ಸುದೀಪ್‌ ಮೂರು ತಾಸಿನ ನಾಯಕ ಎಂದ ಸತೀಶ್‌ ಜಾರಕಿಹೊಳಿಗೆ ನಟ ಚೇತನ್‌ ಪ್ರಶ್ನೆ

Date:

Advertisements

ಪ್ರಚಾರದ ವೇಳೆ ಸುದೀಪ್‌ ಬಗ್ಗೆ ಮಾತನಾಡಿದ್ದ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ ಪರ ಪ್ರಚಾರಕ್ಕಳಿದವರು ಎಷ್ಟು ತಾಸಿನ ನಾಯಕರು ಎಂದ ಚೇತನ್‌

ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ನಟ ಕಿಚ್ಚ ಸುದೀಪ್‌ ಕೇವಲ ಮೂರು ತಾಸಿನ ನಾಯಕನಷ್ಟೇ ಎಂಬ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಹೇಳಿಕೆಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿದ್ದಾರೆ.

Advertisements

ಸತೀಶ್‌ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್‌ ಮಾಡಿರುವ ಚೇತನ್‌ ಕುಮಾರ್‌, “ಸುದೀಪ್ ಅವರನ್ನು ‘3 ತಾಸಿನ ನಾಯಕನಷ್ಟೇ’ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಜಾರಕಿಹೊಳಿ ಅವರೇ ನಿಮ್ಮ ಪ್ರಕಾರ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುವ ಫಿಲ್ಮ್ ನಟರು ಎಷ್ಟು ತಾಸಿನ ನಾಯಕರು” ಎಂದು ಪ್ರಶ್ನೆ ಹಾಕಿದ್ದಾರೆ.

ಸೋಮವಾರ ಗುಂಡ್ಲುಪೇಟೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಸತೀಶ್‌ ಜಾರಕಿಹೊಳಿ, “ಮೊನ್ನೆ ಸುದೀಪ್‌ ಕೂಡ ಇಲ್ಲಿ ಪ್ರಚಾರಕ್ಕೆ ಬಂದಿದ್ದರು. ನಾವೆಲ್ಲ ದುಡ್ಡು ಕೊಟ್ಟು ಟಿಕೆಟ್‌ ಖರೀದಿ ಮಾಡಿ ಸುದೀಪ್‌ ಅವರನ್ನು ನೋಡಬೇಕಿತ್ತು. ಆದರೆ, ಈಗ ಪುಕ್ಕಟ್ಟೆಯಾಗಿ ಬಂದು ಹೋಗಿದ್ದಾರೆ. ಅವರು ಅಳಲಿಕ್ಕೆ ದುಡ್ಡು ತೆಗೆದುಕೊಳ್ತಾರೆ. ನಗಲಿಕ್ಕೂ ದುಡ್ಡು ತೆಗೆದುಕೊಳ್ತಾರೆ. ಹೀಗಿರುವಾಗ ಅವರು ನಮ್ಮ (ಜನರ) ಕಷ್ಟಗಳನ್ನು ಯಾವಾಗ ನೋಡಲು ಸಾಧ್ಯ. ಅಂಥವರು ಕೇವಲ ಮೂರು ತಾಸಿನ ನಾಯಕರು ಮಾತ್ರ. ನಾವು ನಿರಂತರವಾಗಿ ನಿಮ್ಮ ಸೇವೆ ಮಾಡುವವರು. ಸುಮ್ಮನೆ ಯಾವುದೋ ಒಬ್ಬ ನಟ ಬಂದ ಕಣ್ಣೀರು ಹಾಕಿ ಹೋದರೆ ಅದು ಪರಿಹಾರ ಅಲ್ಲ” ಎಂದು ತಮ್ಮ ಪಕ್ಷದ ಪರ ಅಭ್ಯರ್ಥಿಗೆ ಮತ ಹಾಕುವಂತೆ ಸ್ಥಳೀಯರಲ್ಲಿ ಮನವಿ ಮಾಡಿದ್ದಾರೆ.

ಸತೀಶ್‌ ಜಾರಕಿಹೊಳಿ ಅವರು ಸುದೀಪ್‌ ಬಗ್ಗೆ ಮಾತನಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X