ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

Date:

Advertisements
  • ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿ
  • ಬಂಧಿತ ಆರೋಪಿ ಲಾರೆನ್ಸ್‌ ಬಿಷ್ಣೋಯಿ ಸಹಚರ

ಬಾಲಿವುಡ್‌ನ ಖ್ಯಾತ ನಟ ಸಲ್ಮಾನ್‌ ಖಾನ್‌ ಅವರಿಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಬಂಧಿತನನ್ನು ರಾಜಸ್ಥಾನದ ಜೋಧ್‌ಪುರ್‌ ಮೂಲದ ಧಾಕಡ್‌ ರಾಮ್‌ ಬಿಷ್ಣೋಯಿ ಎಂದು ಗುರುತಿಸಲಾಗಿದೆ. ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿರುವ ಮುಂಬೈನ ಬಾಂದ್ರಾ ಠಾಣೆಯ ಪೊಲೀಸರ ತಂಡ ಭಾನುವಾರ ಜೋಧ್‌ಪುರ್‌ ಸಮೀಪದಲ್ಲಿರುವ ʼರೋಹಿಚಾ ಕಲನ್‌ʼಗೆ ಭೇಟಿ ನೀಡಿ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ, ಈ ಹಿಂದೆ ಸಲ್ಮಾನ್‌ ಖಾನ್‌ ಹತ್ಯಗೆ ಯತ್ನಿಸಿದ್ದ ಲಾರೆನ್ಸ್‌ ಬಿಷ್ಣೋಯಿ ಸಹಚರ ಎನ್ನಲಾಗಿದೆ.

ಇತ್ತೀಚೆಗೆ ಸಲ್ಮಾನ್‌ ಖಾನ್‌ ಆಪ್ತ ಸಹಾಯಕ ಪ್ರಶಾಂತ್‌ ಗುಂಜಲ್ಕರ್‌ ಅವರಿಗೆ ಇ-ಮೇಲ್‌ ಮೂಲಕ ಸಂದೇಶ ರವಾನಿಸಿದ್ದ ಧಾಕಡ್‌ ರಾಮ್‌, ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಆತನ ಸಂದೇಶದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಹೆಸರು ಕೂಡ ಉಲ್ಲೇಖವಾಗಿತ್ತು. “ಗೋಲ್ಡಿ ಬ್ರಾರ್‌ ನಿಮ್ಮ ಮಾಲೀಕನ (ಸಲ್ಮಾನ್‌ ಖಾನ್‌) ಜೊತೆಗೆ ಮಾತನಾಡಲು ಇಚ್ಛಿಸಿದ್ದಾನೆ. ನಿಮ್ಮ ಮಾಲೀಕ ಇನ್ನೂ ಲಾರೇನ್ಸ್‌ ಬಿಷ್ಣೋಯಿಯ ಸಂದರ್ಶನದ ವಿಡಿಯೋ ನೋಡಿಲ್ಲವಾದರೆ, ಮೊದಲು ಆ ಸಂದರ್ಶನದ ವಿಡಿಯೋ ನೋಡಲು ಹೇಳಿ. ಆತ ಈ ವಿವಾದವನ್ನು ಇಲ್ಲಿಗೆ ಅಂತ್ಯಗೊಳಿಸಲು ಇಚ್ಛಿಸಿದ್ದರೆ ಗೋಲ್ಡಿ ಬ್ರಾರ್‌ ಜೊತೆಗೆ ಮುಖಾಮುಖಿ ಮಾತುಕತೆಗೆ ಬರುತ್ತಾನೆಯೇ ಕೇಳಿ. ಈ ಬಾರಿ ಸುಮ್ಮನೆ ಸಂದೇಶ ಕಳುಹಿಸಿದ್ದೇವೆ. ಮುಂದಿನ ಬಾರಿ ಹೀಗಾಗುವುದಿಲ್ಲ, ನಮ್ಮ ನಡೆಯನ್ನು ಕಂಡು ನೀವೇ ಆಘಾತಕ್ಕೊಳಗಾಗುತ್ತೀರಿ” ಎಂದು ಬೆದರಿಸಿದ್ದ.

Advertisements

ಈ ಸುದ್ದಿ ಓದಿದ್ದೀರಾ? ಮಲಯಾಳಂನ ಹಿರಿಯ ನಟ ಇನ್ನೋಸೆಂಟ್‌ ಇನ್ನಿಲ್ಲ

ಇದಾದ ಬೆನ್ನಲ್ಲೇ ಸಲ್ಮಾನ್‌ ಖಾನ್‌ ಮುಂಬೈನ ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಈ ಹಿಂದೆ ನಟನ ಹತ್ಯೆಗೆ ಯತ್ನಿಸಿದ್ದ ಮತ್ತು ಅನ್ಯ ಪ್ರಕರಣದಲ್ಲಿ ಈಗಾಗಲೇ ಸೆರೆವಾಸ ಅನುಭವಿಸುತ್ತಿರುವ ಲಾರೇನ್ಸ್‌ ಬಿಷ್ಣೋಯಿ, ಗೋಲ್ಡಿ ಬ್ರಾರ್‌ ಮತ್ತು ರೋಹಿತ್‌ ಗರ್ಗಿ ಅವರ ವಿರುದ್ಧ ಜೀವ ಬೆದರಿಕೆ ಹಾಕಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದರು. ಮಾರ್ಚ್‌ 24ರಂದು ಸಲ್ಮಾನ್‌ ಖಾನ್‌ ಆಪ್ತ ಸಹಾಯಕರಿಗೆ ಬಂದಿರುವ ಇ-ಮೇಲ್‌ ವಿಳಾಸದ ವಿವರವನ್ನು ಪೊಲೀಸರು ಕಲೆ ಹಾಕಿದ್ದರು. ಇ-ಮೇಲ್‌ ಖಾತೆಗೆ ಬಳಸಲಾಗಿರುವ ಮೊಬೈಲ್‌ ಸಂಖ್ಯೆ ಲಂಡನ್‌ ಮೂಲದ ವ್ಯಕ್ತಿಯ ಹೆಸರಿನಲ್ಲಿದೆ ಎಂದು ಮಾಹಿತಿ ನೀಡಿದ್ದರು. ಇದಾದ ಕೆಲವೇ ದಿನಕ್ಕೆ ಆರೋಪಿಯನ್ನು ಪತ್ತೆ ಹಚ್ಚಿ ಬಂಧನಕ್ಕೊಳಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X