ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ ಟೈಟಲ್‌ ಘೋಷಿಸಿದ ರಾಮ್‌ ಚರಣ್‌

Date:

  • 38ನೇ ವಸಂತಕ್ಕೆ ಕಾಲಿಟ್ಟ ಸ್ಟಾರ್‌ ರಾಮ್‌ ಚರಣ್‌
  • ಗಮನ ಸೆಳೆಯುತ್ತಿದೆ ಹೊಸ ಸಿನಿಮಾ ಟೈಟಲ್‌

ತೆಲುಗಿನ ಸ್ಟಾರ್‌ ನಟ ರಾಮ್‌ ಚರಣ್‌ ಸೋಮವಾರ 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಭಾರತೀಯ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು, ಇದೇ ಸಂದರ್ಭದಲ್ಲಿ ರಾಮ್‌ ಚರಣ್‌ ನಟನೆಯ 50ನೇ ಚಿತ್ರದ ಟೈಟಲ್‌ ಬಹಿರಂಗಗೊಂಡಿದೆ.

- Advertisement -

ರಾಮ್‌ ಚರಣ್‌ ಮತ್ತು ತಮಿಳಿನ ಖ್ಯಾತ ನಿರ್ದೇಶಕ ಶಂಕರ್‌ ಕಾಂಬಿನೇಶನ್‌ನ ಹೊಸ ಸಿನಿಮಾ ಕಳೆದ ಫೆಬ್ರವರಿಯಲ್ಲಿ ಘೋಷಣೆಯಾಗಿತ್ತು. ನಟನ ಹುಟ್ಟು ಹಬ್ಬದ ಪ್ರಯುಕ್ತ ಟೈಟಲ್‌ ಘೋಷಿಸಿರುವ ಚಿತ್ರತಂಡ ನೂತನ ಚಿತ್ರಕ್ಕೆ ʼಗೇಮ್‌ ಚೇಂಜರ್‌ʼ ಎಂದು ಹೆಸರಿಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

42 ಸೆಕೆಂಡುಗಳ ಟೈಟಲ್‌ ಟೀಸರ್‌ ಬಿಡುಗಡೆ ಮಾಡಿ ರಾಮ್‌ ಚರಣ್‌ಗೆ ಹುಟ್ಟು ಹಬ್ಬದ ಶುಭಕೋರಿರುವ ನಿರ್ದೇಶಕ ಶಂಕರ್‌, ʼಟೈಟಲ್‌ ಥೀಮ್‌ʼನಲ್ಲಿಯೇ ಚಿತ್ರದ ಕಥೆ ಚುನಾವಣಾ ರಾಜಕೀಯದ ಸುತ್ತ ಇರಲಿದೆ. ಕಥಾ ನಾಯಕ ಈ ಕಥೆಯ ʼಗೇಮ್‌ ಚೇಂಜರ್‌ʼ ಎಂಬ ಸುಳಿವು ನೀಡಿದ್ದಾರೆ.

ಬಾಲಿವುಡ್‌ನ ಖ್ಯಾತ ನಟಿ ಕಿಯಾರಾ ಅಡ್ವಾಣಿ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಬಹುಭಾಷಾ ನಟಿ ಅಂಜಲಿ, ಸಮುದ್ರಕಣಿ, ಎಸ್‌ ಜೆ ಸೂರ್ಯ, ಶ್ರೀಕಾಂತ್‌, ಸುನಿಲ್‌ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ತಮನ್‌ ಎಸ್‌ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ರಾಜು ಮತ್ತು ಶಿರೀಶ್‌ ಬಂಡವಾಳ ಹೂಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಿಂದ ಗುಜರಾತ್‌ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಆಯೋಜನೆಯ ಹಿಂದಿನ ಮರ್ಮವೇನು?

ಹಲವು ದಶಕಗಳಿಂದ ಅತ್ಯಂತ ಶಿಸ್ತುಬದ್ಧವಾಗಿ ನಡೆದುಕೊಂಡು ಬಂದಿದ್ದ ಸಂಪ್ರದಾಯ ಹಾಗೂ ನಿಯಮಗಳನ್ನು...

ಮೈಸೂರು ಯುವ ದಸರಾ: ಉದ್ಘಾಟಕರಾಗಿ ನಟ ಪ್ರಭುದೇವ್‌ಗೆ ಅಧಿಕೃತ ಆಹ್ವಾನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಸಿದ್ಧತೆಗಳು ಬಿರುಸುಗೊಂಡಿದ್ದು, ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ...

ನಟ ದುನಿಯಾ ವಿಜಯ್‌ ಮತ್ತು ಪತ್ನಿ ನಾಗರತ್ನಗೆ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್

ಸ್ಯಾಂಡಲ್‌ವುಡ್ ನಟ ‘ದುನಿಯಾ ವಿಜಯ್’ ಮತ್ತು ಅವರ ಪತ್ನಿ ನಾಗರತ್ನರ ದೀರ್ಘಕಾಲದ...