ಸಲ್ಮಾನ್‌ ಖಾನ್‌ ಜೀವ ಬೆದರಿಕೆ ಪ್ರಕರಣಕ್ಕೆ ಲಂಡನ್‌ ನಂಟು

Date:

Advertisements
  • ಜೀವ ಬೆದರಿಕೆ ಸಂದೇಶದ ಬೆನ್ನಲ್ಲೇ ಸಲ್ಮಾನ್‌ ಭದ್ರತೆ ಹೆಚ್ಚಳ
  • ಲಂಡನ್‌ ಮೂಲದ ವ್ಯಕ್ತಿಯ ಇ-ಮೇಲ್‌ ಬಳಸಿ ಬೆದರಿಕೆ

ಬಾಲಿವುಡ್‌ನ ಖ್ಯಾತ ನಟ ಸಲ್ಮಾನ್‌ ಖಾನ್‌ ಅವರಿಗೆ ಇತ್ತೀಚೆಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಹಾಕಲಾಗಿತ್ತು. ಈ ಬೆದರಿಕೆ ಸಂದೇಶಕ್ಕೆ ಲಂಡನ್‌ ಮೂಲದ ವ್ಯಕ್ತಿಯ ನಂಟಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಸಲ್ಮಾನ್‌ ಖಾನ್‌ ಅವರ ಆಪ್ತ ಸಹಾಯಕರಿಗೆ ಇ-ಮೇಲ್‌ ಮೂಲಕ ಸಂದೇಶ ರವಾನಿಸಿದ್ದ ಅಪರಿಚಿತರು, ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಈ ಸಂದೇಶದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಹೆಸರು ಕೂಡ ಉಲ್ಲೇಖವಾಗಿತ್ತು.

“ಗೋಲ್ಡಿ ಬ್ರಾರ್‌ ನಿಮ್ಮ ಮಾಲೀಕನ (ಸಲ್ಮಾನ್‌ ಖಾನ್‌) ಜೊತೆಗೆ ಮಾತನಾಡಲು ಇಚ್ಛಿಸಿದ್ದಾನೆ. ನಿಮ್ಮ ಮಾಲೀಕ ಇನ್ನೂ ಲಾರೇನ್ಸ್‌ ಬಿಷ್ಣೋಯಿಯ ಸಂದರ್ಶನದ ವಿಡಿಯೋ ನೋಡಿಲ್ಲವಾದರೆ, ಮೊದಲು ಆ ವಿಡಿಯೋವನ್ನು ನೋಡಲು ಹೇಳಿ. ಆತ ಈ ವಿವಾದವನ್ನು ಇಲ್ಲಿಗೆ ಅಂತ್ಯಗೊಳಿಸಲು ಇಚ್ಛಿಸಿದ್ದರೆ ಗೋಲ್ಡಿ ಬ್ರಾರ್‌ ಜೊತೆಗೆ ನೇರಾನೇರ ಮಾತುಕತೆಗೆ ಬರುತ್ತಾನೆಯೇ ಕೇಳಿ. ಈ ಬಾರಿ ಸುಮ್ಮನೆ ಸಂದೇಶ ತಲುಪಿಸುತ್ತಿದ್ದೇವೆ. ಮುಂದಿನ ಬಾರಿ ಹೀಗಾಗುವುದಿಲ್ಲ, ನಮ್ಮ ನಡೆಯನ್ನು ಕಂಡು ನೀವೇ ಆಘಾತಕ್ಕೊಳಗಾಗುತ್ತೀರಿ” ಎಂದು ಬೆದರಿಸಿದ್ದರು.

Advertisements

ಇದಾದ ಬೆನ್ನಲ್ಲೇ ಸಲ್ಮಾನ್‌ ಖಾನ್‌ ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಈ ಹಿಂದೆ ಸಲ್ಮಾನ್‌ ಖಾನ್‌ ಅವರ ಹತ್ಯೆಗೆ ಯತ್ನಿಸಿದ್ದ, ಅನ್ಯ ಪ್ರಕರಣದಲ್ಲಿ ಈಗಾಗಲೇ ಸೆರೆವಾರ ಅನುಭವಿಸುತ್ತಿರುವ ಲಾರೇನ್ಸ್‌ ಬಿಷ್ಣೋಯಿ, ಗೋಲ್ಡಿ ಬ್ರಾರ್‌ ಮತ್ತು ರೋಹಿತ್‌ ಗರ್ಗಿ ಅವರ ವಿರುದ್ಧ ಜೀವ ಬೆದರಿಕೆ ಹಾಕಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ತನಿಖೆಯ ವೇಳೆ ಸಲ್ಮಾನ್‌ ಖಾನ್‌ ಆಪ್ತ ಸಹಾಯಕರಿಗೆ ಬಂದಿರುವ ಇ-ಮೇಲ್‌ ವಿಳಾಸದ ವಿವರವನ್ನು ಪೊಲೀಸರು ಕಲೆ ಹಾಕಿದ್ದಾರೆ. ಇ-ಮೇಲ್‌ ಖಾತೆಗೆ ಬಳಸಲಾಗಿರುವ ಮೊಬೈಲ್‌ ಸಂಖ್ಯೆ ಲಭ್ಯವಾಗಿದ್ದು, ಆ ಮೊಬೈಲ್‌ ನಂಬರ್‌ ಬಳಸುತ್ತಿರುವ ವ್ಯಕ್ತಿ ಲಂಡನ್‌ ಮೂಲದವನು. ಆತನನ್ನು ಸಂಪರ್ಕಿಸುವ ಪ್ರಯತ್ನಗಳು ಕೂಡ ನಡೆಯುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್‌ ಖಾನ್‌ ನಿವಾಸದ ಬಳಿ ನಟನ ತಂದೆ ಸಲೀಂ ಖಾನ್‌ ವಾಯು ವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅವರ ಕೈಗೆ ಅನಾಮದೇಯ ಜೀವ ಬೆದರಿಕೆಯ ಪತ್ರ ಸಿಕ್ಕಿತ್ತು. ಸಲೀಂ ಖಾನ್‌ ಮತ್ತು ಸಲ್ಮಾನ್‌ ಖಾನ್‌ ಇಬ್ಬರನ್ನು ಹತ್ಯೆ ಮಾಡುವುದಾಗಿ ಪತ್ರದಲ್ಲಿ ಬರೆಯಲಾಗಿತ್ತು. ಘಟನೆಯ ಬೆನ್ನಲ್ಲೇ ಮುಂಬೈ ಪೊಲೀಸರು ಸಲ್ಮಾನ್‌ ಖಾನ್‌ ಅವರಿಗೆ ʼವೈ+ʼ ಶ್ರೇಣಿಯ ಬಿಗಿ ಭದ್ರತೆ ಒದಗಿಸಿದ್ದಾರೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X