಸೂಕ್ಷ್ಮವಾಗಿ ತೋರಿಸಲಾಗಿದೆ. ಧನಂಜಯ್‌ ಉತ್ತರ ಕರ್ನಾಟಕ ಭಾಷೆಯಲ್ಲಿ ಆಡುವ ಮಾತುಗಳು ಗಮನ ಸೆಳೆಯುತ್ತವೆ. ʼಗುಲ್ಟುʼ ಖ್ಯಾತಿಯ ನವೀನ್‌ ಶಂಕರ್‌ ಚಿತ್ರದಲ್ಲಿ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವಿನಾಶ್‌ ಬಿಎಸ್‌, ರಾಜೇಶ್‌ ನಟರಂಗ, ಅಚ್ಯುತ್‌ ಕುಮಾರ್‌, ಮಯೂರಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಆ್ಯಕ್ಷನ್ ಕಥಾಹಂದರವುಳ್ಳ ʼಹೊಯ್ಸಳʼ ಚಿತ್ರಕ್ಕೆ ವಿಜಯ್ ಎನ್‌ ನಿರ್ದೇಶನವಿದೆ. ಚಿತ್ರದಲ್ಲಿ ಧನಂಜಯ್‌ಗೆ ಅಮೃತಾ ಅಯ್ಯಂಗಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ʼಕೆ ಆರ್ ಜಿ ಸ್ಟುಡಿಯೋಸ್ʼನ ಕಾರ್ತಿಕ್‌ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಅಜನೀಶ್ ಬಿ ಲೋಕನಾಥ್ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದಾರೆ. ಟೀಸರ್‌ ಮತ್ತು ಟ್ರೈಲರ್‌ಗಳ ಮೂಲಕ ಸಿನಿ ರಸಿಕರ ಗಮನ ಸೆಳೆಯುತ್ತಿರುವ ಈ ಚಿತ್ರ ಮಾರ್ಚ್‌ 30ರಂದು ತೆರೆ ಕಾಣಲಿದೆ.

Advertisements
c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X