ಸುದೀಪ್‌ ಮೂರು ತಾಸಿನ ನಾಯಕ ಎಂದ ಸತೀಶ್‌ ಜಾರಕಿಹೊಳಿಗೆ ನಟ ಚೇತನ್‌ ಪ್ರಶ್ನೆ

Date:

ಪ್ರಚಾರದ ವೇಳೆ ಸುದೀಪ್‌ ಬಗ್ಗೆ ಮಾತನಾಡಿದ್ದ ಸತೀಶ್‌ ಜಾರಕಿಹೊಳಿ

- Advertisement -

ಕಾಂಗ್ರೆಸ್‌ ಪರ ಪ್ರಚಾರಕ್ಕಳಿದವರು ಎಷ್ಟು ತಾಸಿನ ನಾಯಕರು ಎಂದ ಚೇತನ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ನಟ ಕಿಚ್ಚ ಸುದೀಪ್‌ ಕೇವಲ ಮೂರು ತಾಸಿನ ನಾಯಕನಷ್ಟೇ ಎಂಬ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಹೇಳಿಕೆಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿದ್ದಾರೆ.

ಸತೀಶ್‌ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್‌ ಮಾಡಿರುವ ಚೇತನ್‌ ಕುಮಾರ್‌, “ಸುದೀಪ್ ಅವರನ್ನು ‘3 ತಾಸಿನ ನಾಯಕನಷ್ಟೇ’ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಜಾರಕಿಹೊಳಿ ಅವರೇ ನಿಮ್ಮ ಪ್ರಕಾರ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುವ ಫಿಲ್ಮ್ ನಟರು ಎಷ್ಟು ತಾಸಿನ ನಾಯಕರು” ಎಂದು ಪ್ರಶ್ನೆ ಹಾಕಿದ್ದಾರೆ.

ಸೋಮವಾರ ಗುಂಡ್ಲುಪೇಟೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಸತೀಶ್‌ ಜಾರಕಿಹೊಳಿ, “ಮೊನ್ನೆ ಸುದೀಪ್‌ ಕೂಡ ಇಲ್ಲಿ ಪ್ರಚಾರಕ್ಕೆ ಬಂದಿದ್ದರು. ನಾವೆಲ್ಲ ದುಡ್ಡು ಕೊಟ್ಟು ಟಿಕೆಟ್‌ ಖರೀದಿ ಮಾಡಿ ಸುದೀಪ್‌ ಅವರನ್ನು ನೋಡಬೇಕಿತ್ತು. ಆದರೆ, ಈಗ ಪುಕ್ಕಟ್ಟೆಯಾಗಿ ಬಂದು ಹೋಗಿದ್ದಾರೆ. ಅವರು ಅಳಲಿಕ್ಕೆ ದುಡ್ಡು ತೆಗೆದುಕೊಳ್ತಾರೆ. ನಗಲಿಕ್ಕೂ ದುಡ್ಡು ತೆಗೆದುಕೊಳ್ತಾರೆ. ಹೀಗಿರುವಾಗ ಅವರು ನಮ್ಮ (ಜನರ) ಕಷ್ಟಗಳನ್ನು ಯಾವಾಗ ನೋಡಲು ಸಾಧ್ಯ. ಅಂಥವರು ಕೇವಲ ಮೂರು ತಾಸಿನ ನಾಯಕರು ಮಾತ್ರ. ನಾವು ನಿರಂತರವಾಗಿ ನಿಮ್ಮ ಸೇವೆ ಮಾಡುವವರು. ಸುಮ್ಮನೆ ಯಾವುದೋ ಒಬ್ಬ ನಟ ಬಂದ ಕಣ್ಣೀರು ಹಾಕಿ ಹೋದರೆ ಅದು ಪರಿಹಾರ ಅಲ್ಲ” ಎಂದು ತಮ್ಮ ಪಕ್ಷದ ಪರ ಅಭ್ಯರ್ಥಿಗೆ ಮತ ಹಾಕುವಂತೆ ಸ್ಥಳೀಯರಲ್ಲಿ ಮನವಿ ಮಾಡಿದ್ದಾರೆ.

ಸತೀಶ್‌ ಜಾರಕಿಹೊಳಿ ಅವರು ಸುದೀಪ್‌ ಬಗ್ಗೆ ಮಾತನಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತಬ್ಧ ಚಿತ್ರ ಮಾತಾಡಿದಂತೆ, ಶಬ್ದ ಕಣ್ಣಿಗೆ ಕಾಣಿಸುವಂತೆ- ಸಿನೆಮಾದ ತೆರೆಮರೆಯ ತಾತ್ವಿಕತೆ

ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ...

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...