ಮಂಡ್ಯ | ರಾಷ್ಟ್ರಪ್ರಶಸ್ತಿ ವಿಜೇತ ಬಾಲ ನಟ ರೋಹಿತ್​ಗೆ ಅಪಘಾತ; ಐಸಿಯುನಲ್ಲಿ ಚಿಕಿತ್ಸೆ

Date:

Advertisements

‘ಕಾಟೇರ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ, ರಾಷ್ಟ್ರಪ್ರಶಸ್ತಿ ವಿಜೇತ ನಟ ಮಾಸ್ಟರ್ ರೋಹಿತ್​ಗೆ ನಿನ್ನೆ ತಡರಾತ್ರಿ ಅಪಘಾತವಾಗಿ ಗಂಭೀರ ಗಾಯವಾಗಿದೆ. ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿನ ಪಾಲಹಳ್ಳಿ ಬಳಿ ಕಾರು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.  ಭೀಕರ ಅಪಘಾತದಲ್ಲಿ ರೋಹಿತ್ ಮತ್ತು ಅವರ ತಾಯಿ ಇಬ್ಬರಿಗೂ ಗಾಯಗಳಾಗಿವೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಾಸ್ಟರ್ ರೋಹಿತ್, ಶ್ರೀರಂಗಪಟ್ಟಣದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಮಾಸ್ಟರ್ ರೋಹಿತ್, ಅವರ ತಾಯಿ, ಒಬ್ಬ ಉಪನ್ಯಾಸಕ ಹಾಗೂ ರೋಹಿತ್​ರ ಗೆಳೆಯರು KA11 N 4173 ಸಂಖ್ಯೆಯ ಕಾರಿನಲ್ಲಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆಯಲ್ಲಿ ಕೇರಳದ ಪ್ರವಾಸಿ ಬಸ್ಸೊಂದಕ್ಕೆ ಕಾರು ಡಿಕ್ಕಿ ಆಗಿದ್ದು, ಕಾರಿನಲ್ಲಿದ್ದ ಎಲ್ಲರಿಗೂ ತೀವ್ರ ಗಾಯಗಳಾಗಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

Advertisements

ರೋಹಿತ್​ಗೆ ವಸಡು, ತಲೆ ಬುರುಡೆ ಸೇರಿದಂತೆ ಹಲವು ಕಡೆ ತೀವ್ರ ಪೆಟ್ಟಾಗಿದೆ. ಅವರನ್ನು ಮೈಸೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೋಹಿತ್​ರ ತಾಯಿಯ ಎರಡೂ ಕಾಲಿಗೆ ತೀವ್ರ ಪೆಟ್ಟಾಗಿದ್ದು ಮೂಳೆಗಳು ಮುರಿದಿವೆ ಎನ್ನಲಾಗುತ್ತಿದೆ. ರೋಹಿತ್​ರ ಗೆಳೆಯ ಹಾಗೂ ಉಪನ್ಯಾಸಕರಿಗೂ ತೀವ್ರ ಪೆಟ್ಟಾಗಿದೆ.

ಮಾಸ್ಟರ್ ರೋಹಿತ್, ‘ಒಂದಲ್ಲ ಎರಡಲ್ಲ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಅದೇ ಸಿನಿಮಾಕ್ಕೆ ಅವರಿಗೆ ರಾಷ್ಟ್ರಪ್ರಶಸ್ತಿ ಸಹ ದೊರಕಿತ್ತು. ಕಳೆದ ವರ್ಷ ಬಿಡುಗಡೆ ಆದ ‘ಕಾಟೇರ’ ಸಿನಿಮಾದಲ್ಲಿ ರೋಹಿತ್ ನಟಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ನಿಧನ

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ಅವರು ಆಗಸ್ಟ್...

ಮಂಡ್ಯ | ಹೇಮಾವತಿ ನಾಲೆ ಅಕ್ರಮ; ಸರ್ಕಾರಿ ಗೋಮಾಳ ಒತ್ತುವರಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕು ಕಚೇರಿ ಅವರಣ ದಲ್ಲಿಂದು ಕರ್ನಾಟಕ...

ಮಂಡ್ಯದಲ್ಲಿ ಚಿನ್ನಾಭರಣ ದರೋಡೆ: ಕೃತ್ಯ ನೋಡಿದ ವ್ಯಕ್ತಿಯನ್ನು ಕೊಲೆಗೈದು ಪರಾರಿಯಾದ ಕಳ್ಳರು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಶನಿವಾರ ತಡರಾತ್ರಿ ಆಘಾತಕಾರಿ...

ಮಂಡ್ಯ | ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿರಬೇಕಾಗಿದೆ: ನ್ಯಾ. ಬಿ ಟಿ ವಿಶ್ವನಾಥ್

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ದೇಶದ ಮಕ್ಕಳನ್ನು ನಾವು ಗುಡಿ, ಮಸೀದಿ,...

Download Eedina App Android / iOS

X